AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಚರ್ಚ್​ ಮೇಲೆ ಗೂಢಚಾರಿಕೆ ಆರೋಪ; ಪೊಲೀಸರಿಗೆ ಮಾಹಿತಿ ನೀಡದಂತೆ ಕ್ರೈಸ್ತ ಮಹಾಧರ್ಮಾಧ್ಯಕ್ಷ ಸೂಚನೆ

ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಟಿವಿ9 ಡಿಜಿಟಲ್​ಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ.

ಸರ್ಕಾರದಿಂದ ಚರ್ಚ್​ ಮೇಲೆ ಗೂಢಚಾರಿಕೆ ಆರೋಪ; ಪೊಲೀಸರಿಗೆ ಮಾಹಿತಿ ನೀಡದಂತೆ ಕ್ರೈಸ್ತ ಮಹಾಧರ್ಮಾಧ್ಯಕ್ಷ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 26, 2021 | 8:46 AM

Share

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮಂತಾರಗೊಳಿಸಲಾಗುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಆದರೆ ಸರ್ಕಾರ ಮತಾಂತರ ತಡೆಗಟ್ಟಲು ಕರ್ನಾಟಕದ ಚರ್ಚ್​ಗಳ ಮೇಲೆ ಗೂಢಚಾರಿಕೆ ನಡೆಸುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಚರ್ಚ್​ಗೆ ಭೇಟಿ ನೀಡಲಿದ್ದು, ಗಣತಿ, ಗೂಢಚಾರಿಕೆ ನಡೆಸುತ್ತಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಆರೋಪ ಮಾಡಿದ್ದಾರೆ.

ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಟಿವಿ9 ಡಿಜಿಟಲ್​ಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ.

ಮತಾಂತರ ಮಾಡಲಾಗುತ್ತಿದೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಯಾರೋ‌ ಶಿಲುಬೆ ಹಾಕಿಕೊಂಡ ಮಾತ್ರಕ್ಕೆ, ಕ್ರೈಸ್ತ ದೇವಾಲಯಕ್ಕೆ ಬಂದ ಮಾತ್ರಕ್ಕೆ ಅದನ್ನು ಮತಾಂತರ ಎನ್ನಬಾರದು. ಸರ್ಕಾರ ಚರ್ಚ್​ಗಳಿಗೆ ಪೊಲೀಸ್​ರನ್ನು ಕಳುಹಿಸಿ ಮಾಹಿತಿ ಪಡೆಯುತ್ತಿದೆ. ಕ್ರೈಸ್ತ ಸಮುದಾಯದ ಗಣತಿ ಮಾಡಲಾಗುತ್ತಿದೆ. ಇದು ತಪ್ಪು. ಕ್ರೈಸ್ತ ಧರ್ಮವನ್ನೇ ಟಾರ್ಗೆಟ್ ಮಾಡೋದು ತಪ್ಪು ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ವಿರೋಧ ವ್ಯಕ್ತಪಡಿಸಿದ್ದಾರೆ.

ಯಾವುದೇ ಲಿಖಿತ ಮಾಹಿತಿ ಇಲ್ಲದೆ ಪೊಲೀಸರಿಗೆ ಮಾಹಿತಿ ನೀಡದಂತೆ ರಾಜ್ಯದ ಚರ್ಚ್​ಗಳಿಗೆ ಮಾಹಿತಿ ನೀಡಲಾಗಿದೆ. ಸರ್ಕಾರ ಮತಾಂತರ ನಿಷೇಧ ಕಾಯ್ದೆ ಯಾಕೆ ತರಬೇಕು? ಈ ಬಗ್ಗೆ ವಿಶ್ವ ಕ್ರೈಸ್ತ ಧರ್ಮದ ಪೋಪ್ ಅವರಿಗೂ ಮಾಹಿತಿ ಹೋಗಿದೆ. ನವೆಂಬರ್​ನಲ್ಲಿ ಮೋದಿ ಇಟಲಿಗೆ ಭೇಟಿ ನೀಡುತ್ತಿದ್ದು ಪೋಪ್ ಅವರನ್ನು ಭೇಟಿ ಆಗಲಿದ್ದಾರೆ. ಆಗ ಈ ವಿಚಾರ ಹೊರ ಬರಲಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ತಿಳಿಸಿದ್ದಾರೆ.

ಇದನ್ನೂ ಓದಿ: ಹಾಸನ: ವೃದ್ಧೆ ನಾಪತ್ತೆ; ತಾಯಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪುತ್ರನಿಂದ ದೂರು

ಕೊಡಗು: ಮತಾಂತರಕ್ಕೆ ಯತ್ನಿಸಿದ್ದ ಆರೋಪದಲ್ಲಿ ದಿಡ್ಡಳ್ಳಿ ಹೋರಾಟಗಾರ್ತಿ ಮುತ್ತಮ್ಮ ಪೊಲೀಸರ ವಶಕ್ಕೆ

Published On - 7:29 am, Tue, 26 October 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್