AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗಾಗಿ ಸಂಚಾರ ಪೊಲೀಸರೊಂದಿಗೆ ಕೈಜೋಡಿಸಿದ ಗೂಗಲ್

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗೆ ಯಾವುದೇ ರೀತಿಯ ಯೋಜನೆಯನ್ನು ತಂದರೂ ಟ್ರಾಫಿಕ್ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗಾಗಿ ಸಂಚಾರ ಪೊಲೀಸರೊಂದಿಗೆ ಕೈಜೋಡಿಸಿದ ಗೂಗಲ್
Bengaluru Traffic
TV9 Web
| Updated By: ನಯನಾ ರಾಜೀವ್|

Updated on: Jul 28, 2022 | 2:31 PM

Share

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗೆ ಯಾವುದೇ ರೀತಿಯ ಯೋಜನೆಯನ್ನು ತಂದರೂ ಟ್ರಾಫಿಕ್ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಇದೀಗ ಬೆಂಗಳೂರು ಟ್ರಾಫಿಕ್ ಪೊಲೀಸರು ಗೂಗಲ್​ನೊಂದಿಗೆ ಕೈಜೋಡಿಸಿದ್ದಾರೆ. ಇನ್ನುಮುಂದೆ ವಾಹನ ಸವಾರರಿಗೆ ಗೂಗಲ್‌ ಮ್ಯಾಪ್‌ ಮೂಲಕವೇ ಸ್ಪೀಡ್‌ ಲಿಮಿಟ್‌ ತಿಳಿಯಲಿದೆ.

ಹಾಗೆಯೇ ವಾಹನ ಸಂಚಾರ ದಟ್ಟಣೆಯಿರುವ ರಸ್ತೆಗಳು, ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧವಿರುವ ರಸ್ತೆಗಳ ಮಾಹಿತಿಯೂ ಇದರಲ್ಲಿ ಸಿಗಲಿದೆ. ವಾಹನ ಸಂಚಾರ ದಟ್ಟಣೆ ಇರುವುದರ ಕುರಿತು ಮುಂಚಿತವಾಗಿಯೇ ವಾಹನ ಸವಾರರಿಗೆ ತಿಳಿಸಲಿದೆ. ಇದರಿಂದ ವಾಹನ ಸವಾರರು ಬೇರೆ ರಸ್ತೆಗಳ ಮೂಲಕ ಸಂಚರಿಸಬಹುದು.

ಇದು ದಟ್ಟಣೆ, ಕಾಯುವ ಸಮಯ, ಇಂಧನ ಬಳಕೆ, ರಸ್ತೆಗಳ ಬಗ್ಗೆ ಮಾಹಿತಿ ನೀಡಲಿದೆ. ಯೋಜನೆಯ ಭಾಗವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ನೂರಾರು ಯೋಜನೆಗಳನ್ನು ಗೂಗಲ್‌ನೊಂದಿಗೆ ಹಂಚಿಕೊಂಡಿದ್ದಾರೆ. ಈ ಪಾಲುದಾರಿಕೆ ಉತ್ತಮವಾಗಿದ್ದು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಗೂಗಲ್‌ ಸಂಸ್ಥೆಯೊಂದಿಗಿನ ಈ ಒಪ್ಪಂದವು ಆಧುನಿಕ ತಂತ್ರಜ್ಞಾನದ ನೆರವಿನಿಂದ ವಾಹನ ಸಂಚಾರ ನಿರ್ವಹಣೆ ಜತೆಗೆ ವಾಹನ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದೇವೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಪೈಲಟ್ ಯೋಜನೆಯು ಮೊದಲ ಬಾರಿಗೆ ಪ್ರಯಾಣಿಕರಿಗಾಗಿ ಗೂಗಲ್ ನಕ್ಷೆಗಳಲ್ಲಿ ವೇಗದ ಮಿತಿಗಳನ್ನು ಪರಿಚಯಿಸುತ್ತದೆ. ಗೂಗಲ್‌ ಸ್ಟ್ರೀಟ್ ವ್ಯೂ ಅನ್ನು ಮೊದಲು ಭಾರತದಲ್ಲಿ 2011 ರಲ್ಲಿ ಪ್ರಾರಂಭಿಸಲಾಯಿತು. ಈ ಗೂಗಲ್ ನಕ್ಷೆಗಳ ವೈಶಿಷ್ಟ್ಯವು ಬಳಕೆದಾರರಿಗೆ 360-ಡಿಗ್ರಿ ವಿಹಂಗಮ ರಸ್ತೆ-ಮಟ್ಟದ ಚಿತ್ರಗಳ ಮೂಲಕ ಪ್ರದೇಶವನ್ನು ಅನ್ವೇಷಿಸಲು ದಾರಿ ಮಾಡಿಕೊಡುತ್ತದೆ.

ಗೂಗಲ್‌ ಸ್ಟ್ರೀಟ್‌ ವ್ಯೂ ಜಾರಿಯಾದ ಬೆನ್ನಲ್ಲೇ ತಂತ್ರಜ್ಞಾನದ ಸಹಾಯದಿಂದ ನಗರದಲ್ಲಿ ವಾಹನ ಸಂಚಾರ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು, ಗೂಗಲ್‌ ಸಂಸ್ಥೆಯೊಂದಿಗೆ ಈ ಒಪ್ಪಂದ ಮಾಡಿಕೊಂಡಿದ್ದಾರೆ.

ಗೂಗಲ್​ ಯಾವ ಸಮಯದಲ್ಲಿ ಯಾವ ರಸ್ತೆಯಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುತ್ತದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಲು ಸಹಾಯ ಮಾಡಲಿದೆ . ಅಷ್ಟೇ ಅಲ್ಲದೆ, ಆ ರಸ್ತೆಯಲ್ಲಿ ದಟ್ಟಣೆ ತಗ್ಗಿಸಲು ಹಾಗೂ ಸಂಚಾರ ನಿರ್ವಹಿಸಲು ಸಹಕಾರಿಯಾಗಲಿದೆ.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!