AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ನಟ ಪುನೀತ್ ಉಪಗ್ರಹ ನವೆಂಬರ್​ನಲ್ಲಿ ಆಕಾಶಕ್ಕೆ ಚಿಮ್ಮಲಿದೆ!

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಪುನೀತ್ ಉಪಗ್ರಹ ನಿರ್ಮಿಸುತ್ತಿದ್ದಾರೆ. ಪುನೀತ್ ಉಪಗ್ರಹವನ್ನು ನ.15 ರಿಂದ ಡಿ.31ರ ನಡುವೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲು ನಿರ್ಧರಿಸಲಾಗಿದೆ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ನಟ ಪುನೀತ್ ಉಪಗ್ರಹ ನವೆಂಬರ್​ನಲ್ಲಿ ಆಕಾಶಕ್ಕೆ ಚಿಮ್ಮಲಿದೆ!
ಪುನೀತ್ ರಾಜ್​ಕುಮಾರ್
TV9 Web
| Edited By: ಆಯೇಷಾ ಬಾನು|

Updated on:Aug 25, 2022 | 8:59 PM

Share

ಬೆಂಗಳೂರು: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್(Puneeth Rajkumar) ನಮ್ಮನ್ನ ಅಗಲಿ ಬರೋಬ್ಬರಿ 10 ತಿಂಗಳಾಗುತ್ತಿದೆ. ಆದ್ರೂ ಪ್ರತಿಯೊಬ್ಬ ಅಭಿಮಾನಿಯ ಹೃದಯದಲ್ಲಿ ಪುನೀತ್ ಜೀವಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರ ಮೇಲಿನ ಕ್ರೇಜ್ ಕೊಂಚವೂ ಕಡಿಮೆ ಆಗಿಲ್ಲ. ಇದೀಗ ಪುನೀತ್ ಅಭಿಮಾನಿಗಳು ಸಂತೋಷ ಪಡುವಂತ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ನವೆಂಬರ್/ಡಿಸೆಂಬರ್ ನಲ್ಲಿ ಪುನೀತ್ ಉಪಗ್ರಹ(Puneet Satellite) ನಭಕ್ಕೆ ನೆಗೆಯಲಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಪುನೀತ್ ಉಪಗ್ರಹ ನಿರ್ಮಿಸುತ್ತಿದ್ದಾರೆ. ಪುನೀತ್ ಉಪಗ್ರಹವನ್ನು ನ.15 ರಿಂದ ಡಿ.31ರ ನಡುವೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಸಾವಿರ ವಿದ್ಯಾರ್ಥಿಗಳು ಉಡಾವಣೆಗೆ ಶ್ರೀಹರಿಕೋಟಾಕ್ಕೆ ತೆರಳಲಿದ್ದಾರೆ.

ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳ ಆಯೋಜನೆ ಮಾಡಲಾಗಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದೊಯ್ಯಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮುಂದಾಗಿದೆ. ಈ ಸಂಬಂಧ ಇಂದು ವಿಕಾಸಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ, ಆಜಾದಿ ಕಾ ಅಮೃತಮಹೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಂದ ಕೆಜಿಎಸ್3ಸ್ಯಾಟ್ ಉಪಗ್ರಹ 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಉಪಗ್ರಹ ಅಭಿವೃದ್ಧಿಗೆ ವ್ಯವಸ್ಥೆ ಮಾಡಲಾಗಿದ್ದು ದಿ. ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಈ ಉಪಗ್ರಹಕ್ಕೆ ಪುನೀತ್ ಹೆಸರು ಇಡಲಾಗಿದೆ. ಪ್ರಧಾನಿ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:59 pm, Thu, 25 August 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ