AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ 30ರಷ್ಟು ಬೆಡ್​ಗಳನ್ನು ಮೀಸಲಿರಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ

Coronavirus 3rd Wave: ಜ.10ರ ಒಳಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಶೇ 75ರಷ್ಟು ಬೆಡ್​ಗಳನ್ನು ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಶೇ 30ರಷ್ಟು ಬೆಡ್​ಗಳನ್ನು ಮೀಸಲಿರಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 05, 2022 | 9:10 PM

Share

ಬೆಂಗಳೂರು: ಕೊರೊನಾ 3ನೇ ಅಲೆಯ ಭೀತಿ (Coronavirus 3rd Wave) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲ ಖಾಸಗಿ ಆಸ್ಪತ್ರೆ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ತಕ್ಷಣದಿಂದ ಶೇ 30ರಷ್ಟು ಬೆಡ್​ಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರವು ಸೂಚಿಸಿದೆ. ಜ.7ರ ಒಳಗೆ ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಬೆಡ್​ಗಳನ್ನು ಮೀಸಲಿಡಬೇಕು. ಜ.10ರ ಒಳಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಶೇ 75ರಷ್ಟು ಬೆಡ್​ಗಳನ್ನು ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಆರೋಗ್ಯ ಇಲಾಖೆಯಿಂದ ಶಿಫಾರಸಾಗುವ ರೋಗಿಗಳ ಚಿಕಿತ್ಸೆಗೆ ಈ ಬೆಡ್​ಗಳು ಮೀಸಲಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಡ್ಡಾಯ ಲಸಿಕೆಗೆ ಸೂಚನೆ ರಾಜ್ಯದಲ್ಲಿ ಕೊರೊನಾ ಸೊಂಕು ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಗೆ ಮಾರ್ಗಸೂಚಿ ನಿಯಮವನ್ನು ರೂಪಿಸಿ, ತಕ್ಷಣದಿಂದ ಜಾರಿಗೆ ತರುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಮಾಡಿದ್ದಾರೆ. ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ವಲಯದ ಎಲ್ಲ ಉದ್ಯೋಗಿಗಳು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಕೆಲಸದ ಸ್ಥಳದಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆಯಾಗುವುದನ್ನು. ಸ್ಥಳೀಯ ಕಾರ್ಮಿಕ ಅಧಿಕಾರಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಗಡಿ ಚೆಕ್​ಪೋಸ್ಟ್​ಗಳಿಗೆ ಡಿಸಿ, ಎಸ್​ಪಿ ದಿಢೀರ್ ಭೇಟಿ ಕಾರವಾರ: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಠಿಣ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇದರ ಭಾಗವಾಗಿ ಬುಧವಾರ ಗೋವಾ ಗಡಿಯ ಚೆಕ್​ಪೋಸ್ಟ್​ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಎಸ್ಪಿ ಸುಮನ್ ಪೆನ್ನೆಕರ್ ಕಾರವಾರದ ಮಾಜಾಳಿ ಚೆಕ್​ಪೋಸ್ಟ್​ಗೆ ದಿಢೀರ್ ಭೇಟಿ ನೀಡಿದರು. ನಾಳೆಯಿಂದ (ಜ.6) ಗೋವಾದಿಂದ ಕಾರವಾರಕ್ಕೆ ಬರುವವರಿಗೆ ಡಬಲ್ ಡೋಸ್ ಲಸಿಕೆ ಜತೆಗೆ ಆರ್​ಟಿಪಿಸಿರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಆರ್​ಟಿಪಿಸಿಆರ್ ಇಲ್ಲದೆ ಬಂದವರಿಗೆ ಕಾರವಾರಕ್ಕೆ ಪ್ರವೇಶ ಇರುವುದಿಲ್ಲ. ಗೋವಾದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಗಡಿಯಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ. ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್ ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಪ್ಯಾರಾಸೆಟಮಾಲ್ ಅಥವಾ ನೋವು ನಿವಾರಕ ಅಗತ್ಯವಿಲ್ಲ: ಭಾರತ್ ಬಯೊಟೆಕ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?