ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್; ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ

ಸಿಲಿಕಾನ್ ಸಿಟಿ‌ ಮಂದಿ ಟ್ರಾಫಿಕ್ ಸಾಗರ ದಾಟಲು ನಿತ್ಯ ಪರದಾಡ್ತಿದ್ದಾರೆ. ಅದರಲ್ಲೂ ಸಿಲ್ಕ್ ಬೋರ್ಡ್ ಅಂದರೆ ಭಯ ಶುರುವಾಗುತ್ತೆ.‌ ಆ ಜಾಮ್‌ನಲ್ಲಿ ಒಮ್ಮೆ ತಗ್ಲಾಕೊಂಡ್ರೆ ಅಲ್ಲಿಗೆ ಅವರ ಕಥೆ ಮುಗಿತು ಅಂತಾನೆ ಅರ್ಥ. ಆದರೆ ವಾಹನ ಸವಾರರು ನಿಟ್ಟುಸಿರುವ ಬಿಡುವ ಸುದ್ದಿಯೊಂದಿದೆ. ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧವಾಗಿದ್ದು ಶೀಘ್ರದಲ್ಲಿ ಉದ್ಘಾಟನೆಯ ಸುಳಿವು ಸಿಕ್ಕಿದೆ.

ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್; ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ
ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ
Follow us
| Updated By: ಆಯೇಷಾ ಬಾನು

Updated on: Jun 17, 2024 | 7:58 AM

ಬೆಂಗಳೂರು, ಜೂನ್.17: ವಾಹನ ಸವಾರರ ದುಃಸ್ವಪ್ನವಾಗಿದ್ದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್​ನ (Central Silk Board Junction) ಜಾಮ್​​​ ಶೀಘ್ರದಲ್ಲಿಯೇ ಕೊನೆಯಾಗುವ ದಿನ ಹತ್ತಿರವಾಗುತ್ತಿದೆ. ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ (Double Decker Flyover) ಕಾಮಗಾರಿ ಕಂಪ್ಲಿಟ್ ಆಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೆ ಸಜ್ಜಾಗ್ತಿದೆ.

ಅಂತಿಮ ತಪಾಸಣೆ ಬಾಕಿಯಿದ್ದು ಅದು ಮುಗಿಯುತ್ತಿದ್ದಂತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ಡಬಲ್​​ ಡೆಕ್ಕರ್​ ಫ್ಲೈಓವರ್​ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. ಕೆಳರಸ್ತೆಯಿಂದ ಡಬ್ಬಲ್‌ ಡೆಕ್ಕರ್‌ನ ಮೊದಲ ಫ್ಲೈಓವರ್‌ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್‌ 16 ಮೀ. ಎತ್ತರದಲ್ಲಿದೆ. ಸಂಚಾರ ದಟ್ಟಣೆ ನಿವಾರಣೆ ದೃಷ್ಟಿಯಿಂದ ರಾಗಿಗುಡ್ಡದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ವರೆಗೆ ಸಿಗ್ನಲ್‌ ಮುಕ್ತವಾಗಿಸಲಾಗಿದೆ. ಎಚ್‌ಎಸ್‌ಆರ್‌ ಲೇಔಟ್‌ ಹಾಗೂ ಹೊಸೂರು ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಪಬಹುದು.

ಇದನ್ನೂ ಓದಿ: ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆ ಬಿಸಿ, ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ

ಇದರ ಜೊತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಅನ್ನು ಸಂಪೂರ್ಣ ಸಿಗ್ನಲ್ ಮುಕ್ತಗೊಳಿಸುವ ಬಿಎಂಆರ್‌ಸಿಎಲ್‌ನಿಂದ ಬರೋಬ್ಬರಿ ಐದು ರ್ಯಾಂಪ್‌ಗಳ ನಿರ್ಮಾಣ ಮಾಡ್ತಿದೆ. ಒಂದು ರ್ಯಾಂಪ್ ರಾಗಿಗುಡ್ಡದಿಂದ ಡಬಲ್ ಡೆಕ್ಕರ್ ಫ್ಲೈ ಒವರ್ ಮೇಲೆ ಬರುವ ವಾಹನ ಸವಾರಿಗೆ ಸಿಲ್ಕ್ ಬೊರ್ಡ್ ನಲ್ಲಿ ಸಿಗ್ನಲ್‌ನಲ್ಲಿ ನಿಲ್ಲದೆ ಎಚ್‌ಎಸ್‌ಆರ್ ಲೇಔಟ್ ಮತ್ತು ಹೊಸೂರು ರಸ್ತೆಗೆ ತಲುಪಲು ಸಹಕಾರಿಯಾಗುತ್ತದೆ. ಮತ್ತೊಂದು ರ‍್ಯಾಂಪ್‌ ಬಿಟಿಎಂ ಲೇಔಟ್‌ನಿಂದ ಬರುವವರು ಔಟರ್ ರಿಂಗ್ ರೋಡ್ ಮತ್ತು ಹೊಸೂರು ರಸ್ತೆ ಪ್ರವೇಶಿಸಲು ಬಳಸಬಹುದು. ಇನ್ನೊಂದು ರ್ಯಾಂಪ್ ರಾಗಿಗುಡ್ಡದಿಂದ ಬರೋರು ಕೆ.ಆರ್. ಪುರಂ ಕಡೆಗೆ ಹೋಗಲು ನೆರವಾಗುತ್ತೆ.‌ ಈ ಬಗ್ಗೆ ವಾಹನ ಸವಾರ ರಾಮಚಂದ್ರ ರಾವ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸಿಲ್ಕ್ ಬೋರ್ಡ್ ಸಿಗ್ನಲ್ ಮುಕ್ತ ಮಾಡುವ ಕೆಲಸಕ್ಕೆ ವಾಹನ ಸವಾರರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಒಮ್ಮೆ ಓಪನ್ ಆದ್ರೆ ಸಾಕು ಅಂತ ಕಾಯ್ದಿದ್ದಾರೆ. ಆದಷ್ಟು ಬೇಗ ಓಪನ್ ಆಗಲಿ ಎನ್ನುವುದೇ ನಮ್ಮ ಆಶಯ ಕೂಡ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!