AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೇವರ ಹೆಸರಿನಲ್ಲಿ ಮಾತು ಆರಂಭಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರ ಗ್ಯಾಂಗ್ ಅರೆಸ್ಟ್!

ಬೆದರಿಕೆ ಹಾಕಿ ಪ್ರಭುರಾಮ್ ಎಂಬವರ ಬಳಿಯಿದ್ದ ಚಿನ್ನಾಭರಣ ದರೋಡೆ ಮಾಡಿದ್ದರು. ಚಿನ್ನಾಭರಣಕ್ಕೆ ಹಾಲ್‌ಮಾರ್ಕ್ ಹಾಕಿಸಲು ಹೋಗಿದ್ದಾಗ ಕೃತ್ಯ ನಡೆದಿತ್ತು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದೀಗ ದರೋಡೆಕೋರರನ್ನು ಬಂಧಿಸಿದ್ದಾರೆ.

Crime News: ದೇವರ ಹೆಸರಿನಲ್ಲಿ ಮಾತು ಆರಂಭಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರ ಗ್ಯಾಂಗ್ ಅರೆಸ್ಟ್!
Follow us
TV9 Web
| Updated By: ganapathi bhat

Updated on:Mar 19, 2022 | 11:00 AM

ಬೆಂಗಳೂರು: ಬರೋಬ್ಬರಿ 1.7 ಕೆಜಿ ಚಿನ್ನ ದರೋಡೆ ಮಾಡಿದ್ದ ನಾಗ್ಪುರದ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ರಾಜಾ ಅಲಿ, ನಾದಿರ್ ಜೈಬಿ ಸೇರಿ ಮೂವರ ಬಂಧನ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಗೇಟ್ ಠಾಣೆ ಪೊಲೀಸರಿಂದ ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಬಂಧಿತ ಆರೋಪಿಗಳ ಬಳಿಯಿದ್ದ 1 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ರಾಜಸ್ಥಾನ, ಆಗ್ರಾ, ನಾಗ್ಪುರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು ಆಗಿತ್ತು. ಫೆಬ್ರವರಿ 12 ರಂದು ಪ್ರಭುರಾಮ್ ಬಳಿ ಚಿನ್ನಾಭರಣ ದರೋಡೆ ಮಾಡಿದ್ದರು.

ಮೊದಲಿಗೆ ದೇವರ ಹೆಸರಿನಲ್ಲಿ ಮಾತು ಆರಂಭಿಸಿದ್ದ ಅವರು, ನಂತರ ಬಂದ ಮತ್ತೊಬ್ಬ ಖದೀಮನಿಂದ ವ್ಯಕ್ತಿಗೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿ ಪ್ರಭುರಾಮ್ ಎಂಬವರ ಬಳಿಯಿದ್ದ ಚಿನ್ನಾಭರಣ ದರೋಡೆ ಮಾಡಿದ್ದರು. ಚಿನ್ನಾಭರಣಕ್ಕೆ ಹಾಲ್‌ಮಾರ್ಕ್ ಹಾಕಿಸಲು ಹೋಗಿದ್ದಾಗ ಕೃತ್ಯ ನಡೆದಿತ್ತು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದೀಗ ದರೋಡೆಕೋರರನ್ನು ಬಂಧಿಸಿದ್ದಾರೆ.

ರಾಯಚೂರು: ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ

ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಪತಿಯ ಮನೆ ಎದುರು ಪತ್ನಿ ಶಾಂತಾಬಾಯಿ ಕಣ್ಣೀರು ಹಾಕಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಕೈಕೊಟ್ಟ ಆರೋಪ ಕೇಳಿಬಂದಿದೆ. ಮನೆಯಲ್ಲಿ ಬಾಡಿಗೆಗಿದ್ದವಳನ್ನೇ ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಹಾಗೂ ಪತಿಯ ಕುಟುಂಬಸ್ಥರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲು ಮಾಡಲಾಗಿದೆ.

ಬೆಂಗಳೂರು: ಪತಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೆಂದು ಪತ್ನಿ ಆತ್ಮಹತ್ಯೆ

ಪತಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷದ ಪ್ರೀತಿ, 9 ತಿಂಗಳ ದಾಂಪತ್ಯ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ ಬಳಿಕವೂ ಇತರ ಯುವತಿ ಜತೆ ಲವ್ವಿ ಡವ್ವಿ ಇತ್ತು ಎಂದು ಪತಿ ರಾಕೇಶ್ ವಿರುದ್ಧ ಇಂದುಶ್ರೀ ಆರೋಪ ಮಾಡಿದ್ದಾರೆ. ‘ಯು ಆರ್ ಎ ಸ್ಯಾಡಿಸ್ಟ್ ಆ್ಯಂಡ್ ಸೈಕೋ’ ‘ಯು ಆರ್ ದ ವರ್ಸ್ಟ್​ ಪರ್ಸನ್’ ಎಂದು ಡೆತ್‌ನೋಟ್ ಬರೆದಿಟ್ಟು ಇಂದುಶ್ರೀ ನೇಣಿಗೆ ಶರಣಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಕಲಬುರಗಿ: ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ, ಎರಡು ಲಕ್ಷ ಮೌಲ್ಯದ ಬಾಳೆ ಗಿಡ ನಾಶ

ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಎರಡು ಲಕ್ಷ ಮೌಲ್ಯದ ಬಾಳೆ ಗಿಡ ನಾಶವಾದ ದುರ್ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ತುಕುರಾಮ್ ಎನ್ನುವವರಿಗೆ ಸೇರಿದ್ದ ಬಾಳೆ ತೋಟಕ್ಕೆ ಬೆಂಕಿ ಬಿದ್ದಿದೆ. ಎರಡು ಎಕರೆ ವಿಸ್ತೀರ್ಣದಲ್ಲಿದ್ದ ಬಾಳೆ ಗಿಡಗಳು ಬೆಂಕಿಗಾಹುತಿ ಆಗಿದೆ. ಬೆಳೆ ಕಳೆದುಕೊಂಡು ರೈತ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ

ಇದನ್ನೂ ಓದಿ: Crime News: ಮಾನಸಿಕ ಖಿನ್ನತೆ; ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ನೇಣಿಗೆ ಶರಣು

Published On - 9:40 am, Sat, 19 March 22

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ