AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಂಡಕ್ಟರ್ ಜತೆಗಿನ ಕಿರಿಕ್​ಗೆ ಬೀಳಲಿದೆ ಬ್ರೇಕ್

ಶಕ್ತಿ ಯೋಜನೆ ಆರಂಭವಾದ ಮೇಲೆ ಬಿಎಂಟಿಸಿ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಕಿರಿಕ್ ಆಗುತ್ತಿತ್ತು. ಅದಕ್ಕೆ ಕಾರಣ, ಆಧಾರ್ ಕಾರ್ಡ್​​ನಲ್ಲಿ ಬೇರೆ ಭಾಷೆಯಲ್ಲಿ ವಿಳಾಸ ಇದೆ ಎಂಬುದು. ಅದಕ್ಕೀಗ ಬಿಎಂಟಿಸಿ ಬ್ರೇಕ್ ಹಾಕಿದ್ದು, ಆಧಾರ್ ಕಾರ್ಡ್ ಯಾವ ಭಾಷೆಯಲ್ಲಿದ್ದರೂ ಪರವಾಗಿಲ್ಲ, ವಿಳಾಸ ಕರ್ನಾಟಕದಾಗಿದ್ದರೆ ಸಾಕು ಎಂದು ಆದೇಶ ಹೊರಡಿಸಿದೆ.

ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಂಡಕ್ಟರ್ ಜತೆಗಿನ ಕಿರಿಕ್​ಗೆ ಬೀಳಲಿದೆ ಬ್ರೇಕ್
ಬಿಎಂಟಿಸಿ ಬಸ್​
Kiran Surya
| Edited By: |

Updated on: Dec 12, 2024 | 7:40 AM

Share

ಬೆಂಗಳೂರು, ಡಿಸೆಂಬರ್ 12: ಈ ಹಿಂದೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ. ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಜಗಳಗಳಾಗುತ್ತಿದ್ದವು. ಇದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಸೂಚನೆ ನೀಡಿದೆ. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದವರು, ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ, ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಆಧಾರ್ ಕಾರ್ಡ್​​ನಲ್ಲಿ ಕನ್ನಡದಲ್ಲಿ ವಿಳಾಸವಿರಬೇಕೆಂದು ಬಿಎಂಟಿಸಿಯ ಕಂಡಕ್ಟರ್​ಗಳು ಕಿರಿಕ್ ಮಾಡುತ್ತಿದ್ದರು. ದೇಶದ ನಾಗರೀಕರು ಆಧಾರ್ ಕಾರ್ಡನ್ನು ದೇಶದಾದ್ಯಂತ ಯಾವುದೇ ರಾಜ್ಯದಲ್ಲಿ ಪಡೆಯಲು ಅವಕಾಶವಿದ್ದು, ಯಾವ ರಾಜ್ಯದಲ್ಲಿ ಆಧಾರ್ ಕಾರ್ಡ್ ಅನ್ನು ಪಡೆಯುತ್ತಾರೋ ಆ ರಾಜ್ಯದ ಅಧಿಕೃತ ಭಾಷೆ ಮತ್ತು ಅಂಗ್ಲ ಭಾಷೆಯಲ್ಲಿ (ದ್ವಿಭಾಷೆ) ಆಧಾರ್ ಕಾರ್ಡ್ ಮುದ್ರಣವಾಗುತ್ತದೆ. ಆದ್ದರಿಂದ ಕನ್ನಡ ಹೊರತುಪಡಿಸಿ ಅನ್ಯಭಾಷೆಯಲ್ಲಿ ಮುದ್ರಿತ (ದ್ವಿಭಾಷೆ) ಆಧಾರ್ ಕಾರ್ಡ್ ಗಳಲ್ಲಿನ ಆಂಗ್ಲ ಭಾಷೆಯಲ್ಲಿರುವ ವಿಳಾಸವನ್ನು ಪರಿಶೀಲಿಸಿ ವಿಳಾಸವು ಕರ್ನಾಟಕ ರಾಜ್ಯದಾಗಿದ್ದಲ್ಲಿ, ಆ ಆಧಾರ್ ಕಾರ್ಡ್ ಅನ್ನು ಮಾನ್ಯ ಮಾಡಿ ಶಕ್ತಿಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಚಾಲಕ ರಹಿತ ನಮ್ಮ ಮೆಟ್ರೋ ಆರಂಭಕ್ಕೂ ಮುನ್ನವೇ ಬಂತು ನೂರಾರು ಕೋಟಿ ರೂ. ಆದಾಯ..!

ಒಟ್ಟಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣ ಮಾಡಬೇಕೆಂದರೆ, ಆಧಾರ್ ಕಾರ್ಡ್ ಕನ್ನಡದಲ್ಲೇ ಇರಬೇಕೆಂದು ಕಿರಿಕ್ ಮಾಡುತ್ತಿದ್ದ ಕಂಡಕ್ಟರ್​ಗಳಿಗೆ ಬಿಎಂಟಿಸಿಯ ಹೊಸ ಆದೇಶ ಬ್ರೇಕ್ ಹಾಕಿರುವುದಂತೂ ನಿಜ. ಬಿಎಂಟಿಸಿ ಆದೇಶದಿಂದ ಮಹಿಳಾ ಪ್ರಯಾಣಿಕರು ಸಂತಸಗೊಂಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ