AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಪಾಡ್ಯಮಿಯಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ ಆದೇಶ

ಅಕ್ಟೋಬರ್‌ 26 ರಂದು ಬಲಿಪಾಡ್ಯಮಿಯಂದು ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.

ಬಲಿಪಾಡ್ಯಮಿಯಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ ಆದೇಶ
ಗೋಪೂಜೆ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 19, 2022 | 5:07 PM

Share

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್‌ 26 ರಂದು ಬಲಿಪಾಡ್ಯಮಿಯಂದು ರಾಜ್ಯ ಸಾರ್ಕಾರದ ಅಧೀನದಲ್ಲಿ ಬರುವಂತಹ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ (Go puja) ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ಸಚಿವರ ಸೂಚನೆಯಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಬಲಿಪಾಡ್ಯಮಿಯಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗೋಪೂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಗೋವುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಬೇಕಿದೆ. ಹಾಗಾಗಿ ಬಲಿಪಾಡ್ಯಮಿಯ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಸಲು ಸಚಿವೆ  ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ.

ಗೋ ಪೂಜೆ ಏಕೆ ಮಾಡಬೇಕು?

ಗೋವನ್ನು ನಾವು ಲಕ್ಷ್ಮಿದೇವಿಗೆ ಹೋಲಿಸುತ್ತೇವೆ. ಮಾತೃಸ್ವರೂಪವೋ ಅವೆಲ್ಲವೂ ನಮಗೆ ಲಕ್ಷ್ಮಿ. ಅದು ಭೂಮಾತೆ ಆಗಿರಬಹುದು, ಕಾಮಧೇನು ಆಗಿರಬಹುದು. ಹಸುವಿಲ್ಲದೆ ಮನುಷ್ಯನಿಗೆ ಜೀವನ ಇಲ್ಲ. ಹಸುವಿನಿಂದ ಸಿಗುವ ಹಾಲು, ಮೊಸರು, ಬೆಣ್ಣೆ, ಮಜ್ಜಿಗೆ, ತುಪ್ಪ, ಗಂಜಳ, ಸಗಣಿ ಎಲ್ಲವೂ ಉಪಯೋಗಿಸಲಾಗುತ್ತದೆ. ಹೀಗೆ ಎಲ್ಲವನ್ನೂ ಮನುಷ್ಯನಿಗೆ ನೀಡುವ ಮುಗ್ಧವಾದ ಪ್ರಾಣಿ ಗೋವನ್ನು ಲಕ್ಷ್ಮಿಪೂಜೆ ಮಾಡುವ ದಿನ ಗೋಪೂಜೆ. ಅಂದು ಗೋವುಗಳಿಗೆ, ಕರುಗಳಿಗೆ ಆರತಿ ಬೆಳಗಿ, ತಿನಿಸು ಕೊಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:53 pm, Wed, 19 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ