AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First: ನಾವು ತಗೊಂಡಿದ್ದು ಫ್ಲೈಟ್ ಟಿಕೆಟ್​, ಸ್ವಲ್ಪನಾದ್ರೂ ಮರ್ಯಾದೆ ಬೇಡ್ವಾ: ಪ್ರಯಾಣಿಕರನ್ನು ಬಿಟ್ಟು ಹಾರಿದ ಗೋ ಫಸ್ಟ್​ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ

Bengaluru Airport: ಬೆಂಗಳೂರು-ದೆಹಲಿ ಮಾರ್ಗದ ವಿಮಾನವು ಪ್ರಯಾಣಿಕರು ಹತ್ತುವ ಮೊದಲೇ ಹಾರಾಟ ಅರಂಭಿಸಿತು

Go First: ನಾವು ತಗೊಂಡಿದ್ದು ಫ್ಲೈಟ್ ಟಿಕೆಟ್​, ಸ್ವಲ್ಪನಾದ್ರೂ ಮರ್ಯಾದೆ ಬೇಡ್ವಾ: ಪ್ರಯಾಣಿಕರನ್ನು ಬಿಟ್ಟು ಹಾರಿದ ಗೋ ಫಸ್ಟ್​ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ
ಗೋ ಫಸ್ಟ್ ವಿಮಾನ (ಸಂಗ್ರಹ ಚಿತ್ರ)Image Credit source: Twitter/@GoFirstairways
TV9 Web
| Edited By: |

Updated on:Jan 10, 2023 | 8:58 AM

Share

ಬೆಂಗಳೂರು: ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’​ (Go First) ಕಂಪನಿಯ ವಿಮಾನವು ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ (KIAL) ಬಿಟ್ಟು ಹಾರಿದೆ. ಈ ಸಂಗತಿಯು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ‘ಈ ಕಂಪನಿಯ ಸಿಬ್ಬಂದಿ ಯಾವ ರೀತಿ ಕೆಲಸ ಮಾಡುತ್ತಿದ್ದಾರೆ? ಕೊನೆಯ ಕ್ಷಣದ ತಪಾಸಣೆ ಎಂಬುದು ಇರುವುದಿಲ್ಲವೇ? ತೂಕಡಿಸುತ್ತಾ ವಿಮಾನ ಹಾರಿಸುತ್ತಾರಾ’ ಎಂದೆಲ್ಲಾ ಪ್ರಯಾಣಿಕರು ಪ್ರಶ್ನಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋ ಫಸ್ಟ್ ಈವರೆಗೆ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪ್ರಯಾಣಿಕರಿಗೆ ಆಗಿರುವ ತೊಂದರೆಗೆ ವಿಷಾದ ವ್ಯಕ್ತಪಡಿಸಿದೆ.

ಸಕಾಲಕ್ಕೆ ವಿಮಾನ ನಿಲ್ದಾಣ ತಲುಪಿದ್ದೆವು. ಗೋ ಫಸ್ಟ್ ಕಂಪನಿಯ G8-116 ವಿಮಾನದಲ್ಲಿ ದೆಹಲಿಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದೆವು. ಬಸ್ಸುಗಳಲ್ಲಿ ನಮ್ಮನ್ನು ವಿಮಾನ ನಿಂತಿದ್ದ ಸ್ಥಳಕ್ಕೆ ಕರೆದೊಯ್ಯಲಾಯಿತು. ಮೊದಲ ಬಸ್ಸಿನಲ್ಲಿದ್ದ ಪ್ರಯಾಣಿಕರು ವಿಮಾನ ಹತ್ತಿದ ತಕ್ಷಣವೇ ವಿಮಾನವೂ ಹಾರಾಟ ಆರಂಭಿಸಿತು. ಇದು ಸೋಮವಾರ ಮುಂಜಾನೆ 6.40ಕ್ಕೆ ದೆಹಲಿಯತ್ತ ಹೊರಟಿತು ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ.

‘ಬೆಂಗಳೂರು-ದೆಹಲಿ ಮಾರ್ಗದ ವಿಮಾನವು ಪ್ರಯಾಣಿಕರು ಹತ್ತುವ ಮೊದಲೇ ಹಾರಾಟ ಅರಂಭಿಸಿತು! ಒಂದು ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದ ಸಮೀಪವೇ ಬಂದಿದ್ದರು. ಕನಿಷ್ಠ ತಪಾಸಣೆಗಳೂ ಇಲ್ಲದೆ ಇವರು ಕೆಲಸ ಮಾಡುತ್ತಿದ್ದಾರಾ’ ಎಂದು ಸತೀಶ್ ಕುಮಾರ್ ಎನ್ನುವ ಪ್ರಯಾಣಿಕರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಅನುಭವ ಹಂಚಿಕೊಂಡಿರುವ ಶ್ರೇಯಾ ಸಿನ್ಹಾ ಹೆಸರಿನ ಮತ್ತೊಬ್ಬ ಪ್ರಯಾಣಿಕರು, ‘ನಾನು ಹತ್ತಬೇಕಿದ್ದ ವಿಮಾನವು 6.:30ಕ್ಕೆ ಹಾರಾಟ ಆರಂಭಿಸಿತು. ನಾನು ಮತ್ತು ಇತರ ಪ್ರಯಾಣಿಕರು 5:35ಕ್ಕೆ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸಂಸ್ಥೆಯ ಬಸ್ ಹತ್ತಿದ್ದೆವು. ಬಸ್ ಚಾಲಕನ ಮೇಲೆ ಒತ್ತಡ ಹೇರಿ ಬಸ್ ನಿಲ್ಲಿಸಲಾಯಿತು. ವಿಮಾನವು ನಾವು ಹತ್ತುವ ಮೊದಲೇ ಹಾರಿಬಿಟ್ಟಿತ್ತು. ಇದು ನಿರ್ಲಕ್ಷ್ಯದ ಪರಮಾವಧಿ’ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಗೋ ಫಸ್ಟ್ ಕಂಪನಿಯಿಂದ ವಿವರಣೆ ಕೇಳಲಾಗಿದೆ. ತಪ್ಪಾಗಿರುವುದು ದೃಢಪಟ್ಟರೆ ನಿಯಮಗಳ ಪ್ರಕಾರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (Directorate General of Civil Aviation – DGCA) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Moscow-Goa flight: ಬಾಂಬ್ ಬೆದರಿಕೆ ಕರೆ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದ ಮಾಸ್ಕೋ-ಗೋವಾ ಅಂತಾರಾಷ್ಟ್ರೀಯ ವಿಮಾನ

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Tue, 10 January 23

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ