AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 13, 2021 | 9:21 AM

Share

ಬೆಂಗಳೂರು: 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು (private school) ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ (State Government) ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. ಈ ಹಿಂದೆ 2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ(Fees) ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆದುಕೊಳ್ಳುವಂತೆ ಆದೇಶಿಸಿದೆ.

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ 2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿತ್ತು.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿತ್ತು. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

Published On - 9:15 am, Sat, 13 November 21

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ