AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶುಗಳ ಹಸಿವು ನೀಗಿಸಲು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಎದೆಹಾಲಿನ ಬ್ಯಾಂಕ್‌ ಸ್ಥಾಪನೆ

human breast milk bank :ತಾಯಂದಿರ ಎದೆಹಾಲು ಕುಡಿಯೋ ಭಾಗ್ಯ ಅದೆಷ್ಟೋ ಕಂದಮ್ಮಗಳಿಗೆ ಇರುವುದೇ ಇಲ್ಲ.. ಇಂಥ ಶಿಶುಗಳ ಹಸಿವು ನೀಗಿಸುವುದಕ್ಕೆ ಎಂದು ವಾಣಿವಿಲಾಸ ಆಸ್ಪತ್ರೆಯಲ್ಲಿ ಎದೆಹಾಲು ಬ್ಯಾಂಕ್ ಸ್ಥಾಪಿಸಿದ್ದು, ತಾಯಂದಿರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.

ಶಿಶುಗಳ ಹಸಿವು ನೀಗಿಸಲು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಎದೆಹಾಲಿನ ಬ್ಯಾಂಕ್‌ ಸ್ಥಾಪನೆ
ವಾಣಿವಿಲಾಸ ಆಸ್ಪತ್ರೆ
Follow us
Poornima Agali Nagaraj
| Updated By: ರಮೇಶ್ ಬಿ. ಜವಳಗೇರಾ

Updated on:Nov 10, 2023 | 7:50 AM

ಬೆಂಗಳೂರು, (ನವೆಂಬರ್ 10): ಕಾಲ ಬದಲಾದಂತೆ, ಆಹಾರ ಪದ್ದತಿಯೂ ಬದಲಾಗಿದೆ. ಇದರಿಂದಾಗಿ ಹೆರಿಗೆ ಬಳಿಕ ಕೆಲ ತಾಯಂದಿರಲ್ಲಿ ಎದೆಹಾಲಿನ ಕೊರತೆ ಉಂಟಾಗುತ್ತಿದೆ. 6 ತಿಂಗಳೊಳಗಿನ ಶೇ.46 ರಷ್ಟು ಶಿಶುಗಳಿಗೆ ಸರಿಯಾಗಿ ಸ್ತನ್ಯಪಾನ ಆಗುತ್ತಿಲ್ಲ. ಹೀಗಾಗಿ ಬೆಂಗಳೂರಿನ (Bengaluru) ವಾಣಿವಿಲಾಸ ಆಸ್ಪತ್ರೆಯಲ್ಲಿ(vanivilas hospital )1 ಕೋಟಿ ರೂ. ವೆಚ್ಚದಲ್ಲಿ ‘ಅಮೃತಧಾರೆ’ ಹೆಸರಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ (human breast milk bank )ಸ್ಥಾಪಿಸಲಾಗಿದೆ.

ತೀವ್ರ ನಿಗಾ ಘಟಕದಲ್ಲಿರುವ ಶಿಶುಗಳಿಗೆ ನಿತ್ಯ ಒಂದೂವರೆ ಲೀಟರ್​ ಎದೆಹಾಲು ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿನ ದಾನಿಗಳಿಂದ 270 ಲೀಟರ್​​​​ ಎದೆಹಾಲು ಸಂಗ್ರಹಿಸಲಾಗಿದೆ. ಆಸ್ಪತ್ರೆ ಹೊರಗಿನ ತಾಯಂದಿರಿಂದ 19 ಲೀಟರ್​​ ಎದೆಹಾಲನ್ನು ದಾನ ಪಡೆದಿದ್ದು, ನೂರಾರು ಕಂದಮ್ಮಗಳಿಗೆ ಅನುಕೂಲವಾಗಿದೆ.

ಎದೆಹಾಲನ್ನು ಪಾಶ್ಚೀಕರಿಸಿದ ಬಳಿಕ ಪ್ಯಾಕ್‌ ಮಾಡಿ 120 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸಂರಕ್ಷಿಸಿ ಇಡಲಾಗುತ್ತೆ. ಆರು ತಿಂಗಳ ತನಕ ಈ ಹಾಲನ್ನು ಶೇಖರಿಸಿ ಇಡಬಹುದು. ಎದೆಹಾಲು ಬ್ಯಾಂಕ್‌ಗಳಲ್ಲಿ 150 ಮಿಲಿ ಲೀಟರ್​​ ಹಾಲಿಗೆ 6,500ರಿಂದ 8,000 ರೂಪಾಯಿ ಕೊಡಬೇಕು. ಆದ್ರೆ, ವಾಣಿವಿಲಾಸದಲ್ಲಿ ಉಚಿತವಾಗಿ ನೀಡಲಾಗುತ್ತೆ.

ಏನೇ ಹೇಳಿ, ಅಮ್ಮನ ಎದೆಹಾಲಿಗಿಂತ ಜೀವಾಮೃತ ಮತ್ತೊಂದಿಲ್ಲ. ಇದೀಗ ತಾಯಂದಿರುವ ಎದೆಹಾಲನ್ನ ದಾನವಾಗಿ ನೀಡ್ತಿದ್ದು, ಅನೇಕ ಮಕ್ಕಳ ಜೀವ ಉಳಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:42 am, Fri, 10 November 23

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ