ಖಾಸಗಿ ಚಾಲಕರಿಗೆ ಗುಡ್ ನ್ಯೂಸ್; ರಾಜ್ಯದಲ್ಲಿ ಶೀಘ್ರದಲ್ಲೇ ಸ್ಥಾಪನೆ ಆಗಲಿದೆ ಚಾಲಕರ ನಿಗಮ ಮಂಡಳಿ

ಖಾಸಗಿ ಸಾರಿಗೆ ಚಾಲಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ‌. ಚಾಲಕರ ಹಲವು ದಿನಗಳ ಹೋರಾಟದ ಬಳಿಕ ಚಾಲಕರ ನಿಗಮ ಮಂಡಳಿ ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಜಾರಿ ಕೂಡ ಮಾಡಲಿದೆ. ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಮಂಡಳಿ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.

ಖಾಸಗಿ ಚಾಲಕರಿಗೆ ಗುಡ್ ನ್ಯೂಸ್; ರಾಜ್ಯದಲ್ಲಿ ಶೀಘ್ರದಲ್ಲೇ ಸ್ಥಾಪನೆ ಆಗಲಿದೆ ಚಾಲಕರ ನಿಗಮ ಮಂಡಳಿ
ಸಾಂದರ್ಭಿಕ ಚಿತ್ರ
Follow us
| Edited By: Ayesha Banu

Updated on: Nov 18, 2023 | 11:37 AM

ಬೆಂಗಳೂರು, ನ.18: ಕಳೆದ ಅನೇಕ ವರ್ಷಗಳಿಂದ ತಮಗೂ ಒಂದು ನಿಗಮ ಮಂಡಳಿ ಬೇಕು ಅಂತಾ ಸರ್ಕಾರದ (Karnataka Government) ಮುಂದೆ ಖಾಸಗಿ ಚಾಲಕರು (Private Drivers) ಬಿಗಿ ಪಟ್ಟು ಹಿಡಿದಿದ್ದರು. ಜೊತೆಗೆ ಹಲವು ಬಾರಿ ರಸ್ತೆಗಿಳಿದು ಹೋರಾಟವನ್ನೂ ಮಾಡಿದ್ದರು. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಸದ್ಯ ಈಗ ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ಮಂಡಳಿ ಸ್ಥಾಪನೆಗೆ ಮುಂದಾಗಿದೆ.

ಹೌದು ಮಂಡಳಿ ಸ್ಥಾಪನೆ ಸಂಬಂಧ ಈಗಾಗಲೇ ಕಾರ್ಮಿಕ ಇಲಾಖೆ ಜೊತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರೆಡ್ಡಿ ಮಾತುಕತೆ ಕೂಡ ನಡೆಸಿದ್ದಾರೆ. ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಮಂಡಳಿ ಸ್ಥಾಪನೆಗೆ ಮುಂದಾಗಿರೋ ಸರ್ಕಾರ ಈಗಾಗಲೇ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಕೂಡ ಚರ್ಚೆ ನಡೆಸಿದ್ದು, ಮಂಡಳಿ ಸ್ಥಾಪನೆ ಬಗ್ಗೆಯೂ ತೀರ್ಮಾನ ಆಗಿದೆ. ಕಾರ್ಮಿಕ ಇಲಾಖೆ ಅಡಿ ಪ್ರತ್ಯೇಕ ಮಂಡಳಿಗೆ ಚರ್ಚೆ ಆಗಿದ್ದು, ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲೂ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.ಇನ್ನೂ ಚಾಲಕರ ನಿಗಮ ಮಂಡಳಿಯಿಂದ ಸಾಕಷ್ಟು ಅನುಕೂಲ ಆಗಲಿದೆ. ಚಾಲಕರ ಮಕ್ಕಳ ವಿದ್ಯಾಭ್ಯಾಸದಿಂದ ಹಿಡಿದು ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಪ್ರಯೋಜನ ಆಗಲಿದೆ.

ಚಾಲಕ ನಿಗಮ ಮಂಡಳಿಯಿಂದ ಆಗುವ ಅನುಕೂಲ

  • ಕಡಿಮೆ ಬಡ್ಡಿದರದಲ್ಲಿ ಚಾಲಕರಿಗೆ ಸಾಲ ಸೌಲಭ್ಯ
  • ಚಾಲಕರಿಗೆ ಆರೋಗ್ಯ ವಿಮೆ, ಅಪಘಾತ ವಿಮೆ
  • ಮಕ್ಕಳ ವಿದ್ಯಾಭ್ಯಾಸಕ್ಕೆ ಕೂಡ ಪ್ರೋತ್ಸಾಹ ಧನ
  • ಹೆಣ್ಣು ಮಕ್ಕಳ ಮದುವೆಗೆ ಸಾಲ ಸೌಲಭ್ಯ
  • ಮನೆ ಖರೀದಿ ಮಾಡಲು ಸಾಲದ ಸೌಲಭ್ಯ

ಇದನ್ನೂ ಓದಿ: ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಸೆಪ್ಟೆಂಬರ್ 11 ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟ ನಡೆಸಿದ ಬೆಂಗಳೂರು ಬಂದ್ ಅಲ್ಲಿ ಪ್ರಮುಖವಾಗಿ ಚಾಲಕ ನಿಗಮ ಮಂಡಳಿ ಸ್ಥಾಪನೆ ಮಾಡಲು ಒತ್ತಾಯ ಮಾಡಲಾಗಿತ್ತು.

ಇನ್ನೂ ಚಾಲಕರ ಅಭಿವೃದ್ಧಿ ಮಂಡಳಿ ರಚನೆ ಯಾವ ರೀತಿ ಇರಬೇಕು ಅನ್ನೋದರ ಬಗ್ಗೆ ಸಾರಿಗೆ ಸಚಿವರಿಗೆ ಖಾಸಗಿ ಸಾರಿಗೆ ಸಂಘಟನೆಯ ಅಧ್ಯಕ್ಷ ನಟರಾಜ್ ಶರ್ಮಾ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಚಾಲಕರ ನಿಗಮ ಮಂಡಳಿ ಮಾಡಬೇಕು ಅನ್ನೋದು ಚಾಲಕರ ಹಲವು ದಿನದ ಒತ್ತಾಯ, ಕೊನೆಗೂ ಈ ಒತ್ತಾಯಕ್ಕೆ ಮಣಿದು ಸರ್ಕಾರ ಚಾಲಕ ನಿಗಮ ಮಂಡಳಿ ಮುಂದಾಗಿದ್ದು ಖುಷಿಯ ಸಂಗತಿಯೇ ಆದ್ರೆ ಮಂಡಳಿ ರಚನೆಯೂ ವಿಳಂಬ ಮಾಡದೇ ಶೀಘ್ರ ರಚನೆ ಆಗಲಿ ಅನ್ನೋದೆ ಚಾಲಕರ ಹಾಗೇ ನಮ್ಮ ಆಶಯ ಕೂಡ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್