AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು

ಕೋಲ್ಕತ್ತಾದ ಟಿಟಾಘರ್‌ನಲ್ಲಿ ತಯಾರಾದ ಚಾಲಕರಹಿತ ಮೆಟ್ರೋ ರೈಲು ಬೆಂಗಳೂರಿಗೆ ಆಗಮಿಸುತ್ತಿದೆ. ಆರ್‌ವಿ ರೋಡ್ ಮತ್ತು ಬೊಮ್ಮಸಂದ್ರ ನಡುವೆ ಈ ರೈಲು ಸಂಚಾರ ನಡೆಸಲಿದೆ. ಬಿಎಂಆರ್‌ಸಿಎಲ್ ಅಧಿಕಾರಿಗಳ ಸಮ್ಮುಖದಲ್ಲಿ ಕೇಂದ್ರ ಸಚಿವರು ಈ ರೈಲಿನ ಪೂರೈಕೆಗೆ ಅನುಮೋದನೆ ನೀಡಿದ್ದಾರೆ. ಭವಿಷ್ಯದಲ್ಲಿ ತಿಂಗಳಿಗೆ ಒಂದು ರೈಲನ್ನು ಪೂರೈಸುವ ಯೋಜನೆ ಇದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು
Kiran Surya
| Edited By: |

Updated on: Jan 06, 2025 | 8:33 PM

Share

ಬೆಂಗಳೂರು, ಜನವರಿ 06: ನಮ್ಮ ಮೆಟ್ರೋ (Metro) ಬಹುನಿರೀಕ್ಷಿತ ಹಳದಿ ಮಾರ್ಗದಲ್ಲಿ ಸಂಚಾರ ಮಾಡಲಿರುವ ರೈಲು ಕೊಲ್ಕತ್ತಾದ ಟಿಟಾಘರ್​​ನಿಂದ ಬೆಂಗಳೂರಿನತ್ತ ಹೊರಟಿದೆ. ಇನ್ನು 15 ದಿನದಲ್ಲಿ ಬೆಂಗಳೂರಿನ ಹೆಬ್ಬಗೋಡಿ ಡ್ರೈವರ್ ಲೆಸ್ ರೈಲು ತಲುಪಲಿದೆ. ಆ ಮೂಲಕ ಹಳದಿ ಮಾರ್ಗದ ಉದ್ಘಾಟನೆಗೆ ಕಾಯುತ್ತಿದ್ದವರಿಗೆ ನಮ್ಮ ಮೆಟ್ರೋ ಗುಡ್​ ನ್ಯೂಸ್ ನೀಡಿದೆ.

ಆರ್ವಿ ರೋಡ್ ಟು ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಮಾಡಲಿದೆ. ಕೊಲ್ಕತ್ತಾದ ಟಿಟಾಘರ್​​ನಲ್ಲಿ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ತಯಾರಿಸಲಾಗಿದೆ. ಹಳದಿ ಮಾರ್ಗಕ್ಕೆ ರೈಲು ಸೆಟ್‌ ಪೂರೈಕೆಗೆ ಬಿಎಂಆರ್‌ಸಿಎಲ್ ಅಧಿಕಾರಿಗಳ ಸಮ್ಮುಖದಲ್ಲಿ ಇಂದು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಇದನ್ನೂ ಓದಿ: ಇದೇ ತಿಂಗಳು ಬೆಂಗಳೂರಿಗೆ ಬರಲಿದೆ ನಮ್ಮ ಮೆಟ್ರೋ ಹಳದಿ ಮಾರ್ಗದ ಮೊದಲ ರೈಲು: ತೇಜಸ್ವಿ ಸೂರ್ಯ

ಇಂದು ಕೊಲ್ಕತ್ತಾದ ಘಟಕದಿಂದ ರೈಲು ಸೆಟ್‌ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಇನ್ನು ಮುಂದಿನ ದಿನಗಳಲ್ಲಿ ಇಲ್ಲಿಂದಲೇ ತಿಂಗಳಿಗೆ 1 ಮೆಟ್ರೋ ರೈಲು ವಿತರಿಸಲು ತಯಾರಿ ನಡೆಸಲಾಗುತ್ತಿದೆ. ನಂತರ ಸೆಪ್ಟೆಂಬರ್ ತಿಂಗಳಿನಿಂದ 2 ರೈಲು ಸೆಟ್‌ಗಳನ್ನು ಪೂರೈಸಲು ಟಿಟಾಘರ್ ಸಿದ್ದತೆ ನಡೆಸಿದೆ ಎಂದು ತಿಳಿಸಿದ್ದರು. ಬಿಎಂಆರ್​ಸಿಎಲ್​ ಮೊದಲ ರೈಲು ಹಸ್ತಾಂತರದ ವೇಳೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರಿಗೆ ಸಾಥ್ ನೀಡಿದ್ದರು.

ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸಲಿರುವ ನಮ್ಮ ಮೆಟ್ರೋ – ಹಳದಿ ಮಾರ್ಗದ ಪ್ರಥಮ ರೈಲು ಬೋಗಿಗಳಿಗೆ ಇಂದು ಕೊಲ್ಕತ್ತಾದಲ್ಲಿ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ: ಬೊಮ್ಮಸಂದ್ರ ನಿಲ್ದಾಣಕ್ಕೆ ತೈವಾನ್‌ ಕಂಪನಿಯ ಹೆಸರು! ಕಾರಣ ಇಲ್ಲಿದೆ

ಸಿಆರ್​ಆರ್​ಸಿ- ನಾನ್ಜಿಂಗ್​​ನಿಂದ ನಮ್ಮ ಮೆಟ್ರೋದ 204 ಬೋಗಿಗಳ ನಿರ್ಮಾಣದ ಕಾಂಟ್ರಾಕ್ಟ್ ಪಡೆದಿರುವ ಟೀಟಾಘರ್ ರೈಲು ನಿಗಮವು, ಇಂದು ಪ್ರಥಮ ಬೋಗಿಯನ್ನು ನಮ್ಮ ಮೆಟ್ರೊಗೆ ಒದಗಿಸಿದೆ. ಈ ಮಧ್ಯೆ ಹಲವು ಬಾರಿ ನಾನು ಟೀಟಾಘರ್​ನ ಘಟಕಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದ್ದು, ಶೀಘ್ರ ಕಾರ್ಯಾರಂಭಕ್ಕೆ ಸಹಕಾರ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಖಟ್ಟರ್​ ಅವರಿಗೆ, ಬೆಂಗಳೂರು ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್