Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗುತ್ತಿಗೆದಾರರಿಗೆ ಹಣ ಬಿಡುಗಡೆ ವಿಚಾರದಲ್ಲಿ ತಾರತಮ್ಯ; ಶಾಸಕ ಮುನಿರತ್ನಗೆ ಶಾಕ್

ಬಿಜೆಪಿ ಶಾಸಕ ಮುನ್ನಿರತ್ನ ಪ್ರತಿನಿಧಿಸುವ ಆರ್​.ಆರ್​. ನಗರ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಬಿಲ್ ಬಿಡುಗಡೆಯಲ್ಲೂ ಶಾಸಕ ಮುನಿರತ್ನ ಹಾಗೂ ಡಿಕೆಶಿ ಬ್ರದರ್ಸ್ ಜಿದ್ದಾಜಿದ್ದಿ ಮುಂದುವರೆದಿದೆ ಎನ್ನಲಾಗುತ್ತಿದೆ. ಬಿಜೆಪಿ - ಜೆಡಿಎಸ್ ಮೈತ್ರಿ ಓಡಾಟದ‌ ಮುಚಂಚೂಣಿಯಲ್ಲಿ ಕಾಣಿಸಿಕೊಂಡಿರುವ ಮುನಿರತ್ನ ಅವರ ಕ್ಷೇತ್ರದ ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಆಗಿಲ್ಲ.

ಬಿಬಿಎಂಪಿ ಗುತ್ತಿಗೆದಾರರಿಗೆ ಹಣ ಬಿಡುಗಡೆ ವಿಚಾರದಲ್ಲಿ ತಾರತಮ್ಯ; ಶಾಸಕ ಮುನಿರತ್ನಗೆ ಶಾಕ್
ಬಿಜೆಪಿ ಶಾಸಕ ಮುನಿರತ್ನ
Follow us
Shivaprasad
| Updated By: ಆಯೇಷಾ ಬಾನು

Updated on: Oct 07, 2023 | 1:19 PM

ಬೆಂಗಳೂರು, ಅ.07: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ 9 ವಾರ್ಡ್​ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಬಿಬಿಎಂಪಿ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 2021ರ ಅಕ್ಟೋಬರ್ ತಿಂಗಳ ಕಾಮಗಾರಿ ಬಿಲ್ ಅನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಶಾಸಕ ಮುನ್ನಿರತ್ನ ಪ್ರತಿನಿಧಿಸುವ ಆರ್​.ಆರ್​. ನಗರ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಬಿಲ್ ಬಿಡುಗಡೆಯಲ್ಲೂ ಶಾಸಕ ಮುನಿರತ್ನ ಹಾಗೂ ಡಿಕೆಶಿ ಬ್ರದರ್ಸ್ ಜಿದ್ದಾಜಿದ್ದಿ ಮುಂದುವರೆದಿದೆ ಎನ್ನಲಾಗುತ್ತಿದೆ. ಬಿಜೆಪಿ – ಜೆಡಿಎಸ್ ಮೈತ್ರಿ ಓಡಾಟದ‌ ಮುಚಂಚೂಣಿಯಲ್ಲಿ ಕಾಣಿಸಿಕೊಂಡಿರುವ ಮುನಿರತ್ನ ಅವರ ಕ್ಷೇತ್ರದ ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಆಗಿಲ್ಲ.

ಬಾಕಿ ಬಿಲ್ ಬಿಡುಗಡೆಗೂ ಮುನ್ನ ಸರ್ಕಾರ ವಿಶೇಷ ತನಿಖಾ ತಂಡ (ಎಸ್​ಐಟಿ) ರಚನೆ ಮಾಡಿತ್ತು. ಎಸ್ಐಟಿ ತನಿಖೆಯಲ್ಲಿ ಆರ್.ಆರ್. ನಗರ ಕ್ಷೇತ್ರದ ಕಾಮಗಾರಿಗಳಲ್ಲಿ ಹಲವು ಲೋಪಗಳು ಕಂಡು ಬಂದಿದೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕರಿಂದಲೂ ಆರ್.ಆರ್. ನಗರದ 9 ವಾರ್ಡ್​ಗಳಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ದೂರು ಬಂದಿದೆ. ಹಾಗಾಗಿ, ಆರ್.ಆರ್. ನಗರ ಕ್ಷೇತ್ರದ ಕಾಮಗಾರಿಗೆ ಸರ್ಕಾರ ಹಣ ಬಿಡುಗಡೆ ಮಾಡದಂತೆ ತಡೆ ಹಿಡಿದಿದೆ. ಉಳಿದಂತೆ ಬೇರೆ ಕ್ಷೇತ್ರಗಳಿಗೆ 73.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವಲಯವಾರು ಬಾಕಿ ಮೊತ್ತ ಹಂಚಿಕೆ ಮಾಡಿ ಪಾಲಿಕೆ ಅನುಮೋದಿಸಿದೆ. ಹಂತ ಹಂತವಾಗಿ ಗುತ್ತಿಗೆದಾರರ ಬಿಲ್ ಕ್ಲಿಯರ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಗಾಂಜಾ ಮಾರಾಟ ಆರೋಪ: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ

ಇನ್ನು ಜೇಷ್ಠತೆ ಆಧಾರದಲ್ಲಿ ಒಟ್ಟು ಬಿಲ್ ನ ಶೇ. 75 ರಷ್ಟು ಬಿಲ್ ಬಿಡುಗಡೆ ಮಾಡಲಾಗಿದೆ. ದೂರುಗಳು ಮತ್ತು ಎಸ್ ಐಟಿ ತನಿಖೆ ಹೆಸರಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಲ್ ಗಳಿಗೆ ಬ್ರೇಕ್ ಬಿದ್ದಿದೆ. ಆರ್.ಆರ್. ನಗರ ವಿಭಾಗದಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳಾದ 160, 129, 37, 73, 16, 17, 38, 42, 69ರ ಬಿಲ್ ಗಳಿಗೆ ಬ್ರೇಕ್ ಹಾಕಲಾಗಿದೆ.

ಯಾವ ವಲಯಕ್ಕೆ ಎಷ್ಟು ಬಿಡುಗಡೆ?

  • ಕೇಂದ್ರ  -1.15 ಕೋಟಿ ರೂ.
  • ಪೂರ್ವ -6.57 ಕೋಟಿ ರೂ.
  • ಪಶ್ಚಿಮ -6.32 ಕೋಟಿ ರೂ.
  • ಉತ್ತರ -9.23 ಕೋಟಿ ರೂ.
  • ಆರ್. ಆರ್. ನಗರ – 4.58 ಕೋಟಿ ರೂ.
  • ಬೊಮ್ಮನಹಳ್ಳಿ – 6.57 ಕೋಟಿ ರೂ.
  • ದಾಸರಹಳ್ಳಿ – 3.49 ಕೋಟಿ ರೂ.
  • ಯಲಹಂಕ – 32.71 ಕೋಟಿ ರೂ.
  • ಮಹದೇವಪುರ. – 4.59 ಕೋಟಿ ರೂ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ