AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಗುಡ್ ಆ್ಯಂಡ್ ಬ್ಯಾಡ್ ನ್ಯೂಸ್: ಪ್ರೀಮಿಯಂ ವಿಸ್ಕಿ, ಸ್ಕಾಚ್ ದರ ಇಳಿಕೆ, ಬಿಯರ್ ದರ ಹೆಚ್ಚಳ

Liquor Price: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಪ್ರಿಮಿಯಂ ವಿಸ್ಕಿ, ಸ್ಕಾಚ್​ಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ದರ ಕಡಿಮೆ ಮಾಡಿದೆ. ಆದರೆ ಕ್ಲಾಸ್ ಪೀಪಲ್ಸ್​ಗೆ ದರ ಕಡಿಮೆ ಆಗಿದ್ದು ಖುಷಿ ನೀಡಿದ್ರೆ, ಇತ್ತ ಬಿಯರ್ ದರ ಏರಿಕೆ ಮಾಡಿ ಮಧ್ಯಮ ವರ್ಗದ ಮದ್ಯಪ್ರಿಯರಿಗೆ ಶಾಕ್ ನೀಡಿದೆ.

ಮದ್ಯಪ್ರಿಯರಿಗೆ ಗುಡ್ ಆ್ಯಂಡ್ ಬ್ಯಾಡ್ ನ್ಯೂಸ್: ಪ್ರೀಮಿಯಂ ವಿಸ್ಕಿ, ಸ್ಕಾಚ್ ದರ ಇಳಿಕೆ, ಬಿಯರ್ ದರ ಹೆಚ್ಚಳ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Aug 28, 2024 | 2:49 PM

Share

ಬೆಂಗಳೂರು, ಆಗಸ್ಟ್​.28: ರಾಜ್ಯ ಸರ್ಕಾರ (Karnataka Government) ನಿನ್ನೆಯಿಂದ (ಆಗಸ್ಟ್​ 27) ಪ್ರೀಮಿಯಂ ವಿಸ್ಕಿ, ಸ್ಕಾಚ್​ಗಳ ದರವನ್ನು ಕಡಿಮೆ ಮಾಡಲು ಮುಂದಾಗಿದೆ (Liquor). ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಸ್ಕಾಚ್ ಗಳದರ ಇಷ್ಟು ಪ್ರಮಾಣದಲ್ಲಿ ಇಳಿಕೆಯಾಗ್ತಿರೋದು. ಮದ್ಯದಲ್ಲಿ 16 ಸ್ಲ್ಯಾಬ್​ಗಳಿವೆ. ಅದರಲ್ಲಿ ಒಂದರಿಂದ ಐದು ಸ್ಲ್ಯಾಬ್​ಗಳ ವರೆಗೆ ಮದ್ಯದ ದರವನ್ನು ಕಡಿಮೆ ಮಾಡಿಲ್ಲ. ಅದು ಬಡ ವರ್ಗದ ಮದ್ಯಪ್ರಿಯರು ಕುಡಿಯುವ ಮದ್ಯ. 60% ರಷ್ಟು ಮದ್ಯಪ್ರಿಯರು ಈ ವರ್ಗದ ಮದ್ಯವನ್ನು ಕುಡಿಯುತ್ತಾರೆ. 6 ರಿಂದ 18 ರವರೆಗೆ ಮಧ್ಯಮವರ್ಗ, ಶ್ರೀಮಂತ ಮತ್ತು ಅತಿ ಶ್ರೀಮಂತ ವರ್ಗ ಕುಡಿಯುತ್ತಾರೆ. ಪ್ರೀಮಿಯಂ ಮದ್ಯವನ್ನು ರಾಜ್ಯದಲ್ಲಿ ಶೇ- 40% ರಷ್ಟು ಮದ್ಯಪ್ರಿಯರು ಕುಡಿಯುತ್ತಾರೆ. ಆರರಿಂದ ಹದಿನಾರರವರೆಗೆ ಬರುವ ಎಲ್ಲಾ ಮಾದರಿಯ ಮದ್ಯದ ದರವನ್ನು ಕಡಿಮೆ ಮಾಡಲಾಗ್ತಿದೆ.

ಪ್ರೀಮಿಯಂ ವಿಸ್ಕಿ, ಸ್ಕಾಚ್ ದರ ಇಳಿಸಿ ಹೆಚ್ಚಿನ ಆದಾಯ ನಿರೀಕ್ಷೆ

ಕರ್ನಾಟಕ ರಾಜ್ಯದ ಅಕ್ಕಪಕ್ಕದ ರಾಜ್ಯಗಳಲ್ಲಿ ಮತ್ತು ಮಹಾರಾಷ್ಟ್ರ, ಗೋವಾ, ಗುರ್ಗಾವ್, ದೆಹಲಿ ರಾಜ್ಯಗಳಲ್ಲಿ ನಮ್ಮ ರಾಜ್ಯದಲ್ಲಿ 3 ಸಾವಿರಕ್ಕೆ ಮಾರಾಟ ಮಾಡುವ ಮದ್ಯ ಕೇವಲ 900 ರುಪಾಯಿಗೆ ಸಿಗುತ್ತದೆ. ಇದರಿಂದ ರಾಜ್ಯದ ಹೈಕ್ಲಾಸ್ ಮದ್ಯಪ್ರಿಯರು ಬೇರೆಬೇರೆ ರಾಜ್ಯದ ಮದ್ಯಕ್ಕೆ ಮೊರೆ ಹೋಗುತ್ತಾರೆ‌. ಇದರಿಂದ ರಾಜ್ಯ ಸರ್ಕಾರಕ್ಕೆ ಸುಮಾರು 2,500 ರಿಂದ 3 ಸಾವಿರ ಕೋಟಿಯಷ್ಟು ನಷ್ಟ ಆಗ್ತಿತ್ತು. ಇಂದಿನಿಂದ ದರ ಇಳಿಕೆ ಆಗ್ತಿರೋದ್ರಿಂದ ಆದಾಯ ಹೆಚ್ಚಾಗಲಿದೆ.

ಇದನ್ನೂ ಓದಿ: Petrol Diesel Price on August 28: ಕಚ್ಚಾತೈಲ ಬೆಲೆ ಏರಿಳಿತ ಹೊರತಾಗಿಯೂ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್

ಈ ಹಿಂದೆ 2,500 ರಿಂದ 3 ಸಾವಿರ ರುಪಾಯಿ ಬೆಲೆ ಇರುವ ಒಂದು ಫುಲ್ ಬಾಟಲ್ ಪ್ರೀಮಿಯಂ ವಿಸ್ಕಿ ಬೆಲೆ ನಿನ್ನೆಯಿಂದ 600 ರಿಂದ 800 ರುಪಾಯಿ ವರೆಗೆ ಕಡಿಮೆ ಆಗಿದೆ. ಐದು ಸಾವಿರದಿಂದ ಎಂಟು ಸಾವಿರ ರುಪಾಯಿ ವರೆಗೆ ಇದ್ದ ಒಂದು ಫುಲ್ ಬಾಟಲ್ ಸ್ಕಾಚ್ ನ‌ ಮೇಲೆ ಒಂದು ಸಾವಿರ ರುಪಾಯಿ ವರೆಗೆ ಕಡಿಮೆ ಆಗಿದೆ. ಸ್ಕಾಚ್ ಗಳ ಮೇಲೆ ಶೇ 20 ರಿಂದ 25% ರಷ್ಟು ಕಡಿಮೆ ಆಗಿದೆ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ ಹೆಗ್ಡೆ ತಿಳಿಸಿದರು.

ಬಿಯರ್ ದರ ಈಗಾಗಲೇ ಮೂರು ಬಾರಿ ಏರಿದೆ ಎಂದು ಆಕ್ರೋಶ

ಇನ್ನೂ ಇತ್ತ ರಾಜ್ಯ ‌ಸರ್ಕಾರ ಕ್ಲಾಸ್ ಪೀಪಲ್ಸ್ ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ರೆ ಇತ್ತ ನಾರ್ಮಲ್ ಜನರು ಕುಡಿಯುವ ಪ್ರತಿ ಬಿಯರ್ ಮೇಲೆ 5 ರಿಂದ 30 ರುಪಾಯಿ ವರೆಗೂ ಹೆಚ್ಚಳ ಮಾಡಿದೆ. ಈ ಹಿಂದೆ 100 ರುಪಾಯಿ ಇದ್ದ ಬಿಯರ್ ಈಗ 120 ರುಪಾಯಿ. 120 ರುಪಾಯಿ ಇದ್ದ ಬಿಯರ್ 150 ರುಪಾಯಿ. 130 ರುಪಾಯಿ ಇದ್ದ ಬಿಯರ್ ಬೆಲೆ 150 ರುಪಾಯಿ ವರೆಗೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮದ್ಯಪ್ರಿಯರು ರಾಜ್ಯ ಸರ್ಕಾರ ಸ್ಕಾಚ್ ದರ ಕಡಿಮೆ ಮಾಡಿರುವುದು ಸಂತೋಷದ ವಿಚಾರ ಆದರೆ ಬಿಯರ್ ಈಗಾಗಲೇ ಮೂರು ಬಾರಿ ಹೆಚ್ಚಳ ಮಾಡಿದ್ರು. ಈಗ ಮತ್ತೆ ದರ ಹೆಚ್ಚಳ ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ನಲ್ಲಿ ರಾಜ್ಯ ಸರ್ಕಾರ ಇದೆ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರೀಮಿಯಂ ವಿಸ್ಕಿ, ಸ್ಕಾಚ್ ಗಳ ಮೇಲೆ ದರ ಕಡಿಮೆ ಮಾಡಿ ಗುಡ್ ನ್ಯೂಸ್ ನೀಡಿದ್ರೆ, ಇತ್ತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದು ನಾಲ್ಕನೇ ಬಾರಿಗೆ ಬಿಯರ್ ಹೆಚ್ಚಳ ಮಾಡಿ ಶಾಕ್ ನೀಡಿರೋದಂತು ಸುಳ್ಳಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:19 am, Wed, 28 August 24

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!