AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್ ಗ್ರಾಹಕರಿಗೆ ಗುಡ್ ನ್ಯೂಸ್; ಸದ್ಯಕ್ಕೆ ಊಟ, ತಿಂಡಿ ದರ ಏರಿಕೆ ಇಲ್ಲ

ಹೋಟೆಲ್ ಗ್ರಾಹಕರಿಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ (Bangalore Hotels Association) ಸಿಹಿ ಸುದ್ದಿ ನೀಡಿದ್ದು, ಸದ್ಯಕ್ಕೆ ಊಟ, ತಿಂಡಿ ದರ ಹೆಚ್ಚಿಸುವುದಿಲ್ಲ ಎಂದು ಸೋಮವಾರ ತಿಳಿಸಿದೆ.

ಹೋಟೆಲ್ ಗ್ರಾಹಕರಿಗೆ ಗುಡ್ ನ್ಯೂಸ್; ಸದ್ಯಕ್ಕೆ ಊಟ, ತಿಂಡಿ ದರ ಏರಿಕೆ ಇಲ್ಲ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Apr 03, 2023 | 5:25 PM

ಬೆಂಗಳೂರು: ಹೋಟೆಲ್ ಗ್ರಾಹಕರಿಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ (Bangalore Hotels Association) ಸಿಹಿ ಸುದ್ದಿ ನೀಡಿದ್ದು, ಸದ್ಯಕ್ಕೆ ಊಟ, ತಿಂಡಿ ದರ ಹೆಚ್ಚಿಸುವುದಿಲ್ಲ ಎಂದು ಸೋಮವಾರ ತಿಳಿಸಿದೆ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸಭೆ ನಡೆಸಿದ ಹೋಟೆಲ್​ ಮಾಲೀಕರ ಸಂಘ, ಊಟ, ತಿಂಡಿ ದರ ಹೆಚ್ಚಳ ಮಾಡದಿರಲು ತೀರ್ಮಾನಿಸಿದೆ. ಈ ವಿಚಾರವಾಗಿ ಸಭೆಯ ಬಳಿಕ ಸಂಘದ ಅಧ್ಯಕ್ಷ ಪಿಸಿ ರಾವ್ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಹೋಟೆಲ್ ಊಟ, ತಿಂಡಿ ದರ ಏರಿಕೆ ಇಲ್ಲ ಎಂದು ಅವರು ಹೇಳಿದ್ದಾರೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಚುನಾವಣೆ ಮುಗಿಯುವ ವರೆಗೂ ಆಹಾರದ ಬೆಲೆ ಹೆಚ್ಚಳ ಮಾಡದಿರಲು ತೀರ್ಮಾನಿಸಿದ್ದೇವೆ. ಜತೆಗೆ, ಗ್ಯಾಸ್ ದರ ಇಳಿಕೆ ಮಾಡುವಂತೆ ಕೇಂದ್ರದ ಮೇಲೆ‌ ಒತ್ತಡ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ. ಎಲ್​ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಲವು ಹೋಟೆಲ್ ಮಾಲಿಕರಿಗೆ ಭಾರೀ ಹೊಡೆತ ಬಿದ್ದಿದೆ. ಊಟ, ತಿಂಡಿ, ಕಾಫಿ, ಟೀ ದರ ತುಂಬಾ ಕಡಿಮೆ ಇದ್ದು ಅವರು ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ತೀರಾ ನಷ್ಟವಾಗುತ್ತಿದ್ದರೆ ಶೇ 10ರ ದರ ಹೆಚ್ಚಳ ಮಾಡುವುದಕ್ಕೆ ಒಪ್ಪಿಗೆಯನ್ನೂ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿಲಿಂಡರ್ ಬೆಲೆ ಹೆಚ್ಚಳದ ಜೊತೆಗೆ ಹಾಲು, ತುಪ್ಪ, ಮೈದಾ ಸೇರಿ ಇತರೆ ಅಡುಗೆ ಸಾಮಾಗ್ರಿಗಳ ಬೆಲೆ ಇತ್ತೀಚೆಗೆ ಏರಿಕೆಯಾಗಿದೆ. ಸರಕು ಸಾಗಣೆ ಹಾಗೂ ಕಟ್ಟಡಗಳ ಬಾಡಿಗೆಯೂ ಹೆಚ್ಚಾಗಿದೆ. ಹಾಲು, ಮೊಸರು ಹಾಗೂ ತುಪ್ಪದ ಕೊರತೆಯಿಂದಾಗಿ ಸಿಹಿ ಪದಾರ್ಥಗಳ ತಯಾರಿಯನ್ನೇ ಕಡಿಮೆ ಮಾಡಲಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದು ಸಭೆ ನಡೆಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಏಪ್ರಿಲ್ 1ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಸುಮಾರು 92 ರೂ.ನಷ್ಟು ಇಳಿಕೆಯಾಗಿತ್ತು. ಆದರೆ, ಮಾರ್ಚ್​ ತಿಂಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 350 ರೂ.ನಷ್ಟು ಹೆಚ್ಚಿಸಲಾಗಿತ್ತು. ಇದು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Mon, 3 April 23

ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು