AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಹಿನ್ನೆಲೆ ಪ್ರಯಾಣಿಕರಿಗೆ ನಮ್ಮ ಮೆಟ್ರೋದಿಂದ ಗುಡ್​ ನ್ಯೂಸ್​, ಮೊಬೈಲ್​ನಲ್ಲೇ ಟಿಕೆಟ್​ ಖರೀದಿಸಲು ಅವಕಾಶ

ಇನ್ನು ಮುಂದೆ ಪ್ರಯಾಣಿಕರು ಮೊಬೈಲ್​ನಲ್ಲೇ ಮೆಟ್ರೋ ಪ್ರಯಾಣದ ಟಿಕೆಟ್​ ಖರೀದಿಸಬಹುದು.

ರಾಜ್ಯೋತ್ಸವ ಹಿನ್ನೆಲೆ ಪ್ರಯಾಣಿಕರಿಗೆ ನಮ್ಮ ಮೆಟ್ರೋದಿಂದ ಗುಡ್​ ನ್ಯೂಸ್​, ಮೊಬೈಲ್​ನಲ್ಲೇ ಟಿಕೆಟ್​ ಖರೀದಿಸಲು ಅವಕಾಶ
ನಮ್ಮ ಮೆಟ್ರೋ
TV9 Web
| Edited By: |

Updated on:Oct 31, 2022 | 6:32 PM

Share

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನೆಲೆ ರಾಜ್ಯದ ವಿವಿಧೆಡೆ ಬರಪೂರ ತಯಾರಿ ನಡೆದಿದೆ. ಹಾಗೇ ಕನ್ನಡ ರಾಜ್ಯೋತ್ಸವ (Kannada Rajyotsava) ಅಂಗವಾಗಿ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದೆ. ಇನ್ನು ಮುಂದೆ ಪ್ರಯಾಣಿಕರು ಮೊಬೈಲ್​ನಲ್ಲೇ ಮೆಟ್ರೋ ಪ್ರಯಾಣದ ಟಿಕೆಟ್​ ಖರೀದಿಸಲು ಅವಕಾಶ ನೀಡಲಾಗಿದೆ. ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ಬಗೆಹರಿಸಲು ನಾಳೆ (ನ.1) ರಿಂದ ಕ್ಯೂಆರ್​ ಕೋಡ್​ ಬಳಸಿ ಪ್ರವೇಶ, ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕನ್ನಡ ರಾಜ್ಯೋತ್ಸವದಲ್ಲಿ 50 ಸಾವಿರ ಜನರಿಗೆ ಹೋಳಿಗೆ ಊಟ

ಬೆಳಗಾವಿ: ಪ್ರತಿವರ್ಷ ಕನ್ನಡ ರಾಜ್ಯೋತ್ಸವವನ್ನು ಗಡಿನಾಡು, ಕುಂದಾನಗರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಆಚರಿಸುತ್ತಾರೆ. ಚೆನ್ನಮ್ಮನ ನಾಡಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವವನ್ನು ಕಣ್ತುಂಬಿಕೊಳ್ಳಲು ರಾಜ್ಯದ ನಾನಾ ಭಾಗದಿಂದ ಜನರು ಆಗಮಿಸುತ್ತಾರೆ. ಆದರೆ ಕೊರೊನಾ ಕಾರಣದಿಂದ ಕಳೆದ 2-3 ವರ್ಷದಿಂದ ಬೆಳಗಾವಿಯಲ್ಲಿ ರಾಜ್ಯೋತ್ಸವ ಕಳೆಗುಂದಿತ್ತು. ಆದರೆ ಈ ವರ್ಷ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು, ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹೋಳಿಗೆ ಊಟ ಏರ್ಪಡಿಸಲಾಗಿದೆ.

ನಗರದ ಹುಕ್ಕೇರಿ ಹಿರೇಮಠ ವತಿಯಿಂದ 50 ಸಾವಿರ ಜನರಿಗೆ, ಒಬ್ಬರಿಗೆ ತಲಾ ಎರಡು ಹೋಳಿಗೆಯಂತೆ 1 ಲಕ್ಷ ಹೋಳಿಗೆಯನ್ನು ಸಿದ್ಧಪಡಿಸಲಾಗುತ್ತಿದೆ. ಜೊತೆಗೆ ಊಟದಲ್ಲಿ ಬದನೆಕಾಯಿ ಪಲ್ಯ, ಅನ್ನ-ಸಾಂಬಾರು ಇರಲಿದೆ ಎಂದು ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿಯ 200 ಬಾಣಸಿಗರು ಊಟ ಸಿದ್ಧಪಡಿಸುತ್ತಿದ್ದಾರೆ. 150 ಜನ ಹೆಣ್ಣಮಕ್ಕಳಿಂದ ಹೋಳಿಗೆ, 50 ಪುರುಷರಿಂದ ಅನ್ನ-ಸಾಂಬರು, ಪಲ್ಯ ತಯಾರು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸೇರಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಹುಕ್ಕೇರಿ ಹಿರೇಮಠಕ್ಕೆ ಸಹಕಾರ ನೀಡುತ್ತಿದ್ದಾರೆ. ಬೆಳಗಾವಿಯ ಸರ್ದಾರ್ ‌ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಯಿಂದಲೇ ಹೋಳಿಗೆ ದಾಸೋಹ ಪ್ರಾರಂಭ ಆಗಲಿದೆ. ಈ ಬೃಹತ್​ ಅನ್ನ ದಾಸೋಹಕ್ಕೆ ಹಿರಿಯ ನಟ ಸಾಯಿಕುಮಾರ್, ಉಸ್ತುವಾರಿ ‌ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಲಿದ್ದಾರೆ.

ಅತೀ ಉದ್ದದ ಕನ್ನಡ ಭಾವುಟ ಪ್ರದರ್ಶನ

ಕನ್ನಡ ಮನಸುಗಳು ಎಂಬ ಕನ್ನಡ ಸಂಘಟನೆಯಿಂದ ಬೆಳಗಾವಿಯ ಚೆನ್ನಮ್ಮ ಸರ್ಕಲ್​ನಿಂದ ಸುಮಾರು 3200 ಮೀಟರ್ ಉದ್ದದ ಕನ್ನಡ ಬಾವುಟ ಪ್ರದರ್ಶನ ನಡೆಯಲಿದೆ. ಈ ಮೂಲಕ ಲಂಡನ್ ಬುಕ್ ಆಫ್ ರೆಕಾರ್ಡ್ ಸೇರಲಿದೆ. ಇದೇ ಸಂಘಟನೆ ಈ ಹಿಂದೆ ಬೆಂಗಳೂರಿನಲ್ಲಿ 2040 ಮೀಟರ್ ಉದ್ದದ ಕನ್ನಡ ಬಾವುಟ ಪ್ರದರ್ಶನ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Mon, 31 October 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್