AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಭೀಕರ ಅಗ್ನಿ ಅವಘಡ: ನೆರೆ ರಾಜ್ಯದ ಘೋರ ದುರಂತದಲ್ಲಿ ಕನ್ನಡಿಗನೂ ಬಲಿ!

ನೆರೆ ರಾಜ್ಯ ಗೋವಾ ಕ್ಲಬ್​ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡದಲ್ಲಿ ಬರೋಬ್ಬರಿ 25 ಜನರು ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನ ನಿವಾಸಿ ಕೂಡ ಮೃತಪಟ್ಟಿದ್ದಾರೆ. ನಿನ್ನೆ ಐವರು ಸ್ನೇಹಿತರ ಜೊತೆ ಗೋವಾಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಇಂದು ರಾತ್ರಿಯೇ ಮೃತದೇಹ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.

ಗೋವಾದಲ್ಲಿ ಭೀಕರ ಅಗ್ನಿ ಅವಘಡ: ನೆರೆ ರಾಜ್ಯದ ಘೋರ ದುರಂತದಲ್ಲಿ ಕನ್ನಡಿಗನೂ ಬಲಿ!
ಅಗ್ನಿ ದುರಂತ (ಸಂಗ್ರಹ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 07, 2025 | 9:37 PM

Share

ಬೆಂಗಳೂರು, ಡಿಸೆಂಬರ್​ 09: ಗೋವಾದಲ್ಲಿ ನಡೆದಿರುವ ಭೀಕರ ಅಗ್ನಿ ದುರಂತದಲ್ಲಿ (Fire accident) ಒಬ್ರಲ್ಲ, ಇಬ್ರಲ್ಲ ಒಟ್ಟು 25 ಮಂದಿ ಸಜೀವ ದಹನವಾಗಿದ್ದಾರೆ. ಆ 25 ಜನರ ಪೈಕಿ ಕರ್ನಾಟಕದ ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾರೆ. ಬೆಂಗಳೂರಿನ (bangaluru) ಥಣಿಸಂದ್ರದ ಹೆಗಡೆನಗರದ ನಿವಾಸಿ ಇಶಾಕ್(25) ಮೃತ ದುರ್ದೈವಿ. ಸದ್ಯ ಗೋವಾದಲ್ಲಿ ಮೃತದೇಹದ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು, ಕುಟುಂಬಸ್ಥರು ರಾತ್ರಿಯೇ ಬೆಂಗಳೂರಿಗೆ ತರುವ ಪ್ರಯತ್ನದಲ್ಲಿದ್ದಾರೆ.

ಮೊಬೈಲ್‌ ತರಲು ಹೋಗಿ ಪ್ರಾಣ ಬಿಟ್ಟ ಇಸಾಕ್‌!

ಈ ಘೋರದಲ್ಲಿ ಬೆಂಗಳೂರು ಮೂಲದ ಇಸಾಕ್ ಕೂಡ ಪ್ರಾಣ ಬಿಟ್ಟಿದ್ದಾರೆ. ನಾಲ್ವರು ಸ್ನೇಹಿತರ ಜೊತೆ ಇಸಾಕ್‌ ನಿನ್ನೆ ಮಧ್ಯಾಹ್ನ ಗೋವಾ ಟ್ರಿಪ್‌ಗೆ ಹೋಗಿದ್ದರು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಫ್ರೆಂಡ್ಸ್‌ ಜತೆ ಹೊರ ಬಂದಿದ್ದರು. ಆದರೆ ಮೊಬೈಲ್‌ ಟೇಬಲ್‌ ಮೇಲೆ ಬಿಟ್ಟು ಬಂದಿದ್ದೇನೆ ಅಂತಾ ಮತ್ತೆ ವಾಪಸ್ ಆಗಿದ್ದು, ಈ ವೇಳೆ ಬೆಂಕಿ ಕೆನ್ನಾಲಗೆಗೆ ಸಿಲುಕಿ ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ: Video: ಗೋವಾ ಕ್ಲಬ್​ನಲ್ಲಿ ಭೀಕರ ಅಗ್ನಿ ಅವಘಡ, ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ವಿಡಿಯೋ ಇಲ್ಲಿದೆ

ಕ್ರಿಸ್‌ಮಸ್‌ ಬರುತ್ತಿದೆ. ಹೊಸ ವರ್ಷ ಕೂಡ ಎದುರಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗೋವಾ ಪ್ರವಾಸಿಗರಿಂದಲೇ ಗಿಜಿಗಿಜಿ ಎನ್ನುತ್ತೆ. ಅದರಲ್ಲೂ ವೀಕೆಂಡ್‌ಗಳಲ್ಲಂಥೂ ಪ್ರವಾಸಿಗರ ಸಾಗರವೇ ಕಾಣುತ್ತೆ. ವೀಕೆಂಡ್ ಅಂತಾ ನಿನ್ನೆ ಕೂಡ ಗೋವಾಗೆ ಪ್ರವಾಸಿಗರ ದಂಡೇ ಹರಿದು ಬಂದಿತ್ತು. ಉತ್ತರ ಗೋವಾದ ಅರ್ಪೋರಾದ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲೂ ಡಿಜೆ ನೈಟ್‌ ಆಯೋಜನೆ ಆಗಿತ್ತು.

ಇದನ್ನೂ ಓದಿ: Video: ಬೆಲ್ಲಿ ನೃತ್ಯ ನಡೀತಿತ್ತು , ಗೋವಾ ನೈಟ್​ಕ್ಲಬ್ ಒಳಗೆ ಬೆಂಕಿ ಹೊತ್ತಿಕೊಳ್ಳುವ ಸಮಯದ ವಿಡಿಯೋ

ರಾತ್ರಿ 10 ಗಂಟೆಯಿಂದಲೇ ಎಲ್ರೂ ಕುಡಿದು, ಕುಣಿದು ಕುಪ್ಪಳಿಸುತ್ತಿದ್ದರು. ಹೀಗೆ ಪಾರ್ಟಿ ಸಾಗಿವಾಗಿರುವಾಗಲೇ ರಾತ್ರಿ 12.30 ರ ಸುಮಾರಿನಲ್ಲಿ ವೇದಿಕೆ ಮೇಲೆ ಹೊಗೆ ಕಾಣಿಸಿಕೊಂಡಿತ್ತು. ಸಣ್ಣದಾಗಿ ಬೆಂಕಿಯೂ ಹೊತ್ತಿತ್ತು. ನೋಡ ನೋಡ್ತಿದ್ದಂತೆ ಇಡೀ ಕ್ಲಬ್‌ಗೆ ಬೆಂಕಿ ಆವರಿಸಿದ್ದು, 25 ಮಂದಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. 4 ಜನರು ಪ್ರವಾಸಿಗರು, 14 ಜನ ಮೃತಪಟ್ಟಿರುವುದು ದೃಢವಾಗಿದ್ದು, ಇನ್ನೂ 7 ಜನರ ಗುರುತು ಪತ್ತೆ ಆಗಿಲ್ಲ. ನೆರೆ ರಾಜ್ಯದ ಘೋರ ಅಗ್ನಿ ಅವಘದಲ್ಲಿ ಕನ್ನಡಿಗನೂ ಬಲಿ ಆಗಿರುವುದು ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ