ಬೆಂಗಳೂರಿನ ಎಂಟು ವಲಯಗಳಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ

ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಾಲಿಟ್ರೆ ಸಾಕು, ಕುಂತ್ರೆ ಹಣ, ನಿಂತ್ರೆ ಹಣ ಸುಲಿಗೆ ಎನ್ನುವಂತಾಗಿದೆ. ಅದರಲ್ಲೂ ಡೆಂಟಲ್ ಕ್ಲಿನಿಕ್​ಗಳಿಗೆ ಕಾಲಿಟ್ರೆ, ಸಾವಿರಾರೂ ರೂಪಾಯಿ ಚಿಕಿತ್ಸೆಗೆ ನೀಡಬೇಕಾದ ಸ್ಥಿತಿ ಇದೆ. ಹೀಗಾಗಿ ಬಡ ಜನರ ಗೋಳಾಟ ತಪ್ಪಿಸಲು ಆರೋಗ್ಯ ಇಲಾಖೆ ರಾಜಧಾನಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಮುಂದಾಗಿದೆ.

ಬೆಂಗಳೂರಿನ ಎಂಟು ವಲಯಗಳಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jun 27, 2024 | 7:59 AM

ಬೆಂಗಳೂರು, ಜೂನ್.27: ರಾಜಧಾನಿಯಲ್ಲಿ ಖಾಸಗಿ ಡೆಂಟಲ್ ಆಸ್ಪತ್ರೆಗಳಿಂದ ಬಡ ಜನರ ಸುಲಿಗೆ ಬಗ್ಗೆ ಸಾಕಷ್ಟು ದೂರುಗಳು ಸರ್ಕಾರಕ್ಕೆ ಕೇಳಿ ಬಂದಿವೆ. ಹೀಗಾಗಿ ರಾಜಧಾನಿಯಲ್ಲಿ ಸರ್ಕಾರಿ ಡೆಂಟಲ್ ಕ್ಲಿನಿಕ್ (Government Dental Clinic) ಶುರು ಮಾಡುವಂತೆ ಆರೋಗ್ಯ ಇಲಾಖೆ (Karnataka Health Department) ಹಾಗೂ ಸರ್ಕಾರಕ್ಕೆ (Karnataka Government) ಪತ್ರ ಬರೆದು ಜನರು ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರಿ ಡೆಂಟಲ್ ಕ್ಲಿನಿಕ್ ಗಳ ಆರಂಭಕ್ಕೆ ಮನವಿ ಬೆನ್ನಲೆ ನಮ್ಮ ಕ್ಲಿನಿಕ್ ಗಳ ಮಾದರಿಯಲ್ಲೇ ಬೆಂಗಳೂರಿನ ಪ್ರತಿ ವಲಯದಲ್ಲಿ ಉಚಿತ ದಂತ ಚಿಕಿತ್ಸಾಲಯಗಳ ಆರಂಭಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.

ಬೆಂಗಳೂರಿನ ಸರ್ಕಾರಿ ಡೆಂಟಲ್ ಕಾಲೇಜ್ ಗಳ ಸಹಯೋಗದೊಂದಿಗೆ ಡೆಂಟಲ್ ಕ್ಲಿನಿಕ್ ಆರಂಭಕ್ಕೆ ಚಿಂತನೆ ನಡೆದಿದೆ. ಸದ್ಯ ಬಡ ಹಾಗೂ ಮದ್ಯಮ ವರ್ಗದ ಜನರು ಬೆಂಗಳೂರಿನಲ್ಲಿ ಖಾಸಗಿ ದಂತ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆ ಪಡೆಯುವುದು ದುಬಾರಿಯಾಗಿದೆ. ಚಿಕ್ಕ ಪುಟ್ಟ ಸಮಸ್ಯೆಗಳಿಗೂ ಸಾವಿರಾರೂ ರೂಪಾಯಿ ಬಿಲ್ ಮಾಡಲಾಗ್ತಿದೆ. ಹೀಗಾಗಿ ಸರ್ಕಾರಿ ದಂತ ಚಿಕಿತ್ಸಾಲಯಗಳ ಪ್ರಾರಂಭಿಸುವಂತೆ ಸಾಕಷ್ಟು ಜನರು ಸರ್ಕಾರಕ್ಕೆ ಮನವಿ ಕೂಡಾ ಮಾಡಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಬೆಂಗಳೂರಿನ ಎಂಟು ವಲಯಗಳಲ್ಲಿ ಎಂಟು ದಂತ ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಮುಂದಾಗಿದೆ.

ಇದನ್ನೂ ಓದಿ: ರೋಗಿ ಸಾವು, ರೊಚ್ಚಿಗೆದ್ದ ಕುಟುಂಬಸ್ಥರಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ! ಆರು ಜನರ ವಿರುದ್ಧ ಎಫ್​ಐಆರ್ ದಾಖಲು

ಡೆಂಟಲ್ ಕ್ಲಿನಿಕ್​ಗಳಿಗೆ ವೈದ್ಯರ ನಿಯೋಜನೆ ಮಾಡಲು ಡೆಂಟಲ್ ಕಾಲೇಜುಗಳೊಂದಿಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದು ವೈದ್ಯರನ್ನ ಪಡೆದು ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಆರೋಗ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಡೆಂಟಲ್ ಕಾಲೇಜ್​ಗಳ ಸಹಯೋಗದೊಂದಿಗೆ ರಾಜಧಾನಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಸಾರ್ಕರ ಅನುಮತಿ ನೀಡಿದ್ರೆ ಮುಂದಿನ ಮೂರು ತಿಂಗಳಲ್ಲಿ ಎಂಟು ವಲಯಗಳಲ್ಲಿ ಡೆಂಟಲ್ ಕ್ಲಿನಿಕ್ ಆರಂಭವಾಗಲಿದೆ.

ಒಟ್ನಲ್ಲಿ ಸರ್ಕಾರ ಪ್ರಾರಂಭದ ಹಂತದಲ್ಲಿ ನಮ್ಮ ಕ್ಲಿನಿಕ್ ಮಾದರಿಯಲ್ಲಿ ಡೆಂಟಲ್ ಕ್ಲಿನಿಕ್ ಶುರು ಮಾಡಲು ಪ್ಲಾನ್ ಮಾಡಿದ್ದು ಬಡ ರೋಗಿಗಳ ಆರೋಗ್ಯದ ದೃಷ್ಠಿಯಿಂದ ಒಳ್ಳೆಯ ಯೋಜನೆಯಾಗಿದೆ. ಆದ್ರೆ ಇದು ಎಷ್ಟರ ಮಟ್ಟಿಗೆ ಜಾರಿಯಾಗುತ್ತೆ ಅಂತಾ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು