AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First: ನಾವು ತಗೊಂಡಿದ್ದು ಫ್ಲೈಟ್ ಟಿಕೆಟ್​, ಸ್ವಲ್ಪನಾದ್ರೂ ಮರ್ಯಾದೆ ಬೇಡ್ವಾ: ಪ್ರಯಾಣಿಕರನ್ನು ಬಿಟ್ಟು ಹಾರಿದ ಗೋ ಫಸ್ಟ್​ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ

Bengaluru Airport: ಬೆಂಗಳೂರು-ದೆಹಲಿ ಮಾರ್ಗದ ವಿಮಾನವು ಪ್ರಯಾಣಿಕರು ಹತ್ತುವ ಮೊದಲೇ ಹಾರಾಟ ಅರಂಭಿಸಿತು

Go First: ನಾವು ತಗೊಂಡಿದ್ದು ಫ್ಲೈಟ್ ಟಿಕೆಟ್​, ಸ್ವಲ್ಪನಾದ್ರೂ ಮರ್ಯಾದೆ ಬೇಡ್ವಾ: ಪ್ರಯಾಣಿಕರನ್ನು ಬಿಟ್ಟು ಹಾರಿದ ಗೋ ಫಸ್ಟ್​ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ
ಗೋ ಫಸ್ಟ್ ವಿಮಾನ (ಸಂಗ್ರಹ ಚಿತ್ರ)Image Credit source: Twitter/@GoFirstairways
TV9 Web
| Edited By: |

Updated on:Jan 10, 2023 | 8:58 AM

Share

ಬೆಂಗಳೂರು: ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’​ (Go First) ಕಂಪನಿಯ ವಿಮಾನವು ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ (KIAL) ಬಿಟ್ಟು ಹಾರಿದೆ. ಈ ಸಂಗತಿಯು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ‘ಈ ಕಂಪನಿಯ ಸಿಬ್ಬಂದಿ ಯಾವ ರೀತಿ ಕೆಲಸ ಮಾಡುತ್ತಿದ್ದಾರೆ? ಕೊನೆಯ ಕ್ಷಣದ ತಪಾಸಣೆ ಎಂಬುದು ಇರುವುದಿಲ್ಲವೇ? ತೂಕಡಿಸುತ್ತಾ ವಿಮಾನ ಹಾರಿಸುತ್ತಾರಾ’ ಎಂದೆಲ್ಲಾ ಪ್ರಯಾಣಿಕರು ಪ್ರಶ್ನಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋ ಫಸ್ಟ್ ಈವರೆಗೆ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪ್ರಯಾಣಿಕರಿಗೆ ಆಗಿರುವ ತೊಂದರೆಗೆ ವಿಷಾದ ವ್ಯಕ್ತಪಡಿಸಿದೆ.

ಸಕಾಲಕ್ಕೆ ವಿಮಾನ ನಿಲ್ದಾಣ ತಲುಪಿದ್ದೆವು. ಗೋ ಫಸ್ಟ್ ಕಂಪನಿಯ G8-116 ವಿಮಾನದಲ್ಲಿ ದೆಹಲಿಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದೆವು. ಬಸ್ಸುಗಳಲ್ಲಿ ನಮ್ಮನ್ನು ವಿಮಾನ ನಿಂತಿದ್ದ ಸ್ಥಳಕ್ಕೆ ಕರೆದೊಯ್ಯಲಾಯಿತು. ಮೊದಲ ಬಸ್ಸಿನಲ್ಲಿದ್ದ ಪ್ರಯಾಣಿಕರು ವಿಮಾನ ಹತ್ತಿದ ತಕ್ಷಣವೇ ವಿಮಾನವೂ ಹಾರಾಟ ಆರಂಭಿಸಿತು. ಇದು ಸೋಮವಾರ ಮುಂಜಾನೆ 6.40ಕ್ಕೆ ದೆಹಲಿಯತ್ತ ಹೊರಟಿತು ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ.

‘ಬೆಂಗಳೂರು-ದೆಹಲಿ ಮಾರ್ಗದ ವಿಮಾನವು ಪ್ರಯಾಣಿಕರು ಹತ್ತುವ ಮೊದಲೇ ಹಾರಾಟ ಅರಂಭಿಸಿತು! ಒಂದು ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದ ಸಮೀಪವೇ ಬಂದಿದ್ದರು. ಕನಿಷ್ಠ ತಪಾಸಣೆಗಳೂ ಇಲ್ಲದೆ ಇವರು ಕೆಲಸ ಮಾಡುತ್ತಿದ್ದಾರಾ’ ಎಂದು ಸತೀಶ್ ಕುಮಾರ್ ಎನ್ನುವ ಪ್ರಯಾಣಿಕರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಅನುಭವ ಹಂಚಿಕೊಂಡಿರುವ ಶ್ರೇಯಾ ಸಿನ್ಹಾ ಹೆಸರಿನ ಮತ್ತೊಬ್ಬ ಪ್ರಯಾಣಿಕರು, ‘ನಾನು ಹತ್ತಬೇಕಿದ್ದ ವಿಮಾನವು 6.:30ಕ್ಕೆ ಹಾರಾಟ ಆರಂಭಿಸಿತು. ನಾನು ಮತ್ತು ಇತರ ಪ್ರಯಾಣಿಕರು 5:35ಕ್ಕೆ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸಂಸ್ಥೆಯ ಬಸ್ ಹತ್ತಿದ್ದೆವು. ಬಸ್ ಚಾಲಕನ ಮೇಲೆ ಒತ್ತಡ ಹೇರಿ ಬಸ್ ನಿಲ್ಲಿಸಲಾಯಿತು. ವಿಮಾನವು ನಾವು ಹತ್ತುವ ಮೊದಲೇ ಹಾರಿಬಿಟ್ಟಿತ್ತು. ಇದು ನಿರ್ಲಕ್ಷ್ಯದ ಪರಮಾವಧಿ’ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಗೋ ಫಸ್ಟ್ ಕಂಪನಿಯಿಂದ ವಿವರಣೆ ಕೇಳಲಾಗಿದೆ. ತಪ್ಪಾಗಿರುವುದು ದೃಢಪಟ್ಟರೆ ನಿಯಮಗಳ ಪ್ರಕಾರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (Directorate General of Civil Aviation – DGCA) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Moscow-Goa flight: ಬಾಂಬ್ ಬೆದರಿಕೆ ಕರೆ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದ ಮಾಸ್ಕೋ-ಗೋವಾ ಅಂತಾರಾಷ್ಟ್ರೀಯ ವಿಮಾನ

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Tue, 10 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ