AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌ನಲ್ಲಿ ಯುವತಿ ಬಗ್ಗೆ ಮಹಿಳೆಯಿಂದ ಅವಹೇಳನ ವಿಡಿಯೋ; ಯುವತಿ ಆತ್ಮಹತ್ಯೆ ಯತ್ನ, ಸಾಕ್ಷ್ಯ ನೀಡುವಂತೆ ನೋಟಿಸ್ ಜಾರಿ

ಅನುಷಾ ಉಷಾರಾಣಿ ಇದ್ದ ಮನೆ ಮುಂಭಾಗವೇ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಅನುಷಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಡಿಸ್ಚಾರ್ಜ್ ಕೂಡ ಆಗಿದೆ.

ಫೇಸ್‌ಬುಕ್‌ನಲ್ಲಿ ಯುವತಿ ಬಗ್ಗೆ ಮಹಿಳೆಯಿಂದ ಅವಹೇಳನ ವಿಡಿಯೋ; ಯುವತಿ ಆತ್ಮಹತ್ಯೆ ಯತ್ನ, ಸಾಕ್ಷ್ಯ ನೀಡುವಂತೆ ನೋಟಿಸ್ ಜಾರಿ
ಫೇಸ್‌ಬುಕ್‌ನಲ್ಲಿ ಯುವತಿ ಬಗ್ಗೆ ಮಹಿಳೆಯಿಂದ ಅವಹೇಳನ ವಿಡಿಯೋ; ಯುವತಿ ಆತ್ಮಹತ್ಯೆ ಯತ್ನ
TV9 Web
| Edited By: ಆಯೇಷಾ ಬಾನು|

Updated on: Dec 15, 2021 | 8:16 AM

Share

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಯುವತಿ ಬಗ್ಗೆ ಮಹಿಳೆ ಅವಹೇಳನವಾಗಿ ಮಾತನಾಡಿದ ಹಿನ್ನೆಲೆ ಮಹಿಳೆಯ ಮನೆಯ ಮುಂದೆ ಮಾತ್ರೆ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬನಶಂಕರಿಯ 3ನೇ ಹಂತ ಕತ್ರಿಗುಪ್ಪೆಯಲ್ಲಿ ನಡೆದಿದೆ. ಉಷಾರಾಣಿ ಮನೆ ಮುಂದೆ ಆತ್ಮಹತ್ಯೆ ಯತ್ನ ಮಾಡಿದ ಯುವತಿ ಅನುಷಾ(25). ಡಿಸೆಂಬರ್ 12ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯುವತಿ ತಾಯಿ ಗೀತಾದೇವಿ, ಉಷಾರಾಣಿ ಮತ್ತು ಉಮಾದೇವಿ ಒಂದೇ ಮಹಿಳಾ ಸಂಘಟನೆಯಲ್ಲಿ ಇದ್ದವರು. ವೈಯಕ್ತಿಕ ಕಾರಣಗಳಿಂದಾಗಿ ಈಗ ಬೇರೆ ಬೇರೆಯಾಗಿದ್ದಾರೆ. ಸದ್ಯ ಈಗ ಉಮಾದೇವಿ ಮತ್ತು ಉಷಾರಾಣಿ ಒಟ್ಟಿಗೆ ಇದ್ದಾರೆ. ಗೀತಾದೇವಿ ಮಾತ್ರ ಇಬ‌್ಬರಿಂದಲೂ ದೂರವಾಗಿ ಬೇರೆಯಾಗಿದ್ದಾಳೆ. ಇವರುಗಳ ಮಧ್ಯೆ ಆಗಾಗ ಆರೋಪ-ಪ್ರತ್ಯಾರೋಪದ ಫೇಸ್ ಬುಕ್ ವಿಡಿಯೋ ವಾರ್ ನಡೆಯುತ್ತಲೇ ಇರ್ತಿತ್ತು.

ಇತ್ತೀಚೆಗೆ ಉಷಾರಾಣಿ, ಅನುಷಾ ತಾಯಿ ಗೀತಾದೇವಿ ವಿರುದ್ಧ ಅವಹೇಳನ ವಿಡಿಯೋ ಮಾಡಿ ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದಳು. ಈ ವಿಡಿಯೋವನ್ನು ಉಮಾದೇವಿ ಮಾಡಿಸಿದ್ದಾಳೆಂದು ಯುವತಿ ತಾಯಿ ಗೀತಾದೇವಿ ಆರೋಪಿಸಿದ್ದಾರೆ. ಅಲ್ಲದೇ ಯುವತಿ ಅನುಷಾ ಬಗ್ಗೆಯೂ ವಿಡಿಯೋದಲ್ಲಿ ಅವಹೇಳನಕಾರಿಯಾಗಿ ಮಾತನಾಡಲಾಗಿದೆ. “ಅನುಷಾ ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಮೊಂಡಿದ್ಳು” “ಕಾಲು ಹಿಡಿದು ಬಚಾವಾಗಿ ಬಂದಿದ್ದಾಳೆ, ಮನೆಯನ್ನೇ ಲಾಡ್ಜ್ ಅನ್ನಾಗಿ ಮಾಡಿಕೊಂಡಿದ್ದೀಯಾ ಎಂದು ವಿಡಿಯೋದಲ್ಲಿ ಉಷಾರಾಣಿ ಕೇಳಿದ್ದಾಳೆ.” ಈ ಹಿನ್ನೆಲೆ ಇದನ್ನು ಪ್ರಶ್ನಿಸಲು ಉಷಾರಾಣಿಯ ಕತ್ರಿಗುಪ್ಪೆ ಮನೆ ಬಳಿ ಅನುಷಾ ಬಂದಿದ್ದಾಳೆ. ಆದ್ರೆ ಅಲ್ಲಿಯ ಸ್ಥಳೀಯರು ಉಷಾರಾಣಿ ಮನೆಯಲ್ಲಿ ಇಲ್ಲ, ಮನೆ ಖಾಲಿ ಮಾಡಿದ್ದಾಳೆಂದು ತಿಳಿಸಿದ್ದಾರೆ.

ಬಳಿಕ ಮತ್ತೆ ಸ್ನೇಹಿತರಿಗೆ, ನೆರೆಹೊರೆಯವರಿಗೆ ಹೇಗೆ ಮುಖ ತೋರಿಸಲಿ ಎಂದು ಯೋಚಿಸಿದ್ದ ಅನುಷಾ ಉಷಾರಾಣಿ ಇದ್ದ ಮನೆ ಮುಂಭಾಗವೇ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಅನುಷಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಡಿಸ್ಚಾರ್ಜ್ ಕೂಡ ಆಗಿದೆ. ಘಟನೆ ಸಂಬಂಧ ಉಮಾದೇವಿ, ಉಷಾರಾಣಿ, ಶಿವಣ್ಣ, ಚಾಯಾದೇವಿ, ಶರ್ಮಾ ಸೇರಿದಂತೆ ಐವರ ವಿರುದ್ಧ ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಾಗಿದೆ. ಅನುಷಾ ತಾಯಿ ಗೀತಾದೇವಿ ಮೇಲೂ ಹಲವು ದೂರುಗಳಿವೆ. ಉಮಾದೇವಿ ಮತ್ತು ಉಷಾರಾಣಿ ವಿರುದ್ಧವೂ ವಿವಿಧ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ವೈಯಕ್ತಿಕ ಕಾರಣಗಳಿಂದ ದೂರು ಪ್ರತಿ ದೂರು ನೀಡಿರುವ ಶಂಕೆ ವ್ಯಕ್ತವಾಗಿದೆ. ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಗೆ ಸಿ.ಕೆ.ಅಚ್ಚುಕಟ್ಟು ಪೊಲೀಸರು ನೋಟಿಸ್ ಜಾರಿ ಮಾಡಿದ್ದು ಸಾಕ್ಷ್ಯ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Petrol Price Today: ಪ್ರಮುಖ ನಗರಗಳಲ್ಲಿ ಇಂದು ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ