AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಂಡಕ್ಟರ್ ಜತೆಗಿನ ಕಿರಿಕ್​ಗೆ ಬೀಳಲಿದೆ ಬ್ರೇಕ್

ಶಕ್ತಿ ಯೋಜನೆ ಆರಂಭವಾದ ಮೇಲೆ ಬಿಎಂಟಿಸಿ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಕಿರಿಕ್ ಆಗುತ್ತಿತ್ತು. ಅದಕ್ಕೆ ಕಾರಣ, ಆಧಾರ್ ಕಾರ್ಡ್​​ನಲ್ಲಿ ಬೇರೆ ಭಾಷೆಯಲ್ಲಿ ವಿಳಾಸ ಇದೆ ಎಂಬುದು. ಅದಕ್ಕೀಗ ಬಿಎಂಟಿಸಿ ಬ್ರೇಕ್ ಹಾಕಿದ್ದು, ಆಧಾರ್ ಕಾರ್ಡ್ ಯಾವ ಭಾಷೆಯಲ್ಲಿದ್ದರೂ ಪರವಾಗಿಲ್ಲ, ವಿಳಾಸ ಕರ್ನಾಟಕದಾಗಿದ್ದರೆ ಸಾಕು ಎಂದು ಆದೇಶ ಹೊರಡಿಸಿದೆ.

ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಂಡಕ್ಟರ್ ಜತೆಗಿನ ಕಿರಿಕ್​ಗೆ ಬೀಳಲಿದೆ ಬ್ರೇಕ್
ಬಿಎಂಟಿಸಿ ಬಸ್​
Kiran Surya
| Edited By: |

Updated on: Dec 12, 2024 | 7:40 AM

Share

ಬೆಂಗಳೂರು, ಡಿಸೆಂಬರ್ 12: ಈ ಹಿಂದೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ. ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಜಗಳಗಳಾಗುತ್ತಿದ್ದವು. ಇದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಸೂಚನೆ ನೀಡಿದೆ. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದವರು, ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ, ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಆಧಾರ್ ಕಾರ್ಡ್​​ನಲ್ಲಿ ಕನ್ನಡದಲ್ಲಿ ವಿಳಾಸವಿರಬೇಕೆಂದು ಬಿಎಂಟಿಸಿಯ ಕಂಡಕ್ಟರ್​ಗಳು ಕಿರಿಕ್ ಮಾಡುತ್ತಿದ್ದರು. ದೇಶದ ನಾಗರೀಕರು ಆಧಾರ್ ಕಾರ್ಡನ್ನು ದೇಶದಾದ್ಯಂತ ಯಾವುದೇ ರಾಜ್ಯದಲ್ಲಿ ಪಡೆಯಲು ಅವಕಾಶವಿದ್ದು, ಯಾವ ರಾಜ್ಯದಲ್ಲಿ ಆಧಾರ್ ಕಾರ್ಡ್ ಅನ್ನು ಪಡೆಯುತ್ತಾರೋ ಆ ರಾಜ್ಯದ ಅಧಿಕೃತ ಭಾಷೆ ಮತ್ತು ಅಂಗ್ಲ ಭಾಷೆಯಲ್ಲಿ (ದ್ವಿಭಾಷೆ) ಆಧಾರ್ ಕಾರ್ಡ್ ಮುದ್ರಣವಾಗುತ್ತದೆ. ಆದ್ದರಿಂದ ಕನ್ನಡ ಹೊರತುಪಡಿಸಿ ಅನ್ಯಭಾಷೆಯಲ್ಲಿ ಮುದ್ರಿತ (ದ್ವಿಭಾಷೆ) ಆಧಾರ್ ಕಾರ್ಡ್ ಗಳಲ್ಲಿನ ಆಂಗ್ಲ ಭಾಷೆಯಲ್ಲಿರುವ ವಿಳಾಸವನ್ನು ಪರಿಶೀಲಿಸಿ ವಿಳಾಸವು ಕರ್ನಾಟಕ ರಾಜ್ಯದಾಗಿದ್ದಲ್ಲಿ, ಆ ಆಧಾರ್ ಕಾರ್ಡ್ ಅನ್ನು ಮಾನ್ಯ ಮಾಡಿ ಶಕ್ತಿಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಚಾಲಕ ರಹಿತ ನಮ್ಮ ಮೆಟ್ರೋ ಆರಂಭಕ್ಕೂ ಮುನ್ನವೇ ಬಂತು ನೂರಾರು ಕೋಟಿ ರೂ. ಆದಾಯ..!

ಒಟ್ಟಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣ ಮಾಡಬೇಕೆಂದರೆ, ಆಧಾರ್ ಕಾರ್ಡ್ ಕನ್ನಡದಲ್ಲೇ ಇರಬೇಕೆಂದು ಕಿರಿಕ್ ಮಾಡುತ್ತಿದ್ದ ಕಂಡಕ್ಟರ್​ಗಳಿಗೆ ಬಿಎಂಟಿಸಿಯ ಹೊಸ ಆದೇಶ ಬ್ರೇಕ್ ಹಾಕಿರುವುದಂತೂ ನಿಜ. ಬಿಎಂಟಿಸಿ ಆದೇಶದಿಂದ ಮಹಿಳಾ ಪ್ರಯಾಣಿಕರು ಸಂತಸಗೊಂಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್