AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ; ಇಲ್ಲಿದೆ ವಿವರ

ಕನ್ನಡ ಸಂಸ್ಕೃತಿ ಇಲಾಖೆ(Kannada sanskrit ilake) ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ; ಇಲ್ಲಿದೆ ವಿವರ
ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 16, 2024 | 5:51 PM

Share

ಬೆಂಗಳೂರು, ಮಾ.16: ಕನ್ನಡ ಸಂಸ್ಕೃತಿ ಇಲಾಖೆ(Kannada sanskrit ilake) ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ವಿವಿಧ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರು ವಿವರಗಳು ಇಂತಿವೆ.

ಅಧ್ಯಕ್ಷ ಹಾಗೂ ಸದಸ್ಯರು ವಿವರ

  • ಕನ್ನಡ ಪುಸ್ತಕ ಪ್ರಾಧಿಕಾರ – ಅಧ್ಯಕ್ಷರು ಮೈಸೂರು ಮಾನಸ
  • ಕರ್ನಾಟಕ ಸಾಹಿತ್ಯ ಅಕಾಡೆಮಿ- ಎಲ್ ಎನ್ ಮುಕುಂದರಾಜ್
  • ಕರ್ನಾಟಕ ನಾಟಕ ಅಕಾಡೆಮಿ- ಕೆವಿ ನಾಗರಾಜಮೂರ್ತಿ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ- ಕೃಪಾ ಫಡಕಿ
  • ಕರ್ನಾಟಕ ಶಿಲ್ಪ ಕಲಾ ಅಕಾಡಮಿ- ಎಂಸಿ ರಮೇಶ್
  • ಲಲಿತ ಕಲಾ ಅಕಾಡಮಿ- ಡಾ.ಪಸ ಕುಮಾರ್
  • ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಂ ಶೆಟ್ಟಿ
  • ಜಾನಪದ ಅಕಾಡೆಮಿ- ಶಿವ ಪ್ರಸಾದ್ ಗೊಲ್ಲಹಳ್ಳಿ
  • ತುಳು ಸಾಹಿತ್ಯ ಅಕಾಡೆಮಿ- ತಾರಾನಾಥ ಗಟ್ಟಿ ಕಾಪಿಕಾಡ್
  • ಕೊಂಕಣಿ ಸಾಹಿತ್ಯ ಅಕಾಡೆಮಿ- ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್
  • ಬ್ಯಾರಿ ಸಾಹಿತ್ಯ ಅಕಾಡೆಮಿ- ಉಮರ್ ಯು ಎಚ್
  • ಅರೆ ಭಾಷಾ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ- ಸದಾನಂದ ಮಾವಜಿ
  • ಬಯಲಾಟ ಅಕಾಡೆಮಿ ದುರ್ಗದಾಸ್
  • ಬಂಜಾರ ಅಕಾಡೆಮಿ ಡಾಕ್ಟರ್‌ ಎಂ ಆರ್ ಗೋವಿಂದಸ್ವಾಮಿ
  • ರಂಗ ಸಮಾಜ- ಡಾ.ರಾಮಕೃಷ್ಣಯ್ಯ
  • ಕೊಡವ ಸಾಹಿತ್ಯ ಅಕಾಡೆಮಿ- ಅಜ್ಜಿನಕೊಂಡ ಮಹೇಶ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More