AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನದ ಬೇಡಿಕೆ ಕುಸಿತ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿನ ಬಂಗಾರ, ಬೆಳ್ಳಿ ದರ ಮಾಹಿತಿ ಇಲ್ಲಿದೆ

Gold Silver Price: ಕೊರನಾ ಭೀತಿಯಿಂದಾಗಿ ಜನರು ಜನರು ಚಿನ್ನ, ಬೆಳ್ಳಿಕೊಳ್ಳುವತ್ತ ಅಷ್ಟಾಗಿ ಗಮನ ಹರಿಸುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,600 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,660 ರೂಪಾಯಿ ಆಗಿದೆ.

Gold Rate Today: ಚಿನ್ನದ ಬೇಡಿಕೆ ಕುಸಿತ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿನ ಬಂಗಾರ, ಬೆಳ್ಳಿ ದರ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
shruti hegde
| Edited By: ಆಯೇಷಾ ಬಾನು|

Updated on: May 09, 2021 | 8:45 AM

Share

ಬೆಂಗಳೂರು: ದಿನ ಸಾಗುತ್ತಿದ್ದಂತೆಯೇ ಚಿನ್ನದ ಬೇಡಿಕೆ ಕುಸಿಯುತ್ತಿರುವುದಂತೂ ನಿಜ. ಕೊರೊನಾ ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಜಾರಿಗೊಳಿಸಿದ ಕ್ರಮಗಳಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಹಾಗೂ ಕೊರನಾ ಭೀತಿಯಿಂದಾಗಿ ಜನರು ಚಿನ್ನ, ಬೆಳ್ಳಿ ಕೊಳ್ಳುವತ್ತ ಗಮನ ಹರಿಸುತ್ತಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,600 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,660 ರೂಪಾಯಿ ಆಗಿದೆ.

ಕೊರೊನಾ ಸೋಂಕು ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಕಟ್ಟು ನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸುವುದು ಅನಿವಾರ್ಯವೆಂದು ಸರ್ಕಾರ ಈ ಕುರಿತಂತೆ ಮುಂದಾಗಿದ್ದು, ನಾಳೆಯಿಂದ (ಸೋಮವಾರ) ಸತತ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಕೊರೊನಾ ಸೋಂಕು ಎಲ್ಲಡೆ ಅತಿವೇಗವಾಗಿ ವ್ಯಾಪಿಸಿಸುತ್ತಿರುವುದನ್ನು ಗಮನಿಸಿದ ಜನರು ಮದುಮೆ ಸಮಾರಂಭಗಳನ್ನೆಲ್ಲ ಮುಂದಕ್ಕೆ ತಳ್ಳುತ್ತಿದ್ದಾರೆ. ಹೆಚ್ಚಾಗಿ ಜನಸೇರುವಂತಿಲ್ಲ. ಅದಾಗಿಯೂ ಕೊರೊನಾ ಸೋಂಕು ಹರಡುವಿಕೆಯ ಭಯ ಹೆಚ್ಚಾಗುತ್ತಿರುವ ಕಾರಣ ಜನರು ಸಮಾರಂಭಗಳನ್ನು ಮುಂದಕ್ಕೆ ತಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿದ್ದಾರೆ. ಹೀಗಿರುವಾಗ ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಕೊಳ್ಳುವವರೆಲ್ಲ ಕೈಕಟ್ಟಿ ಕುಳಿತಿದ್ದಾರೆ. ಇಂದರಿಂದ ಚಿನ್ನದ ಬೇಡಿಕೆ ಕುಸಿಯುತ್ತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ 1 ಗ್ರಾಂ ಚಿನ್ನದ ದರ ನಿನ್ನೆ 4,450 ರೂಪಾಯಿ ಇತ್ತು. ಇಂದು ಕೊಂಚ ದರ ಏರಿಕೆಯ ನಂತರ 4,460 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 35,600 ರೂಪಾಯಿ ಇತ್ತು. ಇಂದು ದರ 35,680 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿ ಆಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ನಿನ್ನೆ 4,45,000 ರೂಪಾಯಿಯಿಂದ 4,46,000 ರೂಪಾಯಿಗೆ ಏರಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ದರ ಮಾಹಿತಿ 1 ಗ್ರಾಂ ಚಿನ್ನದ ದರ ನಿನ್ನೆ 4,450 ರೂಪಾಯಿ ಇತ್ತು. ಇಂದು ದರ ಏರಿಕೆಯ ನಂತರದಲ್ಲಿ 4,460 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ 35,600 ರೂಪಾಯಿಯಿಂದ 35,680 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 44,500 ರೂಪಾಯಿ ಇದ್ದು, ಇಂದು ದರ ಏರಿಕೆಯ ನಂತರ 44,600 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ನಿನ್ನೆ 4,45,000 ರೂಪಾಯಿ ಇದ್ದು, ಇಂದು ದರ 4,46,000 ರೂಪಾಯಿಗೆ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿ ಚಿನ್ನದ ದರ ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,970 ರೂಪಾಯಿಯಿಂದ 45,100 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,060 ರೂಪಾಯಿಯಿಂದ 49,200 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,910 ರೂಪಾಯಿ ಇತ್ತು. ಇಂದು ದರ 45,990 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 49,950 ರೂಪಾಯಿ ಇತ್ತು. ಇಂದು ಕೊಂಚ ದರ ಏರಿಕೆಯ ನಂತರದಲ್ಲಿ 49,990 ರೂಪಾಯಿಗೆ ಏರಿಕೆಯಾಗಿದೆ. ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿ ಇತ್ತು. ಇಂದ ದರ ಏರಿಕೆಯ ನಂತರ 44,610 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 49,180 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಮಾಹಿತಿ 1 ಗ್ರಾಂ ಬೆಳ್ಳಿ ದರ ಇಂದು 71.50 ರೂಪಾಯಿ ಇದೆ. 8 ಗ್ರಾಂ ಬೆಳ್ಳಿ ದರ 572 ರೂಪಾಯಿ ಇದೆ. ಅದೇ ರೀತಿ 10 ಗ್ರಾಂ ಬೆಳ್ಳಿ 715 ರೂಪಾಯಿ, 100 ಗ್ರಾಂ ಬೆಳ್ಳಿ ದರ 7,150 ರೂಪಾಯಿ ಇದೆ. 1 ಕೆಜಿ ಬೆಳ್ಳಿ ದರ 71,500 ರೂಪಾಯಿ ಇದೆ.

ಇದನ್ನೂ ಓದಿ: Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು