AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ

ಎಮಿರೇಟ್ಸ್ ವಿಮಾನದ ಮೂಲಕ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (BIAL, Devanahalli) ಬಂದಿದ್ದ ಲಗೇಜ್ ಅದಾಗಿತ್ತು. ಬ್ಯಾಗ್ ನಲ್ಲಿ ಸ್ಕ್ರೂ ರೂಪದಲ್ಲಿದ್ದ ಚಿನ್ನ ಸಾಗಾಣಿಕೆಗೆ ಪ್ರಯಾಣಿಕ ಯತ್ನಿಸಿದ್ದ. ಅನುಮಾನ ಬಂದು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸ್ರ್ಕೂ ರೂಪದಲ್ಲಿ ಚಿನ್ನ ಇರುವುದು ಸ್ಕಾನಿಂಗ್ ನಿಂದ ಬೆಳಕಿಗೆ ಬಂದಿದೆ.

ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ
ಗೋಲ್ಡ್​​ ಸ್ಮಗ್ಲಿಂಗ್​​ಗೆ ಮತ್ತೊಂದು ಐಡಿಯಾ!
ನವೀನ್ ಕುಮಾರ್ ಟಿ
| Edited By: |

Updated on: Aug 18, 2023 | 12:46 PM

Share

ದೇವನಹಳ್ಳಿ, ಆಸಗ್ಟ್​ 18: ಗೋಲ್ಡ್​​ ಸ್ಮಗ್ಲಿಂಗ್​​ಗೆ (Gold Smuggling) ಐಡಿಯಾಗಳು ತರಹೇವಾರಿ. ಅನುದಿನವೂ ವಿನೂತನ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಆದರೆ ಅವರು ಬಿಡಬೇಕಲ್ಲಾ… ಆ ಕಸ್ಟಮ್ಸ್ ಅಧಿಕಾರಿಗಳು. ಅವರ ಮುಂದೆ ಇಂತಹ ಕಳ್ಳಾಟಗಳು ನಡೆಯುವುದಿಲ್ಲ ಎಂಬುದೇ ಸಮಾಧಾನಕರ ಸಂಗತಿ. ತಾಜಾ ಚಿನ್ನದ (Gold) ಕಳ್ಳಸಾಗಣೆ ಪ್ರಯತ್ನದಲ್ಲಿ ಲಗೇಜ್ ಬ್ಯಾಗ್ ಗೆ ಚಿನ್ನದ ಸ್ಕ್ರೂ ಬಿಗಿಸಿ ಸ್ಮಗ್ಲಿಂಗ್ ಗೆ ಯತ್ನಿಸಲಾಗಿದೆ. ಆದರೆ ಪ್ರಾಂಪ್ಟ್​​ಆಗಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮಾಲನ್ನು ಜಪ್ತಿ ಮಾಡಿದ್ದಾರೆ.

ಎಮಿರೇಟ್ಸ್ ವಿಮಾನದ ಮೂಲಕ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (BIAL, Devanahalli) ಬಂದಿದ್ದ ಲಗೇಜ್ ಅದಾಗಿತ್ತು. ಬ್ಯಾಗ್ ನಲ್ಲಿ ಸ್ಕ್ರೂ ರೂಪದಲ್ಲಿದ್ದ ಚಿನ್ನ ಸಾಗಾಣಿಕೆಗೆ ಪ್ರಯಾಣಿಕ ಯತ್ನಿಸಿದ್ದ.

ಇದನ್ನೂ ಓದಿ: ದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಸರಣಿ ಸಾವಿಗೆ ದಾವಣಗೆರೆಯ ಸೂಳೆಕೆರೆ ನೀರು ಕಾರಣವಾ? ಲ್ಯಾಬ್ ವರದಿ ಫಲಿತಾಂಶ ಇಲ್ಲಿದೆ

ಅನುಮಾನ ಬಂದು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸ್ರ್ಕೂ ರೂಪದಲ್ಲಿ ಚಿನ್ನ ಇರುವುದು ಸ್ಕಾನಿಂಗ್ ನಿಂದ ಬೆಳಕಿಗೆ ಬಂದಿದೆ. ಕೂಡಲೇ ಬ್ಯಾಗ್ ಜಪ್ತಿ ಮಾಡಿ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಬ್ಯಾಗ್ ಸ್ಕ್ರೂಗಳಲ್ಲಿ 26.7 ಗ್ರಾಮ್ ನಷ್ಟು ಚಿನ್ನವಿತ್ತು. ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಾಲ್ಕು ದಿನಗಳ ಹಿಂದಷ್ಟೇ.. ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ (Bangalore KIAL Airport) ಕಸ್ಟಮ್ಸ್ ಅಧಿಕಾರಿಗಳು ಆಗಸ್ಟ್​ 16 ರಂದು ವಶಪಡಿಸಿಕೊಂಡಿದ್ದರು. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು (gold biscuit) ಜಫ್ತಿ ಮಾಡಲಾಗಿತ್ತು. ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ (Kolkata passenger). ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿತ್ತು. ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿತ್ತು.

ದೇವನಹಳ್ಳಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ