AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಚರ್ಚ್​ ಮೇಲೆ ಗೂಢಚಾರಿಕೆ ಆರೋಪ; ಪೊಲೀಸರಿಗೆ ಮಾಹಿತಿ ನೀಡದಂತೆ ಕ್ರೈಸ್ತ ಮಹಾಧರ್ಮಾಧ್ಯಕ್ಷ ಸೂಚನೆ

ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಟಿವಿ9 ಡಿಜಿಟಲ್​ಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ.

ಸರ್ಕಾರದಿಂದ ಚರ್ಚ್​ ಮೇಲೆ ಗೂಢಚಾರಿಕೆ ಆರೋಪ; ಪೊಲೀಸರಿಗೆ ಮಾಹಿತಿ ನೀಡದಂತೆ ಕ್ರೈಸ್ತ ಮಹಾಧರ್ಮಾಧ್ಯಕ್ಷ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 26, 2021 | 8:46 AM

Share

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮಂತಾರಗೊಳಿಸಲಾಗುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಆದರೆ ಸರ್ಕಾರ ಮತಾಂತರ ತಡೆಗಟ್ಟಲು ಕರ್ನಾಟಕದ ಚರ್ಚ್​ಗಳ ಮೇಲೆ ಗೂಢಚಾರಿಕೆ ನಡೆಸುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಚರ್ಚ್​ಗೆ ಭೇಟಿ ನೀಡಲಿದ್ದು, ಗಣತಿ, ಗೂಢಚಾರಿಕೆ ನಡೆಸುತ್ತಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಆರೋಪ ಮಾಡಿದ್ದಾರೆ.

ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಟಿವಿ9 ಡಿಜಿಟಲ್​ಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ.

ಮತಾಂತರ ಮಾಡಲಾಗುತ್ತಿದೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಯಾರೋ‌ ಶಿಲುಬೆ ಹಾಕಿಕೊಂಡ ಮಾತ್ರಕ್ಕೆ, ಕ್ರೈಸ್ತ ದೇವಾಲಯಕ್ಕೆ ಬಂದ ಮಾತ್ರಕ್ಕೆ ಅದನ್ನು ಮತಾಂತರ ಎನ್ನಬಾರದು. ಸರ್ಕಾರ ಚರ್ಚ್​ಗಳಿಗೆ ಪೊಲೀಸ್​ರನ್ನು ಕಳುಹಿಸಿ ಮಾಹಿತಿ ಪಡೆಯುತ್ತಿದೆ. ಕ್ರೈಸ್ತ ಸಮುದಾಯದ ಗಣತಿ ಮಾಡಲಾಗುತ್ತಿದೆ. ಇದು ತಪ್ಪು. ಕ್ರೈಸ್ತ ಧರ್ಮವನ್ನೇ ಟಾರ್ಗೆಟ್ ಮಾಡೋದು ತಪ್ಪು ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ವಿರೋಧ ವ್ಯಕ್ತಪಡಿಸಿದ್ದಾರೆ.

ಯಾವುದೇ ಲಿಖಿತ ಮಾಹಿತಿ ಇಲ್ಲದೆ ಪೊಲೀಸರಿಗೆ ಮಾಹಿತಿ ನೀಡದಂತೆ ರಾಜ್ಯದ ಚರ್ಚ್​ಗಳಿಗೆ ಮಾಹಿತಿ ನೀಡಲಾಗಿದೆ. ಸರ್ಕಾರ ಮತಾಂತರ ನಿಷೇಧ ಕಾಯ್ದೆ ಯಾಕೆ ತರಬೇಕು? ಈ ಬಗ್ಗೆ ವಿಶ್ವ ಕ್ರೈಸ್ತ ಧರ್ಮದ ಪೋಪ್ ಅವರಿಗೂ ಮಾಹಿತಿ ಹೋಗಿದೆ. ನವೆಂಬರ್​ನಲ್ಲಿ ಮೋದಿ ಇಟಲಿಗೆ ಭೇಟಿ ನೀಡುತ್ತಿದ್ದು ಪೋಪ್ ಅವರನ್ನು ಭೇಟಿ ಆಗಲಿದ್ದಾರೆ. ಆಗ ಈ ವಿಚಾರ ಹೊರ ಬರಲಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ತಿಳಿಸಿದ್ದಾರೆ.

ಇದನ್ನೂ ಓದಿ: ಹಾಸನ: ವೃದ್ಧೆ ನಾಪತ್ತೆ; ತಾಯಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪುತ್ರನಿಂದ ದೂರು

ಕೊಡಗು: ಮತಾಂತರಕ್ಕೆ ಯತ್ನಿಸಿದ್ದ ಆರೋಪದಲ್ಲಿ ದಿಡ್ಡಳ್ಳಿ ಹೋರಾಟಗಾರ್ತಿ ಮುತ್ತಮ್ಮ ಪೊಲೀಸರ ವಶಕ್ಕೆ

Published On - 7:29 am, Tue, 26 October 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​