AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ವೀಕ್ಷಣೆಗೂ ಶುಲ್ಕ: ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲಿ ಟೂರ್​ ಗೈಡ್​ ವ್ಯವಸ್ಥೆ

ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧದಲ್ಲಿ ಟೂರ್​ ಗೈಡ್​ ಆರಂಭವಾಗಿದೆ. ಸಾರ್ವಜನಿಕ ರಜಾದಿನಗಳಲ್ಲಿ ಮಾತ್ರ ಪ್ರವಾಸಿಗರಿಗೆ ವಿಧಾನಸೌಧ ನೋಡಲು ಅವಕಾಶ ನೀಡಲಾಗುತ್ತದೆ. ಆನ್‌ಲೈನ್ ಟಿಕೆಟ್ ಬುಕಿಂಗ್ ಸೌಲಭ್ಯ, ಸುಸಜ್ಜಿತ ವೈದ್ಯಕೀಯ ತಂಡ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರು ನಿಯಮಗಳನ್ನು ಪಾಲಿಸಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸರ್ಕಾರ ಹೇಳಿದೆ.

ವಿಧಾನಸೌಧ ವೀಕ್ಷಣೆಗೂ ಶುಲ್ಕ: ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲಿ ಟೂರ್​ ಗೈಡ್​ ವ್ಯವಸ್ಥೆ
ವಿಧಾನಸೌಧ
ಕಿರಣ್​ ಹನಿಯಡ್ಕ
| Edited By: |

Updated on:Apr 08, 2025 | 6:24 PM

Share

ಬೆಂಗಳೂರು, ಏಪ್ರಿಲ್​ 08: ರಾಷ್ಟ್ರಪತಿ ಭವನ (Rashtrapati Bhavan) ಮತ್ತು ಸಂಸತ್ ಭವನದ (Sansat Bhavan) ಮಾದರಿಯಲ್ಲಿ ವಿಧಾನಸೌಧ (Vidhansoudha) ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್​ ಗೈಡ್​ ಏರ್ಪಡಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್​ ಗೈಡ್​ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಏನಿದು ಟೂರ್​ ಗೈಡ್​? ವಿಶೇಷತೆ ಏನು?

ವಿಧಾನಸೌಧ ಕಟ್ಟಡಕ್ಕೆ ಪ್ರಸ್ತುತ ಶಾಶ್ವತ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ, ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿಧಾನಸೌಧ ಕಟ್ಟಡ ವೀಕ್ಷಿಸಲು “Guided Tour” ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.

  • ಸಾರ್ವತ್ರಿಕ ರಜಾ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
  • ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ರಂತೆ ತಂಡಗಳನ್ನಾಗಿ ವಿಭಜಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ. ಹಾಗೂ ಈ ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿಗಳು (Tourist Officer) ಇರುತ್ತಾರೆ. ಹಾಗೂ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಇವರನ್ನು ಉಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಲಾಗುತ್ತದೆ.
  • Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆ ತಂತ್ರಾಂಶ ಅಭಿವೃದ್ಧಿ ಪಡಿಸುತ್ತಿದೆ.
  • ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರವು ಜನಸ್ನೇಹಿಯಾಗಿದೆ. ಹಾಗೂ ವಸೂಲಿ ಮಾಡುವ ಪ್ರವೇಶ ಶುಲ್ಕದಲ್ಲಿ ನಿರ್ದಿಷ್ಟ ಶುಲ್ಕ ಪ್ರವಾಸೋದ್ಯಮ ಇಲಾಖೆಗೆ ಸೇರಲಿದೆ.
  • ಉಪ ಪೊಲೀಸ್ ಆಯುಕ್ತರು, ವಿಧಾನಸೌಧ ಭದ್ರತೆ ಇವರು ಭದ್ರತೆಗೆ ಸಂಬಂಧಿಸಿದಂತೆ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿ, ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
  • ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ದಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸಬೇಕು. ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗುತ್ತದೆ.
  • ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಪರಿವೀಕ್ಷಣೆಯ ಕುರಿತು ರೂಟ್ ಮ್ಯಾಪ್ (Root Map/Lay out map) ವ್ಯವಸ್ಥೆ ಇದೆ.
  • ಪರಿವೀಕ್ಷಣೆಯ ಸಂದರ್ಭದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಸುಸಜ್ಜಿತ ವೈದ್ಯಕೀಯ ತಂಡದೊಂದಿಗೆ ಆಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
  • ಅಗ್ನಿ ಅವಘಡ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕ ಇಲಾಖೆಯರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸಿದ್ಧವಾಗಿರುತ್ತದೆ.
  • ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ವಿಧಾನಸೌಧದ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸರ್ಕಾರ ಮನವಿ ಮಾಡಿದೆ.

ಇದನ್ನೂ ಓದಿ: ಆನ್​ಲೈನ್​ನಲ್ಲೇ ಗ್ರಾಮ ನಕ್ಷೆ, ಸರ್ವೇ ಸಂಖ್ಯೆ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಇದನ್ನೂ ಓದಿ
Image
ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
Image
ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದು ಮತ್ತೆ ಬಾಲಕಿಯ ಅಪಹರಿಸಿದ
Image
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Tue, 8 April 25

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ