AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 13, 2021 | 9:21 AM

Share

ಬೆಂಗಳೂರು: 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು (private school) ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ (State Government) ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. ಈ ಹಿಂದೆ 2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ(Fees) ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆದುಕೊಳ್ಳುವಂತೆ ಆದೇಶಿಸಿದೆ.

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ 2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿತ್ತು.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿತ್ತು. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

Published On - 9:15 am, Sat, 13 November 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್