AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಂಟು ವಲಯಗಳಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ

ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಾಲಿಟ್ರೆ ಸಾಕು, ಕುಂತ್ರೆ ಹಣ, ನಿಂತ್ರೆ ಹಣ ಸುಲಿಗೆ ಎನ್ನುವಂತಾಗಿದೆ. ಅದರಲ್ಲೂ ಡೆಂಟಲ್ ಕ್ಲಿನಿಕ್​ಗಳಿಗೆ ಕಾಲಿಟ್ರೆ, ಸಾವಿರಾರೂ ರೂಪಾಯಿ ಚಿಕಿತ್ಸೆಗೆ ನೀಡಬೇಕಾದ ಸ್ಥಿತಿ ಇದೆ. ಹೀಗಾಗಿ ಬಡ ಜನರ ಗೋಳಾಟ ತಪ್ಪಿಸಲು ಆರೋಗ್ಯ ಇಲಾಖೆ ರಾಜಧಾನಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಮುಂದಾಗಿದೆ.

ಬೆಂಗಳೂರಿನ ಎಂಟು ವಲಯಗಳಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jun 27, 2024 | 7:59 AM

Share

ಬೆಂಗಳೂರು, ಜೂನ್.27: ರಾಜಧಾನಿಯಲ್ಲಿ ಖಾಸಗಿ ಡೆಂಟಲ್ ಆಸ್ಪತ್ರೆಗಳಿಂದ ಬಡ ಜನರ ಸುಲಿಗೆ ಬಗ್ಗೆ ಸಾಕಷ್ಟು ದೂರುಗಳು ಸರ್ಕಾರಕ್ಕೆ ಕೇಳಿ ಬಂದಿವೆ. ಹೀಗಾಗಿ ರಾಜಧಾನಿಯಲ್ಲಿ ಸರ್ಕಾರಿ ಡೆಂಟಲ್ ಕ್ಲಿನಿಕ್ (Government Dental Clinic) ಶುರು ಮಾಡುವಂತೆ ಆರೋಗ್ಯ ಇಲಾಖೆ (Karnataka Health Department) ಹಾಗೂ ಸರ್ಕಾರಕ್ಕೆ (Karnataka Government) ಪತ್ರ ಬರೆದು ಜನರು ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರಿ ಡೆಂಟಲ್ ಕ್ಲಿನಿಕ್ ಗಳ ಆರಂಭಕ್ಕೆ ಮನವಿ ಬೆನ್ನಲೆ ನಮ್ಮ ಕ್ಲಿನಿಕ್ ಗಳ ಮಾದರಿಯಲ್ಲೇ ಬೆಂಗಳೂರಿನ ಪ್ರತಿ ವಲಯದಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಆರಂಭಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.

ಬೆಂಗಳೂರಿನ ಸರ್ಕಾರಿ ಡೆಂಟಲ್ ಕಾಲೇಜ್ ಗಳ ಸಹಯೋಗದೊಂದಿಗೆ ಡೆಂಟಲ್ ಕ್ಲಿನಿಕ್ ಆರಂಭಕ್ಕೆ ಚಿಂತನೆ ನಡೆದಿದೆ. ಸದ್ಯ ಬಡ ಹಾಗೂ ಮದ್ಯಮ ವರ್ಗದ ಜನರು ಬೆಂಗಳೂರಿನಲ್ಲಿ ಖಾಸಗಿ ದಂತ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆ ಪಡೆಯುವುದು ದುಬಾರಿಯಾಗಿದೆ. ಚಿಕ್ಕ ಪುಟ್ಟ ಸಮಸ್ಯೆಗಳಿಗೂ ಸಾವಿರಾರೂ ರೂಪಾಯಿ ಬಿಲ್ ಮಾಡಲಾಗ್ತಿದೆ. ಹೀಗಾಗಿ ಸರ್ಕಾರಿ ದಂತ ಚಿಕಿತ್ಸಾಲಯಗಳ ಪ್ರಾರಂಭಿಸುವಂತೆ ಸಾಕಷ್ಟು ಜನರು ಸರ್ಕಾರಕ್ಕೆ ಮನವಿ ಕೂಡಾ ಮಾಡಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಬೆಂಗಳೂರಿನ ಎಂಟು ವಲಯಗಳಲ್ಲಿ ಎಂಟು ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಮುಂದಾಗಿದೆ.

ಇದನ್ನೂ ಓದಿ: ರೋಗಿ ಸಾವು, ರೊಚ್ಚಿಗೆದ್ದ ಕುಟುಂಬಸ್ಥರಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ! ಆರು ಜನರ ವಿರುದ್ಧ ಎಫ್​ಐಆರ್ ದಾಖಲು

ಡೆಂಟಲ್ ಕ್ಲಿನಿಕ್​ಗಳಿಗೆ ವೈದ್ಯರ ನಿಯೋಜನೆ ಮಾಡಲು ಡೆಂಟಲ್ ಕಾಲೇಜುಗಳೊಂದಿಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದು ವೈದ್ಯರನ್ನ ಪಡೆದು ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಆರೋಗ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಡೆಂಟಲ್ ಕಾಲೇಜ್​ಗಳ ಸಹಯೋಗದೊಂದಿಗೆ ರಾಜಧಾನಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಸಾರ್ಕರ ಅನುಮತಿ ನೀಡಿದ್ರೆ ಮುಂದಿನ ಮೂರು ತಿಂಗಳಲ್ಲಿ ಎಂಟು ವಲಯಗಳಲ್ಲಿ ಡೆಂಟಲ್ ಕ್ಲಿನಿಕ್ ಆರಂಭವಾಗಲಿದೆ.

ಒಟ್ನಲ್ಲಿ ಸರ್ಕಾರ ಪ್ರಾರಂಭದ ಹಂತದಲ್ಲಿ ನಮ್ಮ ಕ್ಲಿನಿಕ್ ಮಾದರಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಪ್ಲಾನ್ ಮಾಡಿದ್ದು ಬಡ ರೋಗಿಗಳ ಆರೋಗ್ಯದ ದೃಷ್ಠಿಯಿಂದ ಒಳ್ಳೆಯ ಯೋಜನೆಯಾಗಿದೆ. ಆದ್ರೆ ಇದು ಎಷ್ಟರ ಮಟ್ಟಿಗೆ ಜಾರಿಯಾಗುತ್ತೆ ಅಂತಾ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್