AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ ನ್ಯೂಸ್​: ಜುಲೈ ವೇಳೆಗೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

ಇದೇ ವರ್ಷ ಜುಲೈ ವೇಳೆಗೆ ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಸಾರ್ವಜನಿಕ ಬಳಕೆಗಾಗಿ ತೆರೆಯುವ ಸಾಧ್ಯತೆಯಿದೆ. ಇದು ಬೊಮ್ಮಸಂದ್ರದಿಂದ ಸೆಂಟ್ರಲ್​ ಸಿಲ್ಕ್​ ಬೋರ್ಡ್​ನ್ನು ಸಂಪರ್ಕಿಸುತ್ತದೆ.

ಗುಡ್​ ನ್ಯೂಸ್​: ಜುಲೈ ವೇಳೆಗೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Apr 07, 2023 | 7:33 AM

Share

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಬೆಂಗಳೂರು ನಗರವು ಈ ವರ್ಷದ ಜುಲೈ ವೇಳೆಗೆ ಮತ್ತೊಂದು ಮೆಟ್ರೋ(Metro) ಮಾರ್ಗವನ್ನ ತೆರೆಯುವ ಸಾಧ್ಯತೆಯಿದೆ. ಇದರಿಂದ ನಗರದ ಹಲವಾರು ಪ್ರಮುಖ ಪ್ರದೇಶಗಳಲ್ಲಿನ ವಾಹನ ದಟ್ಟಣೆ ಮತ್ತಷ್ಟು ಕಡಿಮೆ ಆಗಲಿದೆ. ಹೌದು ಬೊಮ್ಮಸಂದ್ರದಿಂದ ಹೆಚ್ಚು ದಟ್ಟಣೆಯಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್‌ಗೆ ಸಂಪರ್ಕಿಸುವ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ (BMRCL) ನಮ್ಮ ಮೆಟ್ರೋದ ‘ಹಳದಿ ಮಾರ್ಗ’( Yellow Line) ಇನ್ನು ಮೂರು ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ತೆರೆಯುವ ನಿರೀಕ್ಷೆಯಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.

ನಿಲುಗಡೆ ಸ್ಥಳಗಳು ಇಂತಿವೆ

ಆರ್ ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಸಿಂಗಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಹೊಂಗಸಂದ್ರ, ಕೂಡ್ಲು ಗೇಟ್, ಹೊಸ ರಸ್ತೆ, ಬೆರಟೆನ ಅಗ್ರಹಾರ, ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ, ಹೆಬ್ಬಗೋಡಿ ರಸ್ತೆಯಲ್ಲಿ ನಿಲುಗಡೆಯಾಗಲಿದೆ. ಈಗಾಗಲೇ ಹಳಿಗಳು ಮತ್ತು ನಿಲ್ದಾಣಗಳು ಸೇರಿದಂತೆ ಬಹುತೇಕ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿದ್ದು, ಇನ್ನು ಕೆಲವು ಸಣ್ಣಪುಟ್ಟ ಕೆಲಸಗಳು ಉಳಿದಿವೆ ಎಂದು ಬಿಎಂಆರ್‌ಸಿಎಲ್ ಮೂಲಗಳು ಪ್ರಕಟಣೆಯಲ್ಲಿ ತಿಳಿಸಿವೆ.

ಇದನ್ನೂ ಓದಿ:Viral Video: ಮೆಟ್ರೋ ಸ್ಟೇಷನ್​​​ನಲ್ಲಿ ಭೋಜ್‌ಪುರಿ ಹಾಡಿಗೆ ಸಕ್ಕತ್ತ್​​ ಸ್ಟೆಪ್​​ ಹಾಕಿದ ಮಹಿಳೆ

ಎಲೆಕ್ಟ್ರಾನಿಕ್ಸ್ ಸಿಟಿ ಭಾಗದಲ್ಲಿರುವ ಮಾರ್ಗವನ್ನು ಮೂಲತಃ ಜೂನ್‌ಗೆ ಪೂರ್ಣಗೊಳಿಸಲು ಯೋಜಿಸಲಾಗಿತ್ತು. ಆದರೆ ಈಗ ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ ಜುಲೈ ಅಂತ್ಯ ಅಥವಾ ಆಗಸ್ಟ್ ಆರಂಭದಲ್ಲಿ ತೆರೆಯಲಾಗುವುದು ಎಂದು ಅಂದಾಜಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಬಹು ನಿರೀಕ್ಷಿತ ವೈಟ್‌ಫೀಲ್ಡ್‌ನಿಂದ ಕೆಆರ್ ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ಇದು ಬೆಂಗಳೂರು ಮೆಟ್ರೋದ 2 ಹಂತದ ಯೋಜನೆಯ 13.71 ಕಿಲೋಮೀಟರ್ ವಿಸ್ತರಣೆಯಾಗಿದ್ದು, ಸುಮಾರು ₹4,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. BMRCL 2025 ರ ಜೂನ್ ವೇಳೆಗೆ 175-ಕಿಲೋಮೀಟರ್ ಮೆಟ್ರೋ ಜಾಲವನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು BMRCL ನ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಮ್ ಪರ್ವೇಜ್ ಅವರು ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 am, Fri, 7 April 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!