AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಂಟು ವಲಯಗಳಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ

ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಾಲಿಟ್ರೆ ಸಾಕು, ಕುಂತ್ರೆ ಹಣ, ನಿಂತ್ರೆ ಹಣ ಸುಲಿಗೆ ಎನ್ನುವಂತಾಗಿದೆ. ಅದರಲ್ಲೂ ಡೆಂಟಲ್ ಕ್ಲಿನಿಕ್​ಗಳಿಗೆ ಕಾಲಿಟ್ರೆ, ಸಾವಿರಾರೂ ರೂಪಾಯಿ ಚಿಕಿತ್ಸೆಗೆ ನೀಡಬೇಕಾದ ಸ್ಥಿತಿ ಇದೆ. ಹೀಗಾಗಿ ಬಡ ಜನರ ಗೋಳಾಟ ತಪ್ಪಿಸಲು ಆರೋಗ್ಯ ಇಲಾಖೆ ರಾಜಧಾನಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಮುಂದಾಗಿದೆ.

ಬೆಂಗಳೂರಿನ ಎಂಟು ವಲಯಗಳಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jun 27, 2024 | 7:59 AM

Share

ಬೆಂಗಳೂರು, ಜೂನ್.27: ರಾಜಧಾನಿಯಲ್ಲಿ ಖಾಸಗಿ ಡೆಂಟಲ್ ಆಸ್ಪತ್ರೆಗಳಿಂದ ಬಡ ಜನರ ಸುಲಿಗೆ ಬಗ್ಗೆ ಸಾಕಷ್ಟು ದೂರುಗಳು ಸರ್ಕಾರಕ್ಕೆ ಕೇಳಿ ಬಂದಿವೆ. ಹೀಗಾಗಿ ರಾಜಧಾನಿಯಲ್ಲಿ ಸರ್ಕಾರಿ ಡೆಂಟಲ್ ಕ್ಲಿನಿಕ್ (Government Dental Clinic) ಶುರು ಮಾಡುವಂತೆ ಆರೋಗ್ಯ ಇಲಾಖೆ (Karnataka Health Department) ಹಾಗೂ ಸರ್ಕಾರಕ್ಕೆ (Karnataka Government) ಪತ್ರ ಬರೆದು ಜನರು ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರಿ ಡೆಂಟಲ್ ಕ್ಲಿನಿಕ್ ಗಳ ಆರಂಭಕ್ಕೆ ಮನವಿ ಬೆನ್ನಲೆ ನಮ್ಮ ಕ್ಲಿನಿಕ್ ಗಳ ಮಾದರಿಯಲ್ಲೇ ಬೆಂಗಳೂರಿನ ಪ್ರತಿ ವಲಯದಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಆರಂಭಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.

ಬೆಂಗಳೂರಿನ ಸರ್ಕಾರಿ ಡೆಂಟಲ್ ಕಾಲೇಜ್ ಗಳ ಸಹಯೋಗದೊಂದಿಗೆ ಡೆಂಟಲ್ ಕ್ಲಿನಿಕ್ ಆರಂಭಕ್ಕೆ ಚಿಂತನೆ ನಡೆದಿದೆ. ಸದ್ಯ ಬಡ ಹಾಗೂ ಮದ್ಯಮ ವರ್ಗದ ಜನರು ಬೆಂಗಳೂರಿನಲ್ಲಿ ಖಾಸಗಿ ದಂತ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆ ಪಡೆಯುವುದು ದುಬಾರಿಯಾಗಿದೆ. ಚಿಕ್ಕ ಪುಟ್ಟ ಸಮಸ್ಯೆಗಳಿಗೂ ಸಾವಿರಾರೂ ರೂಪಾಯಿ ಬಿಲ್ ಮಾಡಲಾಗ್ತಿದೆ. ಹೀಗಾಗಿ ಸರ್ಕಾರಿ ದಂತ ಚಿಕಿತ್ಸಾಲಯಗಳ ಪ್ರಾರಂಭಿಸುವಂತೆ ಸಾಕಷ್ಟು ಜನರು ಸರ್ಕಾರಕ್ಕೆ ಮನವಿ ಕೂಡಾ ಮಾಡಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಬೆಂಗಳೂರಿನ ಎಂಟು ವಲಯಗಳಲ್ಲಿ ಎಂಟು ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಮುಂದಾಗಿದೆ.

ಇದನ್ನೂ ಓದಿ: ರೋಗಿ ಸಾವು, ರೊಚ್ಚಿಗೆದ್ದ ಕುಟುಂಬಸ್ಥರಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ! ಆರು ಜನರ ವಿರುದ್ಧ ಎಫ್​ಐಆರ್ ದಾಖಲು

ಡೆಂಟಲ್ ಕ್ಲಿನಿಕ್​ಗಳಿಗೆ ವೈದ್ಯರ ನಿಯೋಜನೆ ಮಾಡಲು ಡೆಂಟಲ್ ಕಾಲೇಜುಗಳೊಂದಿಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದು ವೈದ್ಯರನ್ನ ಪಡೆದು ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಆರೋಗ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಡೆಂಟಲ್ ಕಾಲೇಜ್​ಗಳ ಸಹಯೋಗದೊಂದಿಗೆ ರಾಜಧಾನಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಸಾರ್ಕರ ಅನುಮತಿ ನೀಡಿದ್ರೆ ಮುಂದಿನ ಮೂರು ತಿಂಗಳಲ್ಲಿ ಎಂಟು ವಲಯಗಳಲ್ಲಿ ಡೆಂಟಲ್ ಕ್ಲಿನಿಕ್ ಆರಂಭವಾಗಲಿದೆ.

ಒಟ್ನಲ್ಲಿ ಸರ್ಕಾರ ಪ್ರಾರಂಭದ ಹಂತದಲ್ಲಿ ನಮ್ಮ ಕ್ಲಿನಿಕ್ ಮಾದರಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಪ್ಲಾನ್ ಮಾಡಿದ್ದು ಬಡ ರೋಗಿಗಳ ಆರೋಗ್ಯದ ದೃಷ್ಠಿಯಿಂದ ಒಳ್ಳೆಯ ಯೋಜನೆಯಾಗಿದೆ. ಆದ್ರೆ ಇದು ಎಷ್ಟರ ಮಟ್ಟಿಗೆ ಜಾರಿಯಾಗುತ್ತೆ ಅಂತಾ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ