AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 13, 2021 | 9:21 AM

Share

ಬೆಂಗಳೂರು: 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು (private school) ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ (State Government) ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. ಈ ಹಿಂದೆ 2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ(Fees) ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆದುಕೊಳ್ಳುವಂತೆ ಆದೇಶಿಸಿದೆ.

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ 2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿತ್ತು.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿತ್ತು. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

Published On - 9:15 am, Sat, 13 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ