AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ!

ಕಳೆದ ನವೆಂಬರ್‌ನಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗಿತ್ತು. ಮೊದಲ ಹಂತದಲ್ಲಿ ಬಿ ಖಾತಾ ನಿವೇಶನಗಳಿಗೆ ಮಾತ್ರ ಎ ಖಾತಾ ನೀಡವ ಸೂಚನೆ ಇತ್ತು. ಆದರೆ ಈಗ ರಾಜ್ಯ ಸರ್ಕಾರ ಬಿ ಖಾತಾ ಹೊಂದಿರುವ ಫ್ಲ್ಯಾಟ್‌ಗಳಿಗೂ ಗುಡ್ ನ್ಯೂಸ್ ಕೊಟ್ಟಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 10, 2026 | 7:03 AM

Share

ಬೆಂಗಳೂರು, ಜನವರಿ 10: ಬೆಂಗಳೂರು (Bangalore) ನಗರದ ಬಡಾವಣೆಗಳಲ್ಲಿನ ಬಿ-ಖಾತಾ ನಿವೇಶನ, ಕಟ್ಟಡಗಳಿಗೆ ಮತ್ತು ನಗರ ಪಾಲಿಕೆಗಳ ವ್ಯಾಪ್ತಿಯ ಅಧಿಕೃತ ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಎ-ಖಾತಾ ಸೌಲಭ್ಯ ಸಿಗಲಿದೆ. ಕಾಯ್ದೆ 1961 ಅನ್ನು ಉಲ್ಲಂಘಿಸಿ ನಿರ್ಮಿಸಿರುವ ಅಧಿಕೃತ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಮಾತ್ರ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗುತ್ತದೆ. ಜೊತೆಗೆ ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿವೆ. ಜಿಬಿಎ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ನಿಯಮಗಳನ್ನೇ ಉಳಿದ ಕಡೆಗಳಿಗೂ ಅನ್ವಯಿಸಲಾಗುವುದು ಎನ್ನಲಾಗಿದೆ. ಒತ್ತುವರಿ ಮತ್ತು ಉಲ್ಲಂಘನೆಯ ಪ್ರಮಾಣಕ್ಕೆ ಅನುಗುಣವಾಗಿ ದಂಡದ ಪ್ರಮಾಣವನ್ನು ನಿಗದಿ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಎ ಖಾತಾ ನೀಡಲು ಮಾನದಂಡವೇನು?

  • ಅಪಾರ್ಟ್‌ಮೆಂಟ್​​ ಈ ವರ್ಷದ ಅಸ್ತಿ ತೆರಿಗೆ ಪಾವತಿ ಮಾಡಿರಬೇಕು.
  • ಅಪಾರ್ಟ್‌ಮೆಂಟ್​ಗೆ ನಕ್ಷೆ ಇರಬೇಕು.
  • ಸರ್ಕಾರ ಸೂಚಿಸಿದ ಮಾರ್ಗಸೂಚಿ ದರದ ಶೇಕಡಾ 5ರಷ್ಟು ಹಣ ಪಾವತಿ ಮಾಡಬೇಕು.
  • ಅಪಾರ್ಟ್‌ಮೆಂಟ್ ಲ್ಯಾಂಡ್​ಗೆ ಬಿ ಖಾತಾ ಇರಬೇಕು.
  • ಅಪಾರ್ಟಮೆಂಟ್ ಮಾಲೀಕರು ವೈಯಕ್ತಿಕವಾಗಿ ಇ ಖಾತಾಗೆ ಅಪ್ಲೈ ಮಾಡಬೇಕು.
  • ನಕ್ಷೆ ಮೀರಿ ಕಟ್ಟಡ ನಿರ್ಮಾಣ ಮಾಡಿದ್ರೆ ಮಾರ್ಗಸೂಚಿ ಬೆಲೆಯ ಶೇಕಡಾ 50 ರಷ್ಟು ಹಣ ಪಾವತಿ ಮಾಡಬೇಕು.
  • ಅನ್​ಲೈನ್ ಮುಖಾಂತರ ಇ ಖಾತಾಗೆ ಅರ್ಜಿ ಸಲ್ಲಿಸಬಹುದು.
  • ಸಲ್ಲಿಕೆ ಮಾಡಿದ ದಾಖಲೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ ಖಾತಾ ವಿತರಣೆ ಮಾಡುತ್ತಾರೆ.

ಮತ್ತೊಂದೆಡೆ, ಎ ಖಾತಾಗೆ ಪರಿವರ್ತನೆ ಮಾಡಿಕೊಡುವ ಈ ಪ್ರಕ್ರಿಯೆಯನ್ನು ಕೇವಲ ಸರ್ಕಾರದ ಆದಾಯ ಹೆಚ್ಚಿಸುವ ಉದ್ದೇಶದಿಂದ ಮಾಡುತ್ತಿದ್ದಾರೆ. ಇದು ಕಾನೂನು ಪ್ರಕಾರ ಸರಿಯಾಗುವುದಿಲ್ಲ. ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದಾರೆ ಎಂಬ ಆರೋಪಗಳೂ ಹಲವೆಡೆ ಕೇಳಿಬರುತ್ತಿವೆ.

ಇದನ್ನೂ ಓದಿ:  ಬಿ ಖಾತಾದಿಂದ ಎ ಖಾತಾಗೆ ಬದಲಾವಣೆ: ಜನರ ಪ್ರಶ್ನೆಗಳಿಗೆ ಯಾರಿಗೂ ಉತ್ತರವೇ ಗೊತ್ತಿಲ್ಲ

ಒಟ್ಟಿನಲ್ಲಿ ರಾಜ್ಯದಲ್ಲಿ ಇ ಖಾತಾ ಅಡಿಯಲ್ಲಿ ಇರುವ ಅನೇಕ ಸ್ವತ್ತುಗಳಿಗೆ ಎ ಖಾತಾದ ಭಾಗ್ಯ ಸಿಕಿಲ್ಲ. ಆದರೆ ಅಪಾರ್ಟ್‌ಮೆಂಟ್​ಗಳಿಗೆಮಾತ್ರ ಎ ಖಾತಾ ನೀಡುವ ಭರವಸೆ ನೀಡಿರುವ ಸರ್ಕಾರ ಆ ಮೂಲಕ ಆದಾಯ ಹೆಚ್ಚಳಕ್ಕೆ ಮುಂದಾಗಿದೆ.

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್