AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದು, ಇಂದು ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ. ಇನ್ನು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ
ವಿನಯ್​ ಕಾಶಪ್ಪನವರ್​
| Edited By: |

Updated on:Oct 30, 2025 | 8:05 PM

Share

ಬೆಂಗಳೂರು, ಅಕ್ಟೋಬರ್​ 30: ತೀವ್ರ ಜ್ವರ ಹಿನ್ನೆಲೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (thawar chand gehlot) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೈರಲ್ ಫೀವರ್​ ಹಿನ್ನೆಲೆ ಎರಡು ದಿನಗಳ ಹಿಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ರಾಜ್ಯಪಾಲರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ಮಧ್ಯಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಸರಣಿ ಕಾರ್ಯಕ್ರಮಗಳಲ್ಲಿ ಭಾಗಹಿಸಿದ್ದರು. ಹೀಗಾಗಿ ಆಯಾಸದಿಂದಾಗಿ ತೀವ್ರ ಜ್ವರ ಬಂದಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ದೇವೇಗೌಡ ಆಸ್ಪತ್ರೆಗೆ ದಾಖಲು: ತಂದೆಯನ್ನು ನೋಡಲು ದಿಲ್ಲಿಯಿಂದ ದೌಡಾಯಿಸಿದ ಕುಮಾರಸ್ವಾಮಿ

ಮೊದಲಿಗೆ ಬೆಂಗಳೂರಿನ ಓಲ್ಡ್ ಏರ್​ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ರಾಜ್ಯಪಾಲರು ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಹಿನ್ನೆಲೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:01 pm, Thu, 30 October 25

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!