AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಪಾಡ್ಯಮಿಯಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ ಆದೇಶ

ಅಕ್ಟೋಬರ್‌ 26 ರಂದು ಬಲಿಪಾಡ್ಯಮಿಯಂದು ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.

ಬಲಿಪಾಡ್ಯಮಿಯಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ ಆದೇಶ
ಗೋಪೂಜೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 19, 2022 | 5:07 PM

Share

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್‌ 26 ರಂದು ಬಲಿಪಾಡ್ಯಮಿಯಂದು ರಾಜ್ಯ ಸಾರ್ಕಾರದ ಅಧೀನದಲ್ಲಿ ಬರುವಂತಹ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ (Go puja) ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ಸಚಿವರ ಸೂಚನೆಯಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಬಲಿಪಾಡ್ಯಮಿಯಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗೋಪೂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಗೋವುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಬೇಕಿದೆ. ಹಾಗಾಗಿ ಬಲಿಪಾಡ್ಯಮಿಯ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಸಲು ಸಚಿವೆ  ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.

ಗೋ ಪೂಜೆ ಏಕೆ ಮಾಡಬೇಕು?

ಗೋವನ್ನು ನಾವು ಲಕ್ಷ್ಮಿದೇವಿಗೆ ಹೋಲಿಸುತ್ತೇವೆ. ಮಾತೃಸ್ವರೂಪವೋ ಅವೆಲ್ಲವೂ ನಮಗೆ ಲಕ್ಷ್ಮಿ. ಅದು ಭೂಮಾತೆ ಆಗಿರಬಹುದು, ಕಾಮಧೇನು ಆಗಿರಬಹುದು. ಹಸುವಿಲ್ಲದೆ ಮನುಷ್ಯನಿಗೆ ಜೀವನ ಇಲ್ಲ. ಹಸುವಿನಿಂದ ಸಿಗುವ ಹಾಲು, ಮೊಸರು, ಬೆಣ್ಣೆ, ಮಜ್ಜಿಗೆ, ತುಪ್ಪ, ಗಂಜಳ, ಸಗಣಿ ಎಲ್ಲವೂ ಉಪಯೋಗಿಸಲಾಗುತ್ತದೆ. ಹೀಗೆ ಎಲ್ಲವನ್ನೂ ಮನುಷ್ಯನಿಗೆ ನೀಡುವ ಮುಗ್ಧವಾದ ಪ್ರಾಣಿ ಗೋವನ್ನು ಲಕ್ಷ್ಮಿಪೂಜೆ ಮಾಡುವ ದಿನ ಗೋಪೂಜೆ. ಅಂದು ಗೋವುಗಳಿಗೆ, ಕರುಗಳಿಗೆ ಆರತಿ ಬೆಳಗಿ, ತಿನಿಸು ಕೊಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:53 pm, Wed, 19 October 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್