AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಚಾಲಕರಿಗೆ ಗುಡ್ ನ್ಯೂಸ್; ರಾಜ್ಯದಲ್ಲಿ ಶೀಘ್ರದಲ್ಲೇ ಸ್ಥಾಪನೆ ಆಗಲಿದೆ ಚಾಲಕರ ನಿಗಮ ಮಂಡಳಿ

ಖಾಸಗಿ ಸಾರಿಗೆ ಚಾಲಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ‌. ಚಾಲಕರ ಹಲವು ದಿನಗಳ ಹೋರಾಟದ ಬಳಿಕ ಚಾಲಕರ ನಿಗಮ ಮಂಡಳಿ ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಜಾರಿ ಕೂಡ ಮಾಡಲಿದೆ. ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಮಂಡಳಿ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.

ಖಾಸಗಿ ಚಾಲಕರಿಗೆ ಗುಡ್ ನ್ಯೂಸ್; ರಾಜ್ಯದಲ್ಲಿ ಶೀಘ್ರದಲ್ಲೇ ಸ್ಥಾಪನೆ ಆಗಲಿದೆ ಚಾಲಕರ ನಿಗಮ ಮಂಡಳಿ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Nov 18, 2023 | 11:37 AM

Share

ಬೆಂಗಳೂರು, ನ.18: ಕಳೆದ ಅನೇಕ ವರ್ಷಗಳಿಂದ ತಮಗೂ ಒಂದು ನಿಗಮ ಮಂಡಳಿ ಬೇಕು ಅಂತಾ ಸರ್ಕಾರದ (Karnataka Government) ಮುಂದೆ ಖಾಸಗಿ ಚಾಲಕರು (Private Drivers) ಬಿಗಿ ಪಟ್ಟು ಹಿಡಿದಿದ್ದರು. ಜೊತೆಗೆ ಹಲವು ಬಾರಿ ರಸ್ತೆಗಿಳಿದು ಹೋರಾಟವನ್ನೂ ಮಾಡಿದ್ದರು. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಸದ್ಯ ಈಗ ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ಮಂಡಳಿ ಸ್ಥಾಪನೆಗೆ ಮುಂದಾಗಿದೆ.

ಹೌದು ಮಂಡಳಿ ಸ್ಥಾಪನೆ ಸಂಬಂಧ ಈಗಾಗಲೇ ಕಾರ್ಮಿಕ ಇಲಾಖೆ ಜೊತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರೆಡ್ಡಿ ಮಾತುಕತೆ ಕೂಡ ನಡೆಸಿದ್ದಾರೆ. ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಮಂಡಳಿ ಸ್ಥಾಪನೆಗೆ ಮುಂದಾಗಿರೋ ಸರ್ಕಾರ ಈಗಾಗಲೇ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಕೂಡ ಚರ್ಚೆ ನಡೆಸಿದ್ದು, ಮಂಡಳಿ ಸ್ಥಾಪನೆ ಬಗ್ಗೆಯೂ ತೀರ್ಮಾನ ಆಗಿದೆ. ಕಾರ್ಮಿಕ ಇಲಾಖೆ ಅಡಿ ಪ್ರತ್ಯೇಕ ಮಂಡಳಿಗೆ ಚರ್ಚೆ ಆಗಿದ್ದು, ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲೂ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.ಇನ್ನೂ ಚಾಲಕರ ನಿಗಮ ಮಂಡಳಿಯಿಂದ ಸಾಕಷ್ಟು ಅನುಕೂಲ ಆಗಲಿದೆ. ಚಾಲಕರ ಮಕ್ಕಳ ವಿದ್ಯಾಭ್ಯಾಸದಿಂದ ಹಿಡಿದು ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಪ್ರಯೋಜನ ಆಗಲಿದೆ.

ಚಾಲಕ ನಿಗಮ ಮಂಡಳಿಯಿಂದ ಆಗುವ ಅನುಕೂಲ

  • ಕಡಿಮೆ ಬಡ್ಡಿದರದಲ್ಲಿ ಚಾಲಕರಿಗೆ ಸಾಲ ಸೌಲಭ್ಯ
  • ಚಾಲಕರಿಗೆ ಆರೋಗ್ಯ ವಿಮೆ, ಅಪಘಾತ ವಿಮೆ
  • ಮಕ್ಕಳ ವಿದ್ಯಾಭ್ಯಾಸಕ್ಕೆ ಕೂಡ ಪ್ರೋತ್ಸಾಹ ಧನ
  • ಹೆಣ್ಣು ಮಕ್ಕಳ ಮದುವೆಗೆ ಸಾಲ ಸೌಲಭ್ಯ
  • ಮನೆ ಖರೀದಿ ಮಾಡಲು ಸಾಲದ ಸೌಲಭ್ಯ

ಇದನ್ನೂ ಓದಿ: ಟಿವಿ9 ವರದಿ ಫಲಶ್ರುತಿ: 5500 ಹೊಸ ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ

ಸೆಪ್ಟೆಂಬರ್ 11 ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟ ನಡೆಸಿದ ಬೆಂಗಳೂರು ಬಂದ್ ಅಲ್ಲಿ ಪ್ರಮುಖವಾಗಿ ಚಾಲಕ ನಿಗಮ ಮಂಡಳಿ ಸ್ಥಾಪನೆ ಮಾಡಲು ಒತ್ತಾಯ ಮಾಡಲಾಗಿತ್ತು.

ಇನ್ನೂ ಚಾಲಕರ ಅಭಿವೃದ್ಧಿ ಮಂಡಳಿ ರಚನೆ ಯಾವ ರೀತಿ ಇರಬೇಕು ಅನ್ನೋದರ ಬಗ್ಗೆ ಸಾರಿಗೆ ಸಚಿವರಿಗೆ ಖಾಸಗಿ ಸಾರಿಗೆ ಸಂಘಟನೆಯ ಅಧ್ಯಕ್ಷ ನಟರಾಜ್ ಶರ್ಮಾ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ಚಾಲಕರ ನಿಗಮ ಮಂಡಳಿ ಮಾಡಬೇಕು ಅನ್ನೋದು ಚಾಲಕರ ಹಲವು ದಿನದ ಒತ್ತಾಯ, ಕೊನೆಗೂ ಈ ಒತ್ತಾಯಕ್ಕೆ ಮಣಿದು ಸರ್ಕಾರ ಚಾಲಕ ನಿಗಮ ಮಂಡಳಿ ಮುಂದಾಗಿದ್ದು ಖುಷಿಯ ಸಂಗತಿಯೇ ಆದ್ರೆ ಮಂಡಳಿ ರಚನೆಯೂ ವಿಳಂಬ ಮಾಡದೇ ಶೀಘ್ರ ರಚನೆ ಆಗಲಿ ಅನ್ನೋದೆ ಚಾಲಕರ ಹಾಗೇ ನಮ್ಮ ಆಶಯ ಕೂಡ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ