AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ

ನಾನು ಯಾವುದೇ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿಲ್ಲ. ಕೋರ್ಟ್ ಅನುಮತಿ ಪಡೆದು ಕಟ್ಟಡ ನಿರ್ಮಿಸುತ್ತಿದ್ದೇನೆ. ವಿಡಿಯೋದಲ್ಲಿ ಇರುವುದು ಶೇ.80 ರಷ್ಟು ಭಾಗ ಫೇಕ್​ ಎಂದು ಬೆಂಗಳೂರಿನಲ್ಲಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಗೋಪಾಲಕೃಷ್ಣ
Follow us
TV9 Web
| Updated By: ganapathi bhat

Updated on:Dec 01, 2021 | 6:44 PM

ಬೆಂಗಳೂರು: ನಗರದ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ವಿರುದ್ಧದ ಯಾವುದೇ ಸಂಚು ಆರೋಪ ಸುಳ್ಳು. ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳೂ ಸುಳ್ಳು. ಇಂತಹವನ್ನು ಮಾಡುವ ಐಡಿಯಾ ಇರೋದು ಶಾಸಕರಿಗೆ. ನಮಗೆ ಇಂತಹ ಕ್ರಿಮಿನಲ್ ಐಡಿಯಾಗಳು ಬರಲ್ಲ. ಕುಳ್ಳ ದೇವರಾಜ್- ಶಾಸಕ ವಿಶ್ವನಾಥ್ ಕಾಲ್ ಲಿಸ್ಟ್ ತೆಗೆಸಲಿ. 3 ತಿಂಗಳ ಕಾಲ್ ಲಿಸ್ಟ್ ತೆಗೆಸಿದರೆ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.

8 ಎಕರೆ ಜಮೀನು ವಿಚಾರದಲ್ಲಿ ಶಾಸಕರಿಂದ ತೊಂದರೆ ಆಗಿದೆ. ಹೀಗೆಂದು ಹೇಳಿಕೊಂಡು ಕುಳ್ಳ ದೇವರಾಜ್ ಬಂದಿದ್ದ. ಆ ವಿಡಿಯೋದಲ್ಲಿ ಕೆಲವು ಸತ್ಯ, ಕೆಲವು ಫೇಕ್ ಇರಬಹುದು. ಕಡಬಗರೆ ಸೀನ ಶೂಟೌಟ್​ ಕೇಸ್​ ಬಗ್ಗೆ ಸಿಬಿಐ ತನಿಖೆಯಾಗಲಿ. ನನ್ನ ತೇಜೋವಧೆ ಮಾಡಲು ಶಾಸಕರಿಂದ ಇಂತಹ ಕೃತ್ಯ ಮಾಡಲಾಗಿದೆ. ಕುಳ್ಳ ದೇವರಾಜ್ ವಿರುದ್ಧ ನಾನು ದೂರು ದಾಖಲಿಸುತ್ತೇನೆ. ಕುಳ್ಳ ದೇವರಾಜ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುವೆ. ಜಮೀನು ವಿಚಾರಕ್ಕೆ 5 ಲಕ್ಷ ತಂದು 2 ಲಕ್ಷ ವಾಪಸ್ ಪಡೆದಿದ್ದ. ಯಲಹಂಕ ಕ್ಷೇತ್ರದಲ್ಲಿ ರೌಡಿಗಳ ಚಟುವಟಿಕೆ ಜಾಸ್ತಿ ಆಗಿದೆ. ನನಗೆ ಭದ್ರತೆ ನೀಡಲು ಗೃಹಸಚಿವರಿಗೆ ಮನವಿ ಮಾಡುವೆ. ನನಗೂ ಪೊಲೀಸ್ ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಯಾವುದೇ ಕ್ರಿಮಿನಲ್ ಹಿನ್ನೆಲೆ ಇದ್ದರೆ ಸಾಬೀತುಪಡಿಸಲಿ ಎಂದು ಹೇಳಿದ್ದಾರೆ.

ಸೇಠ್​ ಜಮೀನು ವಿಚಾರದಲ್ಲಿ ಕುಳ್ಳ ದೇವರಾಜ್ ಬಂದಿದ್ದ. ಈ ವಿಚಾರ ಬಿಟ್ಟರೆ ಅವನಿಗೂ ನನಗೂ ಯಾವುದೇ ಸಂಬಂಧವಿಲ್ಲ. ಶಾಸಕ ವಿಶ್ವನಾಥ್​​ಗೂ ನನಗೂ ಯಾವುದೇ ವ್ಯವಹಾರವಿಲ್ಲ. ನಾನು ಯಾವುದೇ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿಲ್ಲ. ಕೋರ್ಟ್ ಅನುಮತಿ ಪಡೆದು ಕಟ್ಟಡ ನಿರ್ಮಿಸುತ್ತಿದ್ದೇನೆ. ವಿಡಿಯೋದಲ್ಲಿ ಇರುವುದು ಶೇ.80 ರಷ್ಟು ಭಾಗ ಫೇಕ್​ ಎಂದು ಬೆಂಗಳೂರಿನಲ್ಲಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ನಾನು ಯಾರ ಹತ್ಯೆಗೂ ಸುಪಾರಿ ನೀಡಿಲ್ಲ. ಸುಪಾರಿ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸೇಠ್​ ಜಮೀನು ವಿಚಾರಕ್ಕೆ ಕುಳ್ಳ ದೇವರಾಜ್ ಬಂದಿದ್ದ. ಇಂತಹ ಫೇಕ್​ ಮಾಡುತ್ತಾನೆಂದು ಯಾರಿಗೆ ಗೊತ್ತಿತ್ತು. ಬಿಜೆಪಿ ಶಾಸಕ ವಿಶ್ವನಾಥ್ ಬಲಗೈ ಭಂಟ ಕುಳ್ಳ ದೇವರಾಜ್ ಎಂದು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿನ್ನೆ ಸಂಜೆ ನನಗೆ ಕ್ಷಮಾಪಣ ಪತ್ರ ಬಂದಿತ್ತು; ಹತ್ಯೆಗೆ ಸ್ಕೆಚ್ ಆರೋಪ ಸಂಬಂಧಿಸಿ ಎಸ್ಆರ್ ವಿಶ್ವನಾಥ್ ಸುದ್ದಿಗೋಷ್ಠಿ

ಇದನ್ನೂ ಓದಿ: ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್! ವಿಶ್ವನಾಥ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ಗೋಪಾಲಕೃಷ್ಣ ವಿಡಿಯೋ ಬಹಿರಂಗ

Published On - 6:43 pm, Wed, 1 December 21

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ