Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಗ್ರಾಹಕರಿಗೆ ಶುಭ ಸುದ್ಧಿ; ಬೆಂಗಳೂರಿನಲ್ಲಿ ಚಿನ್ನದ ದರ 1,000 ರೂ. ಇಳಿಕೆ; ಬೆಳ್ಳಿ ಬೆಲೆಯೂ ಇಳಿಕೆ? ವಿವರ ಹೀಗಿದೆ

Gold Silver Price Today: ನಿನ್ನೆ ದರ ಏರಿಕೆಯ ಬಳಿಕ ಬೆಂಗಳೂರಿನಲ್ಲಿ ಚಿನ್ನದ ದರ 50,000ದ ಗಡಿ ದಾಟಿತ್ತು. ಇಂದು ಸ್ವಲ್ಪ ಪ್ರಮಾಣದಲ್ಲಿಯೇ ಇಳಿಕೆ ಕಂಡಿದ್ದರಿಂದ 49 ಸಾವಿರದ ಆಸು-ಪಾಸಿನಲ್ಲಿದೆ. ಕಳೆದೆರಡು ದಿನಗಳಿಂದ ಬೆಳ್ಳಿ ಬೆಲೆ ಏರಿಕೆಯತ್ತ ಸಾಗುತ್ತಿದ್ದು, ಇಂದು ಸ್ಥಿರವಾಗಿ ಉಳಿದಿದೆ.

Gold Rate Today: ಗ್ರಾಹಕರಿಗೆ ಶುಭ ಸುದ್ಧಿ; ಬೆಂಗಳೂರಿನಲ್ಲಿ ಚಿನ್ನದ ದರ 1,000 ರೂ. ಇಳಿಕೆ; ಬೆಳ್ಳಿ ಬೆಲೆಯೂ ಇಳಿಕೆ? ವಿವರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 11, 2021 | 9:14 AM

Gold Silver Rate Today | ಬೆಂಗಳೂರು: ಚಿನ್ನದ ದರ ಏರಿಕೆಯತ್ತ ಸಾಗುತ್ತಿರುವಾಗ ಚಿನ್ನ ಪ್ರಿಯರು ಕೊಂಚ ಬೇಸರಗೊಂಡಿದ್ದರು. ಇಳಿಕೆಯತ್ತ ಸಾಗುವುದು ಯಾವಾಗ ಎಂಬುದೇ ಗ್ರಾಹಕ ಮುಂದಿರುವ ಪ್ರಶ್ನೆಯಾಗಿತ್ತು. ಇಂದು (ಶುಕ್ರವಾರ ಜೂನ್​ 11) ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದೆ. ಚಿನ್ನದ ಮೇಲೆ ಮೋಹ ಉಳ್ಳವರಿಗೆ ಖುಷಿಯ ವಿಚಾರ. 22 ಕ್ಯಾರೆಟ್​ 100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 1,000 ರೂಪಾಯಿ ಇಳಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನ 45,800 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನ 4,58,000 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,970 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,99,700 ರೂಪಾಯಿಗೆ ಇಳಿದಿದೆ.

ನಿನ್ನೆ ದರ ಏರಿಕೆಯ ಬಳಿಕ ಬೆಂಗಳೂರಿನಲ್ಲಿ ಚಿನ್ನದ ದರ 50,000ದ ಗಡಿ ದಾಟಿತ್ತು. ಇಂದು ಸ್ವಲ್ಪ ಪ್ರಮಾಣದಲ್ಲಿಯೇ ಇಳಿಕೆ ಕಂಡಿದ್ದರಿಂದ 49 ಸಾವಿರದ ಆಸು-ಪಾಸಿನಲ್ಲಿದೆ. ಕಳೆದೆರಡು ದಿನಗಳಿಂದ ಬೆಳ್ಳಿ ಬೆಲೆ ಏರಿಕೆಯತ್ತ ಸಾಗುತ್ತಿದೆ. ಆದರೆ ಇಂದು ಸ್ಥಿರವಾಗಿ ಉಳಿದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಕೆಜಿ ಬೆಳ್ಳಿ ಬೆಲೆ 71,400 ರೂಪಾಯಿ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ದರ 1,500 ರೂಪಾಯಿ ಇಳಿಕೆ ಕಂಡಿದೆ. ಆ ಮೂಲಕ 4,61,500 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ 10 ಗ್ರಾಂ ಚಿನ್ನದ ದರ 46,150 ರೂಪಾಯಿ ಇಳಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,350 ರೂಪಾಯಿ ನಿಗದಿಯಾಗಿದೆ. ಹಾಗೂ 100 ಗ್ರಾಂ ಚಿನ್ನದ ದರ 5,03,500 ರೂಪಾಯಿ ಆಗಿದೆ. ಇನ್ನು, ಕೆಜಿ ಬೆಳ್ಳಿ ದರ 76,100 ರೂಪಾಯಿ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ದರ 900 ರೂಪಾಯಿ ಇಳಿಕೆ ಬಳಿಕ 4,79,500 ರೂಪಾಯಿ ನಿಗದಿಯಾಗಿದೆ. ಹಾಗೂ 10 ಗ್ರಾಂ ಚಿನ್ನದ ದರ 47,950 ರೂಪಾಯಿಗೆ ಕುಸಿದಿದೆ. 24 ಕ್ಯಾರೆಟ್​ 100 ಗ್ರಾಂ ಚಿನ್ನದ ದರದಲ್ಲಿ 1,200 ರೂಪಅಯಿ ಇಳಿಕೆಯಾಗಿದೆ. ಆ ಮೂಲಕ 5,23,000 ರೂಪಾಯಿ ನಿದಿಯಾಗಿದೆ. 10 ಗ್ರಾಂ ಚಿನ್ನ 52,300 ರೂಪಾಯಿಗೆ ಕುಸಿದಿದೆ. ಇನ್ನು, ಕೆಜಿ ಬೆಳ್ಳಿ ದರ 71,400 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಇಂದು ಚಿನ್ನದ ದರ ಏರಿಕೆ ಆಗಿದೆ. 22 ಕ್ಯಾರೆಟ್ 100 ಗ್ರಾಂ ಚಿನ್ನದಲ್ಲಿ 2,000 ರೂಪಾಯಿ ಏರಿಕೆ ಆಗಿದೆ. ಆ ಮೂಲಕ 4,78,800 ರೂಪಾಯಿ ನಿಗದಿಯಾಗಿದೆ. 10 ಗ್ರಾಂ ಚಿನ್ನದ ದರ 47,880 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ದರದಲ್ಲಿ 200 ರೂಪಾಯಿ ಏರಿಕೆ ಬಳಿಕ 48,880 ರೂಪಾಯಿ ಆಗಿದೆ. ಹಾಗೂ 100 ಗ್ರಾಂ ಚಿನ್ನದ ದರ 4,88,800 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆಯಲ್ಲಿ ಹೆಚ್ಚಳವಾಗಲೀ ಅಥವಾ ಇಳಿಕೆಯಾಗಲೀ ಕಂಡು ಬಂದಿಲ್ಲ. ಆ ಮೂಲಕ 71,400 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Silver Rate Today: ಬೆಂಗಳೂರು ನಗರದಲ್ಲಿ ಚಿನ್ನದ ದರ 50,090 ರೂಪಾಯಿ! ವಿವಿಧ ನಗರಗಳಲ್ಲಿ ಆಭರಣ ಬೆಲೆ ಎಷ್ಟಿದೆ?

Gold Silver Rate Today: ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ! ಬೆಂಗಳೂರು, ದೆಹಲಿ, ಚೆನ್ನೈನಲ್ಲಿ ಆಭರಣದ ದರ ವಿವರ ಹೀಗಿದೆ!

Published On - 8:40 am, Fri, 11 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ