AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿರುವ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ – ಸಚಿವ ಆರ್​ ಅಶೋಕ

ನಗರದಲ್ಲಿ ಎಲ್ಲೆಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿದೆಯೋ ಅಂತಹ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿರುವ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ - ಸಚಿವ ಆರ್​ ಅಶೋಕ
ಕಂದಾಯ ಸಚಿವ ಆರ್ ಅಶೋಕ
TV9 Web
| Edited By: ವಿವೇಕ ಬಿರಾದಾರ|

Updated on:Aug 31, 2022 | 9:29 PM

Share

ಬೆಂಗಳೂರು: ನಗರದಲ್ಲಿ ಎಲ್ಲೆಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿದೆಯೋ ಅಂತಹ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ ಎಂದು ಬೆಂಗಳೂರಿನಲ್ಲಿ (Bengaluru) ಕಂದಾಯ ಸಚಿವ ಆರ್​.ಅಶೋಕ್ (R Ashok) ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಕಳೆದ ಬಾರಿ ಭೇಟಿ ಮಾಡಿದ ಸ್ಥಳಗಳಲ್ಲಿ ಕೆಲಸ ನಡೀತಿದೆ. ಮಹದೇವಪುರ, ಬೊಮ್ಮನಹಳ್ಳಿ ಭಾಗದಲ್ಲಿ ಅನಾಹುತವಾಗಿದೆ. ಹೊಸ ಕಾಲುವೆಗಳ ನಿರ್ಮಾಣ ಮಾಡಿ ನೀರು ಆಚೆ ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಮರ್ಸಿಲೆಸ್ಲಿ, ಎಷ್ಟೇ ಪ್ರಭಾವಿಯಾಗಿದ್ದರು ಮುಲಾಜಿಲ್ಲದೆ ಒತ್ತವರಿ ಮಾಡಿದರೆ ತೆರವು ಮಾಡುತ್ತೇವೆ. ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಅಡಿ ನೋಟಿಸ್ ಕೊಡುವ ಅವಶ್ಯಕತೆಯಿಲ್ಲ. ಎಷ್ಟೇ ಪ್ರಭಾವಿ ವ್ಯಕ್ತಿಯಾಗಿದ್ದರು ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಎಲ್ಲಾ ಕೆರೆಗಳು ತುಂಬಿ ಹೋಗಿವೆ. ಸರ್ಕಾರ ಯಾರ ಮನೆಗೆ ನೀರು ನುಗ್ಗಿದೆಯೊ ತೊಂದರೆ ಆಗಿದೆಯೊ ಅಂತವರಿಗೆ ಪರಿಹಾರ ನೀಡುತ್ತೆ. ಬೆಳೆ ಪರಿಹಾರ ಕೂಡ ನೀಡಲಾಗುತ್ತೆ. ಸೆಪ್ಟೆಂಬರ್ 3ನೇ ತಾರೀಖು ಹಾಸನ ತುಮಕೂರು ಮಂಗಳೂರು ಭಾಗದಲ್ಲಿ ಪ್ರವಾಸ ಮಾಡುತ್ತೇನೆ. ನೊಂದವರಿಗೆ ಸರ್ಕಾರ ಸಹಾಯ ಮಾಡಲಿದೆ. ಸಾರ್ವಜನಿಕರಲ್ಲಿ ವಿನಂತಿ ಮಾಡುತ್ತೇನೆ. ಬೇಸಿಗೆ ಬರದ ರೀತಿ ಮಳೆ ಬರತಾ ಇದ್ದು, ನಾಳೆ ಮುಖ್ಯಮಂತ್ರಿಗಳು ನೆರೆ ಬಂದು ಹಾನಿಯಾಗಿರೊ ಕಡೆ ಸಿಟಿಯಲ್ಲಿ ರೌಂಡ್ಸ್ ಮಾಡುತ್ತಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Wed, 31 August 22

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ