AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪಬ್​ ಮುಂದೆ ಯುವಕ ಯುವತಿಯರ ಗಲಾಟೆ: ವಿಡಿಯೋ ವೈರಲ್

ಬೆಂಗಳೂರು ನಗರದ ಪಬ್‌ ಒಂದರಲ್ಲಿ ಯುವಕ-ಯುವತಿಯರ ಮಧ್ಯೆ ಜೋರು ಗಲಾಟೆ ನಡೆದಿದೆ. ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿರುವ ಬರ್ಗರ್‌ ಸೈನೆರ್‌ (Burger Seigneur) ಪಬ್ ಎದುರು ಯುವಕ-ಯುವತಿಯರ ಮಧ್ಯೆ ಗಲಾಟೆ ನಡೆದಿದ್ದು, ಈ ವಿಡಿಯೊ ಈಗ ವೈರಲ್‌ (Viral Video) ಆಗಿದೆ.

ಬೆಂಗಳೂರಿನ ಪಬ್​ ಮುಂದೆ ಯುವಕ ಯುವತಿಯರ ಗಲಾಟೆ: ವಿಡಿಯೋ ವೈರಲ್
Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on:Oct 22, 2023 | 2:48 PM

Share

ಬೆಂಗಳೂರು, (ಅಕ್ಟೋಬರ್ 22): ಡ್ರಂಕನ್ & ಡ್ಯಾಡಿ ಪಬ್ ಮುಂದೆ ಯುವತಿಯರ ಹುಚ್ಚಾಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಪಬ್​ವೊಂದರ ಮುಂದೆ ಮತ್ತೊಂದು ಗಲಾಟೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿರುವ ಬರ್ಗರ್‌ ಸೈನೆರ್‌ (Burger Seigneur) ಪಬ್ ಎದುರು ಯುವಕ-ಯುವತಿಯರ ಮಧ್ಯೆ ಗಲಾಟೆ ನಡೆದಿದ್ದು, ಈ ವಿಡಿಯೊ ಈಗ ವೈರಲ್‌ ಆಗಿದೆ. ಕಾಲೇಜು ಯುವಕರು ಹಾಗೂ ಯುವತಿಯರು ರಾತ್ರಿ ಪಬ್‌ನಲ್ಲಿ ಪಾರ್ಟಿ ಮುಗಿಸಿಕೊಂಡು ಹೋಗುವಾಗ ಈ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

ಮೊದಲು ಕೆಲ ಯುವಕರು ಯುವತಿಯರಿಗೆ ಅಶ್ಲೀಲ ಪದಗಳಿಂದ ನಿಂದಿಸಿದೆ ಎನ್ನಲಾಗಿದೆ.. ಇದರಿಂದ ಕೆರಳಿದ ಯುವತಿಯರು, ಯುವಕರ ಮೇಲೆ ಮುಗಿಬಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಇದೇ ವೇಳೆ ಯುವತಿಯರ ಗೆಳೆಯರು ಹಾಗೂ ಚುಡಾಯಿಸಿದ ಯುವಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿದೆ. ಯುವತಿಯರು ಕೂಡ ಯುವಕರನ್ನು ತಳ್ಳುವ ದೃಶ್ಯಗಳು ವಿಡಿಯೋನಲ್ಲಿ ಸೆರೆಯಾಗಿವೆ. ರಸ್ತೆ ಬಳಿಯೇ ಎರಡೂ ಗುಂಪುಗಳು ಹೊಡೆದಾಡಿಕೊಂಡಿದ್ದು, ಕುಡಿದ ಮತ್ತಿನಲ್ಲಿ ರಂಪಾಟ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನಿಮ್ಮಲ್ಲಿ ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ: ಕಾಂಗ್ರೆಸ್​ ಶಾಸಕನ ಮಾತು ವೈರಲ್

ಯುವಕನೊಬ್ಬ ಗಾರ್ಡನ್‌ ಏರಿಯಾದಲ್ಲಿ ಬಿದ್ದಿರುವ ದೃಶ್ಯವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕ ಹಾಗೂ ಯುವತಿಯರ ರಂಪಾಟದ ವಿಡಿಯೊ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ತಡರಾತ್ರಿವರೆಗೆ ಪಾರ್ಟಿ ಮಾಡಿ, ಕುಡಿದ ಮತ್ತಿನಲ್ಲಿ ಹೀಗೆ ಮಾಡುವುದು ಅಸಭ್ಯತನದ ಪರಮಾವಧಿ ಎಂದು ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ಯುವತಿಯರನ್ನು ಅಸಭ್ಯ ಪದಗಳಿಂದ ನಿಂದಿಸಿರುವ ಯುವಕರ ನಡೆಯ ಕುರಿತು ಕೂಡ ಆಕ್ರೋಶ ವ್ಯಕ್ತವಾಗಿದೆ.

ಕೊನೆಗೆ ಪಬ್‌ ಸಿಬ್ಬಂದಿ ಯುವಕ-ಯುವತಿಯರ ನಡುವಿನ ಜಗಳ ಬಿಡಿಸಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Published On - 2:46 pm, Sun, 22 October 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ