AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಂಡಕ್ಟರ್ ಜತೆಗಿನ ಕಿರಿಕ್​ಗೆ ಬೀಳಲಿದೆ ಬ್ರೇಕ್

ಶಕ್ತಿ ಯೋಜನೆ ಆರಂಭವಾದ ಮೇಲೆ ಬಿಎಂಟಿಸಿ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಕಿರಿಕ್ ಆಗುತ್ತಿತ್ತು. ಅದಕ್ಕೆ ಕಾರಣ, ಆಧಾರ್ ಕಾರ್ಡ್​​ನಲ್ಲಿ ಬೇರೆ ಭಾಷೆಯಲ್ಲಿ ವಿಳಾಸ ಇದೆ ಎಂಬುದು. ಅದಕ್ಕೀಗ ಬಿಎಂಟಿಸಿ ಬ್ರೇಕ್ ಹಾಕಿದ್ದು, ಆಧಾರ್ ಕಾರ್ಡ್ ಯಾವ ಭಾಷೆಯಲ್ಲಿದ್ದರೂ ಪರವಾಗಿಲ್ಲ, ವಿಳಾಸ ಕರ್ನಾಟಕದಾಗಿದ್ದರೆ ಸಾಕು ಎಂದು ಆದೇಶ ಹೊರಡಿಸಿದೆ.

ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಂಡಕ್ಟರ್ ಜತೆಗಿನ ಕಿರಿಕ್​ಗೆ ಬೀಳಲಿದೆ ಬ್ರೇಕ್
ಬಿಎಂಟಿಸಿ ಬಸ್​
Kiran Surya
| Edited By: |

Updated on: Dec 12, 2024 | 7:40 AM

Share

ಬೆಂಗಳೂರು, ಡಿಸೆಂಬರ್ 12: ಈ ಹಿಂದೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ. ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಜಗಳಗಳಾಗುತ್ತಿದ್ದವು. ಇದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಸೂಚನೆ ನೀಡಿದೆ. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದವರು, ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ, ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಆಧಾರ್ ಕಾರ್ಡ್​​ನಲ್ಲಿ ಕನ್ನಡದಲ್ಲಿ ವಿಳಾಸವಿರಬೇಕೆಂದು ಬಿಎಂಟಿಸಿಯ ಕಂಡಕ್ಟರ್​ಗಳು ಕಿರಿಕ್ ಮಾಡುತ್ತಿದ್ದರು. ದೇಶದ ನಾಗರೀಕರು ಆಧಾರ್ ಕಾರ್ಡನ್ನು ದೇಶದಾದ್ಯಂತ ಯಾವುದೇ ರಾಜ್ಯದಲ್ಲಿ ಪಡೆಯಲು ಅವಕಾಶವಿದ್ದು, ಯಾವ ರಾಜ್ಯದಲ್ಲಿ ಆಧಾರ್ ಕಾರ್ಡ್ ಅನ್ನು ಪಡೆಯುತ್ತಾರೋ ಆ ರಾಜ್ಯದ ಅಧಿಕೃತ ಭಾಷೆ ಮತ್ತು ಅಂಗ್ಲ ಭಾಷೆಯಲ್ಲಿ (ದ್ವಿಭಾಷೆ) ಆಧಾರ್ ಕಾರ್ಡ್ ಮುದ್ರಣವಾಗುತ್ತದೆ. ಆದ್ದರಿಂದ ಕನ್ನಡ ಹೊರತುಪಡಿಸಿ ಅನ್ಯಭಾಷೆಯಲ್ಲಿ ಮುದ್ರಿತ (ದ್ವಿಭಾಷೆ) ಆಧಾರ್ ಕಾರ್ಡ್ ಗಳಲ್ಲಿನ ಆಂಗ್ಲ ಭಾಷೆಯಲ್ಲಿರುವ ವಿಳಾಸವನ್ನು ಪರಿಶೀಲಿಸಿ ವಿಳಾಸವು ಕರ್ನಾಟಕ ರಾಜ್ಯದಾಗಿದ್ದಲ್ಲಿ, ಆ ಆಧಾರ್ ಕಾರ್ಡ್ ಅನ್ನು ಮಾನ್ಯ ಮಾಡಿ ಶಕ್ತಿಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಚಾಲಕ ರಹಿತ ನಮ್ಮ ಮೆಟ್ರೋ ಆರಂಭಕ್ಕೂ ಮುನ್ನವೇ ಬಂತು ನೂರಾರು ಕೋಟಿ ರೂ. ಆದಾಯ..!

ಒಟ್ಟಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣ ಮಾಡಬೇಕೆಂದರೆ, ಆಧಾರ್ ಕಾರ್ಡ್ ಕನ್ನಡದಲ್ಲೇ ಇರಬೇಕೆಂದು ಕಿರಿಕ್ ಮಾಡುತ್ತಿದ್ದ ಕಂಡಕ್ಟರ್​ಗಳಿಗೆ ಬಿಎಂಟಿಸಿಯ ಹೊಸ ಆದೇಶ ಬ್ರೇಕ್ ಹಾಕಿರುವುದಂತೂ ನಿಜ. ಬಿಎಂಟಿಸಿ ಆದೇಶದಿಂದ ಮಹಿಳಾ ಪ್ರಯಾಣಿಕರು ಸಂತಸಗೊಂಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ