AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ!

ಕಳೆದ ನವೆಂಬರ್‌ನಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗಿತ್ತು. ಮೊದಲ ಹಂತದಲ್ಲಿ ಬಿ ಖಾತಾ ನಿವೇಶನಗಳಿಗೆ ಮಾತ್ರ ಎ ಖಾತಾ ನೀಡವ ಸೂಚನೆ ಇತ್ತು. ಆದರೆ ಈಗ ರಾಜ್ಯ ಸರ್ಕಾರ ಬಿ ಖಾತಾ ಹೊಂದಿರುವ ಫ್ಲ್ಯಾಟ್‌ಗಳಿಗೂ ಗುಡ್ ನ್ಯೂಸ್ ಕೊಟ್ಟಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 10, 2026 | 7:03 AM

Share

ಬೆಂಗಳೂರು, ಜನವರಿ 10: ಬೆಂಗಳೂರು (Bangalore) ನಗರದ ಬಡಾವಣೆಗಳಲ್ಲಿನ ಬಿ-ಖಾತಾ ನಿವೇಶನ, ಕಟ್ಟಡಗಳಿಗೆ ಮತ್ತು ನಗರ ಪಾಲಿಕೆಗಳ ವ್ಯಾಪ್ತಿಯ ಅಧಿಕೃತ ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಎ-ಖಾತಾ ಸೌಲಭ್ಯ ಸಿಗಲಿದೆ. ಕಾಯ್ದೆ 1961 ಅನ್ನು ಉಲ್ಲಂಘಿಸಿ ನಿರ್ಮಿಸಿರುವ ಅಧಿಕೃತ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಮಾತ್ರ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗುತ್ತದೆ. ಜೊತೆಗೆ ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿವೆ. ಜಿಬಿಎ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ನಿಯಮಗಳನ್ನೇ ಉಳಿದ ಕಡೆಗಳಿಗೂ ಅನ್ವಯಿಸಲಾಗುವುದು ಎನ್ನಲಾಗಿದೆ. ಒತ್ತುವರಿ ಮತ್ತು ಉಲ್ಲಂಘನೆಯ ಪ್ರಮಾಣಕ್ಕೆ ಅನುಗುಣವಾಗಿ ದಂಡದ ಪ್ರಮಾಣವನ್ನು ನಿಗದಿ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಎ ಖಾತಾ ನೀಡಲು ಮಾನದಂಡವೇನು?

  • ಅಪಾರ್ಟ್‌ಮೆಂಟ್​​ ಈ ವರ್ಷದ ಅಸ್ತಿ ತೆರಿಗೆ ಪಾವತಿ ಮಾಡಿರಬೇಕು.
  • ಅಪಾರ್ಟ್‌ಮೆಂಟ್​ಗೆ ನಕ್ಷೆ ಇರಬೇಕು.
  • ಸರ್ಕಾರ ಸೂಚಿಸಿದ ಮಾರ್ಗಸೂಚಿ ದರದ ಶೇಕಡಾ 5ರಷ್ಟು ಹಣ ಪಾವತಿ ಮಾಡಬೇಕು.
  • ಅಪಾರ್ಟ್‌ಮೆಂಟ್ ಲ್ಯಾಂಡ್​ಗೆ ಬಿ ಖಾತಾ ಇರಬೇಕು.
  • ಅಪಾರ್ಟಮೆಂಟ್ ಮಾಲೀಕರು ವೈಯಕ್ತಿಕವಾಗಿ ಇ ಖಾತಾಗೆ ಅಪ್ಲೈ ಮಾಡಬೇಕು.
  • ನಕ್ಷೆ ಮೀರಿ ಕಟ್ಟಡ ನಿರ್ಮಾಣ ಮಾಡಿದ್ರೆ ಮಾರ್ಗಸೂಚಿ ಬೆಲೆಯ ಶೇಕಡಾ 50 ರಷ್ಟು ಹಣ ಪಾವತಿ ಮಾಡಬೇಕು.
  • ಅನ್​ಲೈನ್ ಮುಖಾಂತರ ಇ ಖಾತಾಗೆ ಅರ್ಜಿ ಸಲ್ಲಿಸಬಹುದು.
  • ಸಲ್ಲಿಕೆ ಮಾಡಿದ ದಾಖಲೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ ಖಾತಾ ವಿತರಣೆ ಮಾಡುತ್ತಾರೆ.

ಮತ್ತೊಂದೆಡೆ, ಎ ಖಾತಾಗೆ ಪರಿವರ್ತನೆ ಮಾಡಿಕೊಡುವ ಈ ಪ್ರಕ್ರಿಯೆಯನ್ನು ಕೇವಲ ಸರ್ಕಾರದ ಆದಾಯ ಹೆಚ್ಚಿಸುವ ಉದ್ದೇಶದಿಂದ ಮಾಡುತ್ತಿದ್ದಾರೆ. ಇದು ಕಾನೂನು ಪ್ರಕಾರ ಸರಿಯಾಗುವುದಿಲ್ಲ. ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದಾರೆ ಎಂಬ ಆರೋಪಗಳೂ ಹಲವೆಡೆ ಕೇಳಿಬರುತ್ತಿವೆ.

ಇದನ್ನೂ ಓದಿ:  ಬಿ ಖಾತಾದಿಂದ ಎ ಖಾತಾಗೆ ಬದಲಾವಣೆ: ಜನರ ಪ್ರಶ್ನೆಗಳಿಗೆ ಯಾರಿಗೂ ಉತ್ತರವೇ ಗೊತ್ತಿಲ್ಲ

ಒಟ್ಟಿನಲ್ಲಿ ರಾಜ್ಯದಲ್ಲಿ ಇ ಖಾತಾ ಅಡಿಯಲ್ಲಿ ಇರುವ ಅನೇಕ ಸ್ವತ್ತುಗಳಿಗೆ ಎ ಖಾತಾದ ಭಾಗ್ಯ ಸಿಕಿಲ್ಲ. ಆದರೆ ಅಪಾರ್ಟ್‌ಮೆಂಟ್​ಗಳಿಗೆಮಾತ್ರ ಎ ಖಾತಾ ನೀಡುವ ಭರವಸೆ ನೀಡಿರುವ ಸರ್ಕಾರ ಆ ಮೂಲಕ ಆದಾಯ ಹೆಚ್ಚಳಕ್ಕೆ ಮುಂದಾಗಿದೆ.

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!