AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು. ಅಪರಾಧ ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 10, 2021 | 12:52 PM

Share

ಬೆಂಗಳೂರು: ಪೊಲೀಸ್ ಇಲಾಖೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಅಲ್ಲದೆ ಪೊಲೀಸ್ (Police) ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಹೊಸ ಸರ್ಕಾರದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ದಕ್ಷತೆ, ಪ್ರಾಮಾಣಿಕತೆ ಇನ್ನೂ ಹೆಚ್ಚಾಗಬೇಕೆಂದು ಸೂಚಿಸಿದ್ದೇವೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು. ಅಪರಾಧ ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಅಲ್ಲದೇ ಈಗ ಕೊವಿಡ್ ಹೆಚ್ಚಾಗುತ್ತಿರುವ ಸಮಯ. ಹೀಗಾಗಿ ಕೊವಿಡ್ ನಿರ್ವಹಣೆ ಸಂದರ್ಭದಲ್ಲಿನ ಸವಾಲಿನ ಬಗ್ಗೆ ಹೇಳಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೊಲೀಸ್ ಕಲ್ಯಾಣ ಕಾರ್ಯಕ್ರಮ ಮಾಡಬೇಕು. ಇದರ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಯೋಜನೆ ಏನೆನಿದೆ ಅದನ್ನು ಮುಂದುವರಿಸುವ ಭರವಸೆಯನ್ನು ಕೂಡ ನೀಡಿದ್ದೇನೆ. ಅಲ್ಲದೆ ಗೃಹ ಇಲಾಖೆ ಹೇಗಿರಬೇಕು ಎಂಬ ಬಗ್ಗೆ ಈಗಾಗಲೇ ಗೃಹ ಸಚಿವರು ಕೂಡ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಸೂಚನೆ ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು, ತುರಾಯಿ ಬೇಡ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಕುರಿತು ಅಧಿಕೃತ ಅದೇಶ ಹೊರಡಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

Published On - 12:43 pm, Tue, 10 August 21

Follow Us
Web contact
Web contact

TV9 Kannada

Read More