AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 13, 2021 | 9:21 AM

Share

ಬೆಂಗಳೂರು: 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು (private school) ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ (State Government) ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. ಈ ಹಿಂದೆ 2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ(Fees) ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆದುಕೊಳ್ಳುವಂತೆ ಆದೇಶಿಸಿದೆ.

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ 2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿತ್ತು.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿತ್ತು. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

Published On - 9:15 am, Sat, 13 November 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ