AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಪಾಡ್ಯಮಿಯಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ ಆದೇಶ

ಅಕ್ಟೋಬರ್‌ 26 ರಂದು ಬಲಿಪಾಡ್ಯಮಿಯಂದು ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.

ಬಲಿಪಾಡ್ಯಮಿಯಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ ಆದೇಶ
ಗೋಪೂಜೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 19, 2022 | 5:07 PM

Share

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್‌ 26 ರಂದು ಬಲಿಪಾಡ್ಯಮಿಯಂದು ರಾಜ್ಯ ಸಾರ್ಕಾರದ ಅಧೀನದಲ್ಲಿ ಬರುವಂತಹ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ (Go puja) ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ಸಚಿವರ ಸೂಚನೆಯಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಬಲಿಪಾಡ್ಯಮಿಯಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗೋಪೂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಗೋವುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಬೇಕಿದೆ. ಹಾಗಾಗಿ ಬಲಿಪಾಡ್ಯಮಿಯ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಸಲು ಸಚಿವೆ  ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.

ಗೋ ಪೂಜೆ ಏಕೆ ಮಾಡಬೇಕು?

ಗೋವನ್ನು ನಾವು ಲಕ್ಷ್ಮಿದೇವಿಗೆ ಹೋಲಿಸುತ್ತೇವೆ. ಮಾತೃಸ್ವರೂಪವೋ ಅವೆಲ್ಲವೂ ನಮಗೆ ಲಕ್ಷ್ಮಿ. ಅದು ಭೂಮಾತೆ ಆಗಿರಬಹುದು, ಕಾಮಧೇನು ಆಗಿರಬಹುದು. ಹಸುವಿಲ್ಲದೆ ಮನುಷ್ಯನಿಗೆ ಜೀವನ ಇಲ್ಲ. ಹಸುವಿನಿಂದ ಸಿಗುವ ಹಾಲು, ಮೊಸರು, ಬೆಣ್ಣೆ, ಮಜ್ಜಿಗೆ, ತುಪ್ಪ, ಗಂಜಳ, ಸಗಣಿ ಎಲ್ಲವೂ ಉಪಯೋಗಿಸಲಾಗುತ್ತದೆ. ಹೀಗೆ ಎಲ್ಲವನ್ನೂ ಮನುಷ್ಯನಿಗೆ ನೀಡುವ ಮುಗ್ಧವಾದ ಪ್ರಾಣಿ ಗೋವನ್ನು ಲಕ್ಷ್ಮಿಪೂಜೆ ಮಾಡುವ ದಿನ ಗೋಪೂಜೆ. ಅಂದು ಗೋವುಗಳಿಗೆ, ಕರುಗಳಿಗೆ ಆರತಿ ಬೆಳಗಿ, ತಿನಿಸು ಕೊಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:53 pm, Wed, 19 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ