ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ; ಶೌಚಾಲಯದಲ್ಲೂ ಸಿಕ್ತು ಬಂಗಾರ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.29 ಕೋಟಿ ಮೌಲ್ಯದ ಚಿನ್ನವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು DRI ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ವಿಚಾರಣೆ ಶುರವಾಗಿದೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ; ಶೌಚಾಲಯದಲ್ಲೂ ಸಿಕ್ತು ಬಂಗಾರ
ಪ್ರಾತಿನಿಧಿಕ ಚಿತ್ರ
Edited By:

Updated on: Jun 07, 2024 | 7:16 PM

ಬೆಂಗಳೂರು, ಜೂ.07: ನಿನ್ನೆಯಷ್ಟೇ(ಜೂ.06) ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು (gold) ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ (Kempegowda International Airport) ಜಪ್ತಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಂದು(ಜೂ.07) ಕೂಡ ಅಕ್ರಮವಾಗಿ ಸಾಗಿಸುತ್ತಿದ್ದ 6.29 ಕೋಟಿ ಮೌಲ್ಯದ ಚಿನ್ನವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಾಕ್​ನಿಂದ  ಇಬ್ಬರು ಮಹಿಳೆಯರು ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​​ಗೆ ಬಂದಿಳಿದಿದ್ದರು. ಅದರಲ್ಲಿ ನಾಜಿ ಲಿಟಿ  ಎಂಬುವವರಿಂದ 2 ಕೆಜಿ 181 ಗ್ರಾಂ ಚಿನ್ನ ಹಾಗೂ ಆರತಿ ಸೆಗಾಲ್ ಎಂಬುವವರಿಂದ  4 ಕೆಜಿ 61 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲ, ವಿಮಾನ ನಿಲ್ದಾಣದ ಶೌಚಾಲಯದಲ್ಲೂ 2 ಕೆಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು DRI ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ವಿಚಾರಣೆ ಶುರವಾಗಿದೆ.

ಇದನ್ನೂ ಓದಿ:ಬೆಂಗಳೂರು ಏರ್​ಪೋರ್ಟ್: ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ವಶ, ಚಿನ್ನ ಜಪ್ತಿ

ನಿನ್ನೆಯಷ್ಟೇ 6 ಕೆಜಿ 834 ಗ್ರಾಂ ಚಿನ್ನ ಸೀಜ್​

ನಿನ್ನೆ(ಜೂ.06)ಯಷ್ಟೇ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ 6 ಕೆಜಿ 834 ಗ್ರಾಂ ಚಿನ್ನವನ್ನು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಜಪ್ತಿ ಮಾಡಲಾಗಿತ್ತು. ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಥಾರ್ ಏರ್ ವೇಸ್ ವಿಮಾನದಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಹ್ಯಾಂಡ್ ಬ್ಯಾಗ್​ನಲ್ಲಿ ಮುಚ್ಚಿಟ್ಟು ಚಿನ್ನ ಸಾಗಾಟಕ್ಕೆ ಯತ್ನಿಸಿದ್ದರು. ಇದರ ಬೆನ್ನಲ್ಲೇ ಇದೀಗ ಆರು ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us