AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ

ನಾನು ಯಾವುದೇ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿಲ್ಲ. ಕೋರ್ಟ್ ಅನುಮತಿ ಪಡೆದು ಕಟ್ಟಡ ನಿರ್ಮಿಸುತ್ತಿದ್ದೇನೆ. ವಿಡಿಯೋದಲ್ಲಿ ಇರುವುದು ಶೇ.80 ರಷ್ಟು ಭಾಗ ಫೇಕ್​ ಎಂದು ಬೆಂಗಳೂರಿನಲ್ಲಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಗೋಪಾಲಕೃಷ್ಣ
TV9 Web
| Edited By: |

Updated on:Dec 01, 2021 | 6:44 PM

Share

ಬೆಂಗಳೂರು: ನಗರದ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ವಿರುದ್ಧದ ಯಾವುದೇ ಸಂಚು ಆರೋಪ ಸುಳ್ಳು. ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳೂ ಸುಳ್ಳು. ಇಂತಹವನ್ನು ಮಾಡುವ ಐಡಿಯಾ ಇರೋದು ಶಾಸಕರಿಗೆ. ನಮಗೆ ಇಂತಹ ಕ್ರಿಮಿನಲ್ ಐಡಿಯಾಗಳು ಬರಲ್ಲ. ಕುಳ್ಳ ದೇವರಾಜ್- ಶಾಸಕ ವಿಶ್ವನಾಥ್ ಕಾಲ್ ಲಿಸ್ಟ್ ತೆಗೆಸಲಿ. 3 ತಿಂಗಳ ಕಾಲ್ ಲಿಸ್ಟ್ ತೆಗೆಸಿದರೆ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.

8 ಎಕರೆ ಜಮೀನು ವಿಚಾರದಲ್ಲಿ ಶಾಸಕರಿಂದ ತೊಂದರೆ ಆಗಿದೆ. ಹೀಗೆಂದು ಹೇಳಿಕೊಂಡು ಕುಳ್ಳ ದೇವರಾಜ್ ಬಂದಿದ್ದ. ಆ ವಿಡಿಯೋದಲ್ಲಿ ಕೆಲವು ಸತ್ಯ, ಕೆಲವು ಫೇಕ್ ಇರಬಹುದು. ಕಡಬಗರೆ ಸೀನ ಶೂಟೌಟ್​ ಕೇಸ್​ ಬಗ್ಗೆ ಸಿಬಿಐ ತನಿಖೆಯಾಗಲಿ. ನನ್ನ ತೇಜೋವಧೆ ಮಾಡಲು ಶಾಸಕರಿಂದ ಇಂತಹ ಕೃತ್ಯ ಮಾಡಲಾಗಿದೆ. ಕುಳ್ಳ ದೇವರಾಜ್ ವಿರುದ್ಧ ನಾನು ದೂರು ದಾಖಲಿಸುತ್ತೇನೆ. ಕುಳ್ಳ ದೇವರಾಜ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುವೆ. ಜಮೀನು ವಿಚಾರಕ್ಕೆ 5 ಲಕ್ಷ ತಂದು 2 ಲಕ್ಷ ವಾಪಸ್ ಪಡೆದಿದ್ದ. ಯಲಹಂಕ ಕ್ಷೇತ್ರದಲ್ಲಿ ರೌಡಿಗಳ ಚಟುವಟಿಕೆ ಜಾಸ್ತಿ ಆಗಿದೆ. ನನಗೆ ಭದ್ರತೆ ನೀಡಲು ಗೃಹಸಚಿವರಿಗೆ ಮನವಿ ಮಾಡುವೆ. ನನಗೂ ಪೊಲೀಸ್ ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಯಾವುದೇ ಕ್ರಿಮಿನಲ್ ಹಿನ್ನೆಲೆ ಇದ್ದರೆ ಸಾಬೀತುಪಡಿಸಲಿ ಎಂದು ಹೇಳಿದ್ದಾರೆ.

ಸೇಠ್​ ಜಮೀನು ವಿಚಾರದಲ್ಲಿ ಕುಳ್ಳ ದೇವರಾಜ್ ಬಂದಿದ್ದ. ಈ ವಿಚಾರ ಬಿಟ್ಟರೆ ಅವನಿಗೂ ನನಗೂ ಯಾವುದೇ ಸಂಬಂಧವಿಲ್ಲ. ಶಾಸಕ ವಿಶ್ವನಾಥ್​​ಗೂ ನನಗೂ ಯಾವುದೇ ವ್ಯವಹಾರವಿಲ್ಲ. ನಾನು ಯಾವುದೇ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿಲ್ಲ. ಕೋರ್ಟ್ ಅನುಮತಿ ಪಡೆದು ಕಟ್ಟಡ ನಿರ್ಮಿಸುತ್ತಿದ್ದೇನೆ. ವಿಡಿಯೋದಲ್ಲಿ ಇರುವುದು ಶೇ.80 ರಷ್ಟು ಭಾಗ ಫೇಕ್​ ಎಂದು ಬೆಂಗಳೂರಿನಲ್ಲಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ನಾನು ಯಾರ ಹತ್ಯೆಗೂ ಸುಪಾರಿ ನೀಡಿಲ್ಲ. ಸುಪಾರಿ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸೇಠ್​ ಜಮೀನು ವಿಚಾರಕ್ಕೆ ಕುಳ್ಳ ದೇವರಾಜ್ ಬಂದಿದ್ದ. ಇಂತಹ ಫೇಕ್​ ಮಾಡುತ್ತಾನೆಂದು ಯಾರಿಗೆ ಗೊತ್ತಿತ್ತು. ಬಿಜೆಪಿ ಶಾಸಕ ವಿಶ್ವನಾಥ್ ಬಲಗೈ ಭಂಟ ಕುಳ್ಳ ದೇವರಾಜ್ ಎಂದು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿನ್ನೆ ಸಂಜೆ ನನಗೆ ಕ್ಷಮಾಪಣ ಪತ್ರ ಬಂದಿತ್ತು; ಹತ್ಯೆಗೆ ಸ್ಕೆಚ್ ಆರೋಪ ಸಂಬಂಧಿಸಿ ಎಸ್ಆರ್ ವಿಶ್ವನಾಥ್ ಸುದ್ದಿಗೋಷ್ಠಿ

ಇದನ್ನೂ ಓದಿ: ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್! ವಿಶ್ವನಾಥ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ಗೋಪಾಲಕೃಷ್ಣ ವಿಡಿಯೋ ಬಹಿರಂಗ

Published On - 6:43 pm, Wed, 1 December 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ