AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಏರುತ್ತಲೇ ಇದ್ದ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ!

Gold Silver Price: ಚಿನ್ನವನ್ನು ಆಭರಣದ ಸಲುವಾಗಿ ಒಂದೇ ಅಲ್ಲದೇ, ಹೂಡಿಕೆ ದೃಷ್ಟಿಯಿಂದ ಖರೀದಿಸುವ ಪದ್ಧತಿ ಇದೆ. ಹೀಗಿರುವಾಗ ಚಿನ್ನದ ದರ ಎಷ್ಟಿದೆ? ಎಂಬುದರ ಕುರಿತು ಕುತೂಹಲ ಕಾಡುವುದು ಸಾಮಾನ್ಯ. ಹಾಗಾಗಿ ವಿವಿಧ ನಗರಗಳಲ್ಲಿ ಇಂದಿನ ಮಾರುಕಟ್ಟೆಯಲ್ಲಿನ ಚಿನ್ನದ ದರ ಎಷ್ಟಿದೆ ಎಂಬುದರ ಕುರಿತಾದ ಮಾಹಿತಿ ಇಲ್ಲಿದೆ.

Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಏರುತ್ತಲೇ ಇದ್ದ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ!
ಚಿನ್ನಾಭರಣ (ಸಾರ್ದರ್ಭಿಕ ಚಿತ್ರ)
Follow us
TV9 Web
| Updated By: Digi Tech Desk

Updated on:Jun 08, 2021 | 9:12 AM

ಬೆಂಗಳೂರು: ಕಳೆದ ಹಲವು ವಾರಗಳಿಂದ ಚಿನ್ನದ ಬೆಲೆ ಏರುತ್ತಲೇ ಇತ್ತು. ಇಂದು (ಜೂನ್ 8) ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 45,800 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನ 4,58,000 ರೂಪಾಯಿಗೆ ಕುಸಿತ ಕಂಡಿದೆ. ಬೆಳ್ಳಿ ಬೆಲೆಯಲ್ಲೂ ಸಹ ಇಂದು ಇಳಿಕೆ ಕಂಡು ಬಂದಿರುವುದು ಗ್ರಾಹಕರಿಗೆ ಖುಷಿಯ ವಿಚಾರ.

ಪ್ರತಿನಿತ್ಯ ಏರುತ್ತಲೇ ಇದ್ದ ಚಿನ್ನ ದರವನ್ನು ಗಮನಿಸಿದ ಗ್ರಾಹಕರು ಬೇಸರ ಹೊರಹಾಕಿದ್ದರು. ಒಂದು ಕಡೆ ಇಂಧನದ ದರವೂ ಕೂಡಾ ಹೆಚ್ಚಳವಾಗುತ್ತಲೇ ಇದ್ದು ಸಂಕಷ್ಟ ತಂದೊಡ್ಡಿದೆ. ಜತೆಗೆ ಆಭರಣದ ಬೆಲೆಯೂ ಕೂಡಾ ಏರಿಕೆ ಕಾಣುತ್ತಿದೆ ಎಂದು ಬೇಸರಗೊಂಡಿದ್ದರು. ಚಿನ್ನ ಮತ್ತು ಬೆಳ್ಳಿ ದರ ಎರಡೂ ಆಭರಣಗಳೂ ಕೂಡಾ ದರದಲ್ಲಿ ಇಳಿಕೆ ಕಂಡಿರುವುದರಿಂದ ಗ್ರಾಹಕರು ಸಂತೋಷಗೊಂಡಿದ್ದಾರೆ.

ಚಿನ್ನವನ್ನು ಆಭರಣದ ಸಲುವಾಗಿ ಒಂದೇ ಅಲ್ಲದೇ, ಹೂಡಿಕೆ ದೃಷ್ಟಿಯಿಂದ ಖರೀದಿಸುವ ಪದ್ಧತಿ ಇದೆ. ಹೀಗಿರುವಾಗ ಚಿನ್ನದ ದರ ಎಷ್ಟಿದೆ? ಎಂಬುದರ ಕುರಿತು ಕುತೂಹಲ ಕಾಡುವುದು ಸಾಮಾನ್ಯ. ಹಾಗಾಗಿ ವಿವಿಧ ನಗರಗಳಲ್ಲಿ ಇಂದಿನ ಮಾರುಕಟ್ಟೆಯಲ್ಲಿನ ಚಿನ್ನದ ದರ ಎಷ್ಟಿದೆ ಎಂಬುದರ ಕುರಿತಾದ ಮಾಹಿತಿ ಇಲ್ಲಿದೆ.

ಬೆಂಗಳೂರು ನಗರದಲ್ಲಿ 24 ಕ್ಯಾರೆಟ್ 10 ಗ್ರಾ ಚಿನ್ನದ ದರ 49,970 ರೂಪಾಯಿಗೆ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,99,700 ರೂಪಾಯಿಗೆ ನಿಗದಿಯಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿಯೂ ಕುಸಿತ ಕಂಡು ಬಂದಿದ್ದು 1ಕೆಜಿ ಬೆಳ್ಳಿ ದರ 71,000 ರೂಪಾಯಿ ಆಗಿದೆ. ದೈನಂದಿನ ದರ ಪರಿಶೀಲನೆಯಲ್ಲಿ ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,050 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,60,500 ರೂಪಾಯಿ ದಾಖಲಾಗಿದೆ. ಸುಮಾರು 1,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,240 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,02,400 ರೂಪಾಯಿ ಆಗಿದೆ. ಸುಮಾರು 1,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 1ಕೆಜಿ ಬೆಳ್ಳಿ ದರದಲ್ಲಿ 500 ರೂಪಾಯಿ ಇಳಿಕೆ ಕಂಡು ಬಂದಿದ್ದು 75,800 ರೂಪಾಯಿ ಇಳಿಕೆ ಆಗಿದೆ.

ದೆಹಲಿಯಲ್ಲಿ ಚಿನ್ನದ ದರ ಕೊಂಚ ಏರಿಕೆಯಾಗಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,950 ರೂಪಾಯಿಗೆ ಏರಿಕೆಯಾಗಿದೆ. ಹಾಗೂ 100 ಗ್ರಾಂ ಚಿನ್ನದ ರ 4,79,950 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 52,300 ರೂಪಾಯಿಗೆ ಏರಿಕೆಯಾಗಿದ್ದು, 100 ಗ್ರಾಂ ಚಿನ್ನದ ದರ 5,23,000 ರೂಪಾಯಿಗೆ ಹೆಚ್ಚಳವಾಗಿದೆ. ಕೆಜಿ ಬೆಳ್ಳಿ ದರ 71,000 ರೂಪಾಯಿ ಆಗಿದೆ. ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ವಾಣಿಜ್ಯ ನಗರಿ ಮುಂಬೈ ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,510 ರೂಪಾಯಿಗೆ ಇಳಿಕೆ ಆಗಿದೆ. ಹಾಗೂ 100 ಗ್ರಾಂ ಚಿನ್ನಕ್ಕೆ 4,75,100 ರೂಪಾಯಿ ನಿಗದಿಯಾಗಿದೆ. ಸರಿಸುಮಾರು 8,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 800 ರೂಪಾಯಿ ಇಳಿಕೆಯ ಬಳಿಕ 48,510 ರೂಪಾಯಿ ಆಗಿದೆ. ಹಾಗೂ 100 ಗ್ರಾಂ ಚಿನ್ನದ ದರ 4,85,100 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ 600 ರೂಪಾಯಿ ಇಳಿಕೆ ಕಂಡು ಬಂದಿದ್ದು 1ಕೆಜಿ ಬೆಳ್ಳಿ ಬೆಲೆ 71,000 ರೂಪಾಯಿಗೆ ಇಳಿಕೆಯಾಗಿದೆ.

ಇದನ್ನೂ ಓದಿ:

Gold Silver Rate Today: ಬೆಂಗಳೂರು ನಗರದಲ್ಲಿ ಚಿನ್ನದ ದರ 50,090 ರೂಪಾಯಿ! ವಿವಿಧ ನಗರಗಳಲ್ಲಿ ಆಭರಣ ಬೆಲೆ ಎಷ್ಟಿದೆ?

Gold Silver Rate Today: ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ! ಬೆಂಗಳೂರು, ದೆಹಲಿ, ಚೆನ್ನೈನಲ್ಲಿ ಆಭರಣದ ದರ ವಿವರ ಹೀಗಿದೆ!

Published On - 8:42 am, Tue, 8 June 21

ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್