AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಇಂದೂ ಏರಿದೆ ಚಿನ್ನ, ಬೆಳ್ಳಿ ದರ; ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿ ದರ 73,300 ರೂ

Gold Price Today: ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,300 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ ದರವನ್ನು ಗಮನಿಸಿದಾಗ 10 ಗ್ರಾಂ ಚಿನ್ನದ ದರ 48,330 ರೂಪಾಯಿ ಆಗಿದೆ.

Gold Rate Today: ಇಂದೂ ಏರಿದೆ ಚಿನ್ನ, ಬೆಳ್ಳಿ ದರ; ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿ ದರ 73,300 ರೂ
ಚಿನ್ನದ ಬಳೆಗಳು
shruti hegde
| Edited By: |

Updated on: Apr 30, 2021 | 8:34 AM

Share

ಬೆಂಗಳೂರು: ನಗರದಲ್ಲಿ ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ. ಮದುವೆ ಸಮಾರಂಭಗಳು ಎದುರಿಗಿದ್ದು, ಕೊರೊನಾ ಹಾವಳಿಯಿಂದಾಗಿ ಲಾಕ್​ಡೌನ್​ ಜಾರಿಯಲ್ಲಿದೆ. ಹೀಗಾಗಿ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಕಡಿಮೆ ಪ್ರಮಾಣದ ಜನರಿಗೆ ಅವಕಾಶ ನೀಡಿ ಮದುವೆ ಸಮಾರಂಭಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಮದುವೆ ಅಂದಾಕ್ಷಣ ಚಿನ್ನ ಖರೀದಿಸಲೇ ಬೇಕು. ಹಾಗಿದ್ದಾಗ ಬೆಂಗಳೂರು ನಗರ ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬರದ ವಿವರವನ್ನು ನೋಡೋಣ. ಅದೇ ರೀತಿ ಬೆಳ್ಳಿ ದರವನ್ನು ಗಮನಿಸಿದಾಗ ಇಂದು ಭಾರೀ ಪ್ರಮಾಣದ ಏರಿಕೆ ಕಂಡಿದೆ. 1ಕೆಜಿ ಬೆಳ್ಳಿ ದರ ಇಂದು 73,300 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 5,500 ರೂಪಾಯಿ ಏರಿಕೆ ಕಂಡಿದೆ.

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,300 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ ದರವನ್ನು ಗಮನಿಸಿದಾಗ 10 ಗ್ರಾಂ ಚಿನ್ನದ ದರ 48,330 ರೂಪಾಯಿ ಆಗಿದೆ. ದೈನಂದಿನ ದರ ಏರಿಕೆಯಲ್ಲಿ 1,700 ರೂಪಾಯಿ ಏರಿಕೆ ಕಂಡಿದೆ. ನಗರದಲ್ಲಿ 1ಕೆಜಿ ಬೆಳ್ಳಿ ದರ ಇಂದು 73,300 ರೂಪಾಯಿಗೆ ಏರಿಕೆಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 5,500 ರೂಪಾಯಿ ಏರಿಕೆ ಕಂಡಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ಮಾಹಿತಿ ಚೆನ್ನೈ ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,380 ರೂಪಾಯಿಗೆ ಮಾರಾಟವಾಗಿತ್ತು. ಇಂದು ಕೊಂಚ ದರ ಕುಸಿತ ಕಂಡಿದ್ದು, 44,370 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 48,400 ರೂಪಾಯಿಗೆ ಮಾರಾಟವಾಗಿತ್ತು. ದರ ಇಳಿಕೆಯ ನಂತರ ಇಂದು 48,390 ರೂಪಾಯಿ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿಯೂ ಕೊಂಚ ಇಳಿಕೆ ಕಂಡಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 73,500 ರೂಪಾಯಿಗೆ ಮಾರಾಟವಾಗಿದೆ. ಇಂದು 200 ರೂಪಾಯಿ ಇಳಿಕೆಯ ನಂತರ 73,300 ರೂಪಾಯಿ ಆಗಿದೆ.

ದೆಹಲಿಯಲ್ಲಿ ಚಿನ್ನದ ದರ ದೆಹಲಿಯಲ್ಲಿ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,690 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಇಳಿಕೆಯ ನಂತರ 45,680 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 49,870 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಇಳಿಕೆಯ ನಂತರದಲ್ಲಿ 49,860 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ದರ ಇಂದು ಕೊಂಚ ಏರಿಕೆಯಾಗಿದ್ದು, 1ಕೆಜಿ ಬೆಳ್ಳಿ ದರ ನಿನ್ನೆ 67,800 ರೂಪಾಯಿ ಮಾರಾಟವಾಗಿತ್ತು, ಇಂದು 800 ರೂಪಾಯಿ ಏರಿಕೆಯ ನಂತರ 68,600 ರೂಪಾಯಿ ಆಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರದ ಮಾಹಿತಿ ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 44,300 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 170 ರೂಪಾಯಿ ಏರಿಕೆ ಕಂಡಿದ್ದು, 48,330 ರೂಪಾಯಿ ಆಗಿದೆ. ನಗರದಲ್ಲಿ ಬೆಳ್ಳಿ ದರ ಕೊಂಚ ಇಳಿಕೆ ಕಂಡಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 73,500 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಕುಸಿತದ ನಂತರ 73,300 ರೂಪಾಯಿಗೆ ಇಳಿಕೆಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಚಿನ್ನದ ದರ ವಾಣಿಜ್ಯ ನಗರಿ ಮುಂಬೈನಲ್ಲಿ ಬೆಳ್ಳಿ ದರ ಏರಿಕೆ ಕಂಡಿದ್ದು, 1 ಕೆಜಿ ಬೆಳ್ಳಿ ದರ ನಿನ್ನೆ 67,800 ರೂಪಾಯಿಗೆ ಮಾರಾಟವಾಗಿತ್ತು. ಇಂದು 800 ರೂಪಾಯಿ ಏರಿಕೆಯ ನಂತರ 68,600 ರೂಪಾಯಿಗೆ ಏರಿಕೆಯಾಗಿದೆ. ಚಿನ್ನದ ದರವನ್ನು ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,490 ರೂಪಾಯಿಗೆ ಮಾರಾಟವಾಗಿದೆ. ಇಂದು ಕೊಂಚ ಪ್ರಮಾಣದಲ್ಲಿ ದರ ಇಳಿಕೆ ಕಂಡಿದೆ. ನಿನ್ನೆ 44,490 ರೂಪಾಯಿಗೆ ಇದ್ದ ಚಿನ್ನದ ದರ ಇಂದು 44,480 ರೂಪಾಯಿಗೆ ಇಳಿದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,490 ರೂಪಾಯಿ ಇದ್ದು, ಇಂದು ದರ 45,480 ರೂಪಾಯಿಗೆ ಇಳಿಕೆಯಾಗಿದೆ.

ಇದನ್ನೂ ಓದಿ: Gold Rate Today: ಏಪ್ರಿಲ್​ ತಿಂಗಳಿನಲ್ಲಿ ಚಿನ್ನ, ಬೆಳ್ಳಿ ದರ ಏರಿಳಿತ; ಬೆಂಗಳೂರು ಸೇರಿ ವಿವಿಧ ನಗರಗಳ ಚಿನ್ನದ ದರ ಮಾಹಿತಿ ಇಲ್ಲಿದೆ

(Gold and Silver Rate Today On 2021 April 30 Bangalore Chennai Hyderabad Mumbai)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ