Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ವಂಚನೆ ಕೇಸ್! ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು

ವಾರಾಹಿ ಜ್ಯುವೆಲ್ಲರಿ ಮಾಲಕಿ ವನಿತಾಗೆ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ, ಹರೀಶ್​ಗೆ ಜನವರಿ 6ರವರೆಗೂ ಪೊಲೀಸ್ ಕಸ್ಟಡಿ ನೀಡಿ 4ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮಧ್ಯೆ ಐಶ್ವರ್ಯಾ ಗೌಡ ನನ್ನ ಹೆಸರು ದುರುಪಯೋಗಪಡಿಸಿಕೊಂಡಿದ್ದಾರೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಪತ್ರ ಬರೆಯುವ ಮೂಲಕ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಚಿನ್ನ ವಂಚನೆ ಕೇಸ್! ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು
ಚಿನ್ನ ವಂಚನೆ ಕೇಸ್! ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2024 | 7:36 PM

ಬೆಂಗಳೂರು, ಡಿಸೆಂಬರ್ 30: ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿ ಶಾಪ್‌ ಚಿನ್ನ ಅಂಗಡಿ ಮಾಲಕಿ ವನಿತಾ ಐತಾಳ್​ಗೆ ಐಶ್ವರ್ಯಾಗೌಡ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣ ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿದೆ. ಇದೀಗ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈ ಮಧ್ಯೆ ಐಶ್ವರ್ಯಾ ಗೌಡ ನನ್ನ ಹೆಸರು ದುರುಪಯೋಗಪಡಿಸಿಕೊಂಡಿದ್ದಾರೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಜಿ ಸಂಸದ ಡಿಕೆ.ಸುರೇಶ್ (DK Suresh) ಪತ್ರ ಬರೆದಿದ್ದಾರೆ.

ಡಿಕೆ ಸುರೇಶ್​ ದೂರಿನಲ್ಲೇನಿದೆ?

ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನ ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ.

ಇದನ್ನೂ ಓದಿ: ಜಾಮೂನ್​ಗೆ ಮೈಸೂರು ಪಾಕ್​ ಟಾರ್ಗೆಟ್​: ಶ್ವೇತಾಳನ್ನ ಹನಿಟ್ರ್ಯಾಪ್ ಗೆ ಬಳಸಿಕೊಂಡ್ರಾ ವರ್ತೂರ್ ಪ್ರಕಾಶ್?

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ವಂಚನೆ ಮಾಡಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನ್ಯಾಯಗಳು ಆಗದಂತೆ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಪತ್ರದ ಮೂಲಕ ಡಿಕೆ ಸುರೇಶ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿ ಶಾಪ್‌ ಚಿನ್ನ ಅಂಗಡಿ ಮಾಲಕಿ ವನಿತಾ ಐತಾಳ್​ಗೆ ನಾನು ಡಿಕೆ.ಸುರೇಶ್​ ಸಹೋದರಿ ಎಂದು ಐಶ್ವರ್ಯಾಗೌಡ ಕೋಟಿ ಕೋಟಿ ರೂ. ಲೂಟಿ ಮಾಡಿರೋದು, ರಾಜ್ಯದಲ್ಲಿ ಸಂಚನವನ್ನೇ ಸೃಷ್ಟಿಸಿದೆ. ಚಿನ್ನದಂಗಡಿ ಮಾಲಕಿ ವನಿತಾ ದೂರಿನ ಮೇಲೆ ಐಶ್ವರ್ಯಾಗೆ ನೋಟಿಸ್​ ಕೊಡಲಾಗಿತ್ತು.

ಇದನ್ನೂ ಓದಿ: ಶ್ವೇತಾ ಗೌಡ ಜತೆ ವರ್ತೂರ್‌ ಪ್ರಕಾಶ್‌ ಎಂಗೇಜ್​ಮೆಂಟ್​ಗೆ ಸಿದ್ಧತೆ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಇತ್ತೀಚೆಗೆ ಚಂದ್ರಾಲೇಔಟ್​ ಪೊಲೀಸರ ಮುಂದೆ ಹಾಜರಾದ ಐಶ್ವರ್ಯಾಗೌಡ, ಪತ್ನಿ ಹರೀಶ್​ನನ್ನ ವಿಚಾರಣೆ ಮಾಡಿದ್ದರು. ವಂಚನೆ ಸಂಬಂಧ ಮಹತ್ವದ ದಾಖಲೆ ಮುಂದಿಟ್ಟು ವಿಚಾರಣೆ ವೇಳೆ ಸೂಕ್ತ ಉತ್ತರ ದೊರೆಯದ ಹಿನ್ನೆಲೆ ಇಬ್ಬರನ್ನು ಅರೆಸ್ಟ್ ಮಾಡಿದ್ದರು. ಇಂದು ಚಂದ್ರಾಲೇಔಟ್ ಠಾಣೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಐಶ್ವರ್ಯಾ, ಹರೀಶ್​ಗೆ ಜನವರಿ 6ರವರೆಗೂ ಪೊಲೀಸ್ ಕಸ್ಟಡಿ ನೀಡಿ 4ನೇ ಎಚಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು